Gangavathi ನಗರಸಭೆ ಸಾಮಾನ್ಯಸಭೆ: ಶಾಸಕ ರೆಡ್ಡಿ ಅವರಿಂದ ಅಧಿಕಾರಿಗಳ ತರಾಟೆ

ಮೂರುದ ಶಕಗಳ ಒಳಚರಂಡಿ ಕಾಮಗಾರಿ ಬಗ್ಗೆ ಅಸಮಧಾನ, ಕ್ರಿಮಿನಲ್ ಕೇಸ್ ಎಚ್ಚರಿಕೆ

Team Udayavani, Jun 7, 2023, 8:38 PM IST

1——–asasdasd

ಗಂಗಾವತಿ: 1997 ರಲ್ಲಿ ಆರಂಭವಾಗಿರುವ ನಗರದ ಒಳಚರಂಡಿ ಮತ್ತು ನೀರು ಸರಬರಾಜು ಕಾಮಗಾರಿ ಇನ್ನೂ ಶೇ.50 ರಷ್ಟು ಸಹ ಪೂರ್ಣಗೊಂಡಿಲ್ಲ. ಇದರಿಂದ ಸಾರ್ವಜನಿಕರ ದುಡ್ಡು ನಷ್ಟವಾಗುತ್ತಿದ್ದು ಕಾಮಗಾರಿ ಗುತ್ತಿಗೆ ಪಡೆದ ಗುಜರಾತ್ ಮೂಲದ ಗುತ್ತಿಗೆದಾರ ಮತ್ತು ಒಳಚರಂಡಿ ಮತ್ತು ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ನೇರ ಹೊಣೆಯಾಗಲಿದ್ದಾರೆ. ಬೇಗನೆ ಕಾಮಗಾರಿ ಮುಗಿಸದಿದ್ದರೆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವ ಜತೆ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಜೈಲಿಗೆ ಕಳಿಸಲಾಗುತ್ತದೆ ಎಂದು ಶಾಸಕ ಗಾಲಿ ಜನಾರ್ದನರೆಡ್ಡಿ ಎಚ್ಚರಿಕೆ ನೀಡಿದರು.

