ಗಂಗಾವತಿ: ಕಿಷ್ಕಿಂಧಾ ಅಂಜನಾದ್ರಿಗೆ ಜಗ್ಗಿ ವಾಸುದೇವ ಮಹಾಯೋಗಿಗಳನ್ನು ಆಹ್ವಾನಿಸಿದ ಶಾಸಕ ಮುನವಳ್ಳಿ
Team Udayavani, Jan 9, 2023, 10:16 AM IST
ಗಂಗಾವತಿ: ಐತಿಹಾಸಿಕ ಪ್ರಸಿದ್ಧ ರಾಮಾಯಣದ ಪ್ರಮುಖ ಸ್ಥಳವಾಗಿರುವ ಕಿಷ್ಕಿಂಧಾ ಅಂಜನಾದ್ರಿಗೆ ಆಗಮಿಸುವಂತೆ ಈಶ ಫೌಂಡೇಶನ್ ಪೂಜ್ಯ ಜಗ್ಗಿ ವಾಸುದೇವ ಮಹಾಯೋಗಿಗಳನ್ನು ಶಾಸಕ ಪರಣ್ಣ ಮುನವಳ್ಳಿ ಆಹ್ವಾನಿಸಿದರು.
ಹಿಂದೂಗಳ ಶಕ್ತಿ ಮತ್ತು ಪವಿತ್ರ ಭೂಮಿಯಾಗಿರುವ ಕಿಷ್ಕಿಂಧಾ ಅಂಜನಾದ್ರಿಗೆ ನಿತ್ಯವೂ ಸಾವಿರಾರು, ದೇಶ-ವಿದೇಶಗಳ ಭಕ್ತರು ಆಗಮಿಸುತ್ತಿದ್ದು, ಸರಕಾರ ಭಕ್ತರಿಗೆ ಮೂಲಸೌಕರ್ಯ ಕಲ್ಪಿಸಲು ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಯೋಜನೆ ರೂಪಿಸಿದ್ದು, ಈ ಕೆಲಸ ಕಾರ್ಯಗಳಿಗೆ ಮಾರ್ಗದರ್ಶನ ಮಾಡಲು ಮತ್ತು ಈ ಕ್ಷೇತ್ರಕ್ಕೆ ಇನ್ನಷ್ಟು ಕಳೆ ಬರುವಂತಾಗಲು ತಾವು ಭೇಟಿ ನೀಡುವಂತೆ ಮನವಿ ಮಾಡಿದರು.
ಜಗ್ಗಿ ವಾಸುದೇವ ಮಹಾಯೋಗಿಗಳು ಪ್ರತಿಕ್ರಿಯಿಸಿ ಸಮಯ ನೋಡಿಕೊಂಡು ಕಿಷ್ಕಿಂಧಾ ಅಂಜನಾದ್ರಿಗೆ ಆಗಮಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್ ಅಳಿಯ ಗೌರಾ ಬಸವರಾಜ, ಸಿಂಗನಾಳ ವಿರೂಪಾಕ್ಷಪ್ಪ, ಅಮರಜ್ಯೋತಿ ನರಸಪ್ಪ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