Gangavathi; ಹಾಡಹಗಲೇ ಚಿರತೆ ದಾಳಿ: ಆಕಳು ಮೃತ್ಯು
ವಿರೂಪಾಪೂರಗಡ್ಡಿ ಋಷಿಮುಖ ಪರ್ವತದಲ್ಲಿ ಘಟನೆ
Team Udayavani, Aug 18, 2023, 7:46 PM IST
ಗಂಗಾವತಿ :ಹಾಡಹಗಲೇ ಚಿರತೆ ದಾಳಿ ಮಾಡಿದ್ದರಿಂದ ಹಸು ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ವಿರುಪಾಪುರ ಗಡ್ಡಿ ಋಷಿಮುಖ ಪರ್ವತ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ.
ವಿರುಪಾಪುರ ಗಡ್ಡಿ ನಿವಾಸಿ ವಿರೂಪಣ್ಣ ಎಂಬುವರಿಗೆ ಸೇರಿದ ಹಸು ಋಷಿಮುಖ ಪರ್ವತ ಪ್ರದೇಶದಲ್ಲಿ ಮೇಯುವ ಸಂದರ್ಭದಲ್ಲಿ ಏಕಾಏಕಿ ಚಿರತೆ ದಾಳಿ ನಡೆಸಿದೆ.ಮಾಲಕರು ದಾಳಿ ನಡೆಸಿದ್ದನ್ನು ಕಂಡು ಕೂಗಾಡಿದ್ದರಿಂದ ಹಸುವನ್ನು ಗಂಭೀರವಾಗಿ ಗಾಯಗೊಳಿಸಿ ಚಿರತೆ ಪಲಾಯನ ಮಾಡಿದೆ. ಸ್ಥಳದಲ್ಲೇ ಹಸು ಮೃತಪಟ್ಟಿದೆ.ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಪಶುಸಂಗೋಪನ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಪರಿಹಾರಕ್ಕೆ ಆಗ್ರಹ: ಸುಮಾರು 50 ಸಾವಿರ ಮೌಲ್ಯದ ಹಸು ಸಾವನ್ನಪ್ಪಿದ್ದು ಅರಣ್ಯ ಇಲಾಖೆಯವರು ಹಸು ಕಳೆದುಕೊಂಡ ವ್ಯಕ್ತಿಗೆ ಕೂಡಲೇ ಪರಿಹಾರ ಕಲ್ಪಿಸುವಂತೆ ಗ್ರಾ.ಪಂ. ಸದಸ್ಯ ರಘುವರ್ಮ ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ .ಪದೇಪದೇ ಚಿರತೆ ಪ್ರತ್ಯಕ್ಷವಾಗುತ್ತಿದ್ದು ಪ್ರಮುಖ ಸ್ಥಳಗಳಲ್ಲಿ ಬೋನ್ ಗಳನ್ನು ಇಟ್ಟು ಚಿರತೆಗಳನ್ನು ಸೆರೆ ಹಿಡಿಯುವಂತೆ ಅವರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
MUST WATCH
ಹೊಸ ಸೇರ್ಪಡೆ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