ಅವರು ನಗರಸಭೆಯಲ್ಲಿ ಅಧಿಕಾರಿಗಳ ಸಾಮಾನ್ಯಸಭೆ ನಡೆಸಿ ಮಾತನಾಡಿದರು. ನಗರದ ಜನಸಂಖ್ಯೆ ಹೆಚ್ಚುತ್ತಿದ್ದು ಪೂರಕವಾಗಿ ರಸ್ತೆ, ಕುಡಿಯುವ ನೀರು, ಆಟದ ಮೈದಾನ, ಬಸ್ ನಿಲ್ದಾಣ, ಒಳಚರಂಡಿ ವ್ಯವಸ್ಥೆ ಹಾಗೂ ಬೀದಿ ದೀಪಗಳ ವ್ಯವಸ್ಥೆ ಮಾಡಬೇಕಾಗಿರುವ ಕರ್ತವ್ಯ ನಗರಸಭೆ ಆಡಳಿತ ಮಂಡಳಿಗೆ ಸೇರಿದೆ. ಕಳೆದ ಮೂರು ದಶಕಗಳಿಂದ ನಗರದಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದೂ ಯೋಜನಾ ಗಾತ್ರ ಶೇ.೧೦೦ ರಷ್ಟು ಹೆಚ್ಚಾಗಿದ್ದು ಮುಂದುವರಿದ ಕಾಮಗಾರಿ ನೆಪದಲ್ಲಿ ಗುತ್ತಿಗೆದಾರರು ಸರಕಾರ ಹಣ ಪಡೆಯುತ್ತಿದ್ದರೂ ಕಾಮಗಾರಿ ನಿಗದಿವಾಗಿ ಪೂರ್ಣಗೊಂಡಿಲ್ಲ. ಇದುವರೆಗೂ ಕೇವಲ 120 ಕಿ.ಮೀ.ಮಾತ್ರ ಒಳಚರಂಡಿ ಕಾಮಗಾರಿ ಮಾಡಿರೂ ಶೇ.50 ರಷ್ಟು ಮನೆಗಳಿಗೆ ಸಂಪರ್ಕ ಪೈಪ್ ಅಳವಡಿಸಿಲ್ಲ. ಇದರಿಂದ ನಗರದಲ್ಲಿ ಅನೈರ್ಮಲ್ಯಯುಂಟಾಗಿ ದುರುಗಮ್ಮನಹಳ್ಳಕ್ಕೆ ಬಳಸಿದ ನೀರು ಹರಿಸಲಾಗುತ್ತಿದೆ. ಕಿಷ್ಕಿಂಧಾ ಅಂಜನಾದ್ರಿ ಸೇರಿ ಗಂಗಾವತಿ ಸುತ್ತ ಐತಿಹಾಸಿಕ ಪ್ರವಾಸಿ ತಾಣಗಳಿದ್ದು ಇವುಗಳ ವೀಕ್ಷಣೆಗೆ ನಿತ್ಯವೂ ಸಾವಿರಾರು ಜನ ಪ್ರವಾಸಿಗರು ಆಗಮಿಸುವುದರಿಂದ ನಗರವನ್ನು ಸೌಂದರೀಕರಣ ಮಾಡಬೇಕು. ಒಳಚರಂಡಿ ಮತ್ತು ಶುದ್ಧಕುಡಿಯುವ ನೀರಿನ ಪೈಪ್ ಜೋಡಣೆ ಅರ್ಧಂಬರ್ಧ ಕಾಮಗಾರಿಯಾಗಿದ್ದು ತಾವು ವಿಧಾನಸಭಾ ಪ್ರಚಾರದ ಸಂದರ್ಭದಲ್ಲಿ ನಗರದ ಪ್ರತಿ ಓಣಿಯಲ್ಲಿ ಸಂಚಾರ ಮಾಡುವಾಗ ಜನರು ಈ ಸಮಸ್ಯೆ ಕುರಿತು ಗಮನಸೆಳೆದಿದ್ದಾರೆ. ಕೆಲವೇ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕು. ಇಲ್ಲದಿದ್ದರೆ ಕಾಮಗಾರಿ ಗುತ್ತಿಗೆ ಪಡೆದ ವ್ಯöಕ್ತಿ ಸೇರಿ ಒಳಚರಂಡಿ ಇಲಾಖೆಯ ಇಂಜಿನಿರ‍್ಸ್ ಮತ್ತು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ.ನಗರದ ಸರ್ವಾಂಣಗೀಣ ಪ್ರಗತಿಗೆ ಪಕ್ಷಾತೀತವಾಗಿ ಸದಸ್ಯರು ಯೋಜನೆ ರೂಪಿಸಿ ಅಗತ್ಯವಿರುವ ವಾರ್ಡುಗಳಿಗೆ ಎಲ್ಲಾ ಅನುದಾನ ನೀಡುವ ಮೂಲಕ ಹಂತಹಂತ ವಾಗಿ ಅಭಿವೃದ್ಧಿ ಕಾಮಗಾರಿ ಮಾಡಬೇಕು. ಕುಡಿಯುವ ನೀರು, ಕಸದ ಸ್ವಚ್ಛತೆ ಬಗ್ಗೆ ಹಲವು ದೂರುಗಳಿದ್ದು ಅಧಿಕಾರಿಗಳು ಸರಿಯಾಗಿ ಕಾರ್ಯ ಮಾಡಬೇಕು. ಅಮೃತಸಿಟಿ ಕಾಮಗಾರಿ, ಮಳೆ ಕೋಯ್ಲು, ಪಾರ್ಕ್ಗಳ ಅಭಿವೃದ್ಧಿ, ಸಾರ್ವಜನಿಕರು ಸಂಚರಿಸುವ ಪುಟ್‌ಪಾಟ್ ಒತ್ತುವರಿ ತೆರವು, ಸ್ಲಂ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಸರಕಾರದಿಂದ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗದವರಿಗೆ ವಿದ್ಯಾರ್ಥಿಗಳಿಗೆ ದೊರಕುವ ಸೌಲಭ್ಯಗಳನ್ನು ಆದ್ಯತೆ ಮೇರೆಗೆ ಎಲ್ಲರಿಗೂ ಸಿಗುವಂತೆ ನೋಡಿಕೊಳ್ಳಬೇಕು. ನಗರಸಭೆಯ ವ್ಯಾಪ್ತಿಯ ರೈಸ್ ಮಿಲ್, ಚಿತ್ರಮಂದಿರ, ಕಲ್ಯಾಣಮಂಟಪ, ವಾಣಿಜ್ಯ ಸಂಕಿರ್ಣಗಳು, ಮಳಿಗೆಗೆಗಳ ಬಾಡಿಗೆ ಹಾಗೂ ಸರಕಾರಿ ಕಚೇರಿಗಳು ಕ್ವಾಟರಸ್ ಗಳ ತೆರಿಗೆ ವಸೂಲಿಗೆ ಕ್ರಮಕೈಗೊಂಡು ನಗರಸಭೆಯ ಆರ್ಥಿಕ ಶಕ್ತಿ ವೃದ್ಧಿಸುವಂತೆ ಅಧಿಕಾರಿಗಳು ಕ್ರಮಕೈಗೊಂಡು ಕಾರ್ಯ ಮಾಡುವಂತೆ ಸೂಚನೆ ನೀಡಿದರು.

