Gangavathi ನಗರಸಭೆ ಸದಸ್ಯೆ ಬಿಜೆಪಿ-ಕೆಆರ್‌ಪಿ ಪಕ್ಷಾಂತರ ರಾಜಕೀಯ!


Team Udayavani, Jun 26, 2023, 6:32 PM IST

1-sasadsa

ಗಂಗಾವತಿ: ನಗರಸಭೆಯ 30 ನೇ ವಾರ್ಡಿನ ಬಿಜೆಪಿ ಸದಸ್ಯೆ ಸುಚೇತಾ ಶಿರಿಗೇರಿ ನಿವಾಸಕ್ಕೆ ಸೋಮವಾರ ಬೆಳಗ್ಗೆ ಶಾಸಕ ಹಾಗೂ ಕೆಆರ್‌ಪಿ ಪಾರ್ಟಿ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಭೇಟಿ ನೀಡಿ ಉಪಹಾರ ಸೇವಿಸಿ ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು. ಇದರ ಬೆನ್ನೆಲ್ಲೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಶಿರಿಗೇರಿಯವರ ನಿವಾಸಕ್ಕೆ ತೆರಳಿ ಯಾವುದೇ ಕಾರಣಕ್ಕೂ ಬಿಜೆಪಿ ತ್ಯಜಿಸದಂತೆ ಮನವಿಯ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿಯೇ ಮುಂದುವರಿಲು ಸುಚೇತನ ಶಿರಿಗೇರಿ ನಿರ್ಧರಿಸಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಿದ್ದು ಗೊಂದಲಕ್ಕೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.

ಮೊದಲು ಕೆಆರ್‌ಪಿ
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ನಗರಸಭೆ ಸದಸ್ಯೆ ಸುಚೇತ ಶಿರಿಗೇರಿ ಸೋಮವಾರ ಕೆಆರ್‌ಪಿ ಪಕ್ಷ ಸೇರ್ಪಡೆಗೊಂಡರು.ಶಾಸಕ ಗಾಲಿ ಗಾಲಿ ಜನಾರ್ದನ ರೆಡ್ಡಿ ಸುಚೆತಾ ಶಿರಿಗೇರಿ ಅವರನ್ನು ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನಗರದ ರಾಜಕೀಯ ಚಟುವಟಿಕೆಗಳ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಮನೋಹರ ಗೌಡ ಹೇರೂರು, ಮುಖಂಡರಾದ ಪಂಪಾಪತಿ ಸಿಂಗನಾಳ, ಸಂಜಯ ಬೆಟಗೇರಿ, ಪ್ರಕಾಶ್ ರೆಡ್ಡಿ, ಕಾಶಿನಾಥ ಸಿರಿಗೆರೆ, ವೀರೇಶ್ ಬಲಕುಂದಿ, ಯಮನೂರು ಚೌಡಕಿ, ರಾಜೇಶ್ ರೆಡ್ಡಿ ಇದ್ದರು.

ಬಿಜೆಪಿ ಮುಖಂಡರ ಭೇಟಿ
ಸುಚೇತಾ ಶಿರಿಗೇರಿ ಕೆಆರ್ ಪಿ ಪಕ್ಷ ಸೇರ್ಪಡೆಯ ಸುದ್ದಿ ಹಿನ್ನೆಲೆಯಲ್ಲಿ ಶಿರಿಗೇರಿಯವರ ನಿವಾಸಕ್ಕೆ ಮಾಜಿ ಶಾಸಕ ಪರಣ್ಣ ಮುನವಳ್ಳಿಯವರು, ನಗರಸಭೆ ಸದಸ್ಯರು ಹೋಗಿ ವಿಚಾರಿಸಿದಾಗ ನಮ್ಮ ವಾರ್ಡಿಗೆ ತಮ್ಮ ಬೆಂಬಲಿಗರೊಂದಿಗೆ ಶಾಸಕ ಗಾಲಿ ಜನಾರ್ದನರೆಡ್ಡಿ ವಾರ್ಡಿನ ಕೆಲ ಸಮಸ್ಯೆಗಳನ್ನು ಆಲಿಸಲು, ಹಾಗೇ ಅಭಿವೃದ್ಧಿ ವಿಷಯವಾಗಿ ನಮ್ಮ ಮನೆಗೆ ಮಾತನಾಡಲು ಬಂದಿದ್ದು ಆ ಕ್ಷಣದಲ್ಲಿ ಅಚಾತುರ್ಯದಿಂದ ಹಾಗೂ ಅವಸರವಸರವಾಗಿ ನನಗೆ ಅವರ ಪಕ್ಷದ ಶಾಲು ಹಾಕಿ ಫೋಟೋ ತೆಗೆಸಿಕೊಂಡಿದ್ದಾರೆ. ಹೊರತು ನಾನು ಬಿಜೆಪಿ ಪಕ್ಷ ಬಿಟ್ಟು ಹೋಗಿಲ್ಲ ಮುಂದೆಯೂ ಹೋಗುವದಿಲ್ಲ ಎಂದು ಸ್ಪಷ್ಟ ಪಡಿಸಿದರು.

ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡರಾದ ಕಾಶಿನಾಥ ಚಿತ್ರಗಾರ, ನವೀನ್ ಮಾಲಿಪಾಟೀಲ, ವಾಸುದೇವ ನವಲಿ, ಉಮೇಶ ಸಿಂಗನಾಳ, ಪರಶುರಾಮ ಮಡ್ಡೇರ್ ರಾಘವೇಂದ್ರ ಶೆಟ್ಟಿ, ಶಿವಕುಮಾರ ಅರಿಕೇರಿ, ಜೋಗದ ಹನುಮಂತಪ್ಪ ನಾಯಕ, ಹೊಸಮಲಿ ಮಲ್ಲೇಶಪ್ಪ, ಚೌಡ್ಕಿ ಹನುಮಂತಪ್ಪ, ವೀರಭದ್ರಪ್ಪ ನಾಯಕ, ಟಿ.ಆರ್ ರಾಯಬಾಗಿ, ಮಹೇಶ ಜವಳಿ, ಸಂಗಮೇಶ ಪತ್ತಾರ, ಶ್ರೀನಿವಾಸ ಧೂಳ ಇದ್ದರು.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.