ನಗರದ ವ್ಯಾಪ್ತಿಯಲ್ಲಿರುವ ಖಾಸಗಿ ನೀರು ಶುದ್ಧೀಕರಣ ಮತ್ತು ಮಾರಾಟ ಮಾಡುವ ಘಟಕಗಳ ದಾಖಲಾತಿ ಪರಿಶೀಲಿಸಿ ಅಗತ್ಯ ತೆರಿಗೆ ವಿಧಿಸುವಂತೆ ನಗರಸಭೆ ಸದಸ್ಯ ಮೊಹಮದ್ ಉಸ್ಮಾನ್ ಬಿಚ್ಚಗತ್ತಿ ಗಮನ ಸೆಳೆದಾಗ ಶಾಸಕ ಗಾಲಿ ಜನಾರ್ದನರೆಡ್ಡಿ ಮಾತನಾಡಿ, ನಗರದಲ್ಲಿರುವ ಖಾಸಗಿ ಆರ್‌ಓ ಪ್ಲಾಂಟ್‌ಗಳೆಷ್ಟು ಎಷ್ಟು ಘಟಕಗಳು ನೋಂದಾಯಿಸಿಕೊಂಡು ನಗರಸಭೆಯಿಂದ ಪರವಾನಿಗೆ ಪಡೆದಿವೆ. ಪ್ರತಿ ವರ್ಷ ನವೀಕರಣ ಮಾಡಲಾಗುತ್ತಿದೆ. ನೀರನ್ನು ಪರೀಕ್ಷಿಸಿ ಸಾರ್ವನಿಕರಿಗೆ ವಿತರಣೆ ಮಾಡಲಾಗುತ್ತಿದೆ ಎನ್ನುವ ಕುರಿತು ಅಗತ್ಯ ಮಾಹಿತಿ ಸಂಗ್ರಹಿಸಿ ಅನಧಿಕೃತ ಆರ್‌ಓ ಪ್ಲಾಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಸರಕಾರದ ಸಹಾಯಧನದಲ್ಲಿ ನಿರ್ಮಾಣಗೊಂಡಿರುವ ಆರ್‌ಓ ಪ್ಲಾಂಟ್‌ಗಳ ನವೀಕರಣ ಮತ್ತು ಹೊಸ ಟೆಂಡರ್ ಕುರಿತು ಗಮನಹರಿಸುವಂತೆ ಸೂಚನೆ ನೀಡಿದರು.

ನಗರಸಭೆಯಲ್ಲಿ ಶಾಸಕ ಗಾಲಿ ಜನಾರ್ದನರೆಡ್ಡಿ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಕೆ ಆರ್ ಪಿ ಪಾರ್ಟಿ ಮುಖಂಡರು ಹಾಗೂ ನಗರಸಭೆಯ ಮಹಿಳಾ ಸದಸ್ಯರ ಪತಿರಾಯರು ಪಾಲ್ಗೊಂಡು ಪ್ರಗತಿಪರಿಶೀಲನೆಯ ಚರ್ಚೆಯಲ್ಲಿ ಭಾಗವಹಿಸಿ ಒಳಚರಂಡಿ ಹಾಗೂ ಶುದ್ಧ ಕುಡಿಯುವ ನೀರಿನ ಕಾಮಗಾರಿ ಚರ್ಚೆಯಲ್ಲಿ ಪಾಲ್ಗೊಂಡು ಕೆಲ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸೂಕ್ತ ಕ್ರಮ ಜರುಗಿಸುವಂತೆ ಶಾಸಕರಲ್ಲಿ ತಾಕೀತು ಮಾಡಿದರು. ಮಂಗಳವಾರ ಜರುಗಿದ್ದ ತಾ.ಪಂ.ಕೆಡಿಪಿ ಸಾಮಾನ್ಯ ಸಭೆಯಲ್ಲೂ ಕೆಆರ್ ಪಿ ಪಾರ್ಟಿಯ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡು ಅಧಿಕಾರಿಗಳನ್ನು ಮುಜುಗರಕ್ಕೀಡು ಮಾಡಿದ್ದರು.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.