ಗಂಗಾವತಿ: ನಗರಸಭೆ ಬಜೆಟ್; ಪೂರ್ವಭಾವಿ ಸಭೆ

ನಗರದಲ್ಲಿರುವ ಆಸ್ತಿಗಳ ಸರ್ವೇ ಹಾಗೂ ಅನಧಿಕೃತ ಲೇಔಟ್‌ಗಳಲ್ಲಿ ತೆರಿಗೆ ವಸೂಲಿಗೆ ಕ್ರಮ ಅಗತ್ಯ

Team Udayavani, Jan 17, 2023, 10:47 AM IST

6-gangavathi

ಗಂಗಾವತಿ: ವಾಣಿಜ್ಯವಾಗಿ ಬೆಳೆದಿರುವ ಗಂಗಾವತಿ ನಗರದ ಆದಾಯ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿರಬೇಕಿತ್ತು. ತೆರಿಗೆ ಪಾವತಿಸುವ ನಿಯಮಗಳ ಉಲ್ಲಂಘನೆ ಇಲ್ಲಿ ನಿರಂತರವಾಗಿ ನಡೆಯುತ್ತಿದ್ದು, ಶೇ.60-70 ರಷ್ಟು ಮಾತ್ರ ತೆರಿಗೆ ವಸೂಲಿಯಾಗುತ್ತಿದ್ದು, ರೈಸ್‌ಮಿಲ್, ಲಾಡ್ಜ್, ಚಿತ್ರಮಂದಿರ, ಖಾಸಗಿ ಶಾಲಾ-ಕಾಲೇಜುಗಳ ಕೋಟ್ಯಾಂತರ ರೂ. ತೆರಿಗೆ ಬಾಕಿ ಉಳಿಸಿರುವ ಕುರಿತು ಧಾರವಾಡ ಹೈಕೋರ್ಟ್ ನಲ್ಲಿ ವ್ಯಾಜ್ಯ ಪರಿಹಾರವಾಗಿದ್ದು, ಇನ್ನೂ ಮುಂದೆ ತೆರಿಗೆ ವಸೂಲಿಗೆ ತಂಡಗಳನ್ನು ರಚಿಸಿ ವಸೂಲಿಗೆ ಕಟ್ಟುನಿಟ್ಟಿನಿಂದ ಮಾಡಲಾಗುತ್ತದೆ ಎಂದು ಪೌರಾಯುಕ್ತ ವಿರೂಪಾಕ್ಷ ಮೂರ್ತಿ ತಿಳಿಸಿದರು.

ಅವರು ನಗರಸಭೆಯ ಸಭಾಂಗಣದಲ್ಲಿ ಬಜೆಟ್ ಪೂರ್ವ ಸಲಹಾ ಸಭೆಯಲ್ಲಿ ಪತ್ರಕರ್ತರು ಸಾರ್ವಜನಿಕರು ಮತ್ತು ನಗರಸಭೆ ಹಾಲಿ ಮಾಜಿ ಸದಸ್ಯರ ಸಲಹೆ ಸ್ವೀಕರಿಸಿ ಮಾತನಾಡಿದರು.

ನಗರದಲ್ಲಿ 2021ರ ಜನಗಣತಿ ಪ್ರಕಾರ 29 ಸಾವಿರ ಆಸ್ತಿಗಳಿದ್ದು, ಅಧಿಕೃತ ಲೇಔಟ್‌ಗಳಲ್ಲಿ ಸುಮಾರು 15 ಸಾವಿರ ಆಸ್ತಿಗಳಿವೆ ಅವುಗಳಿಂದ ತೆರಿಗೆ ವಸೂಲಿ ಮಾಡಬಹುದಾಗಿದೆ. ಸರಕಾರದ ನಿಯಮಾನುಸಾರ ಅನಧಿಕೃತ ಲೇಔಟ್‌ಗಳಲ್ಲಿ ತೆರಿಗೆ ವಸೂಲಿಗೆ ಕ್ರಮ ವಹಿಸಲಾಗುತ್ತದೆ. ಶೀಘ್ರವೇ ನಗರಸಭೆ ಮತ್ತು ನಗರಯೋಜನಾ ಪ್ರಾಧಿಕಾರದ ಅಧಿಕಾರಿಗಳು ಜಂಟಿಯಾಗಿ ಇಡೀ ನಗರವನ್ನು ಸರ್ವೇ ಮಾಡಿ ಅಧಿಕೃತ, ಅನಧಿಕೃತ ಆಸ್ತಿಗಳ ಪತ್ತೆ ಕಾರ್ಯ ಮಾಡಲಾಗುತ್ತದೆ ಎಂದರು.

ನಗರಸಭೆಯ ಇನ್ನೊಂದು ಆದಾಯದ ಪ್ರಮುಖ ಮೂಲ ವಾಣಿಜ್ಯ ಲೈಸೆನ್ಸ್ (ಟ್ರೇಡ್) ಕೇವಲ ಶೇ.20 ರಷ್ಟಿದ್ದು ಶೇ.80 ರಷ್ಟು ವಾಣಿಜ್ಯ ವ್ಯವಹಾರ ಲೈಸೆನ್ಸ್ ಇಲ್ಲದೇ ನಡೆಯುತ್ತಿದೆ. ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಇಲಾಖೆಗಳ ಕಚೇರಿ ಮತ್ತು ನೌಕರರ ವಸತಿ ಗೃಹಗಳಲ್ಲಿ ನಗರಸಭೆ ನಳ ಹಾಗೂ ಸ್ವಚ್ಛತೆ ಕಾರ್ಯ ನಿರಂತರವಾಗಿ ನಡೆಯುತ್ತಿದ್ದರೂ ಕೋಟ್ಯಾಂತರ ರೂ. ತೆರಿಗೆ ಬಾಕಿ ಇದ್ದು ವಸೂಲಿಗೆ ಕ್ರಮ ವಹಿಸಲಾಗುತ್ತದೆ ಎಂದರು.

ಜಾಹೀರಾತು ಫಲಕ ಮತ್ತು ಬಂಟಿಂಗ್ಸ್, ನಿಂದ ಇದುವರೆಗೂ ಆದಾಯ ಸೋರಿಕೆಯಾಗುತ್ತಿತ್ತು. ಸರಕಾರದ ಕಟ್ಟುನಿಟ್ಟಿನ ನಿಯಮ ಪಾಲನೆ ಮೂಲಕ ಇವುಗಳಿಂದ ಆದಾಯವನ್ನು ನಿರೀಕ್ಷೆ ಮಾಡಲಾಗುತ್ತದೆ. ಬ್ಯಾರ‍್ಸ್ ಮತ್ತು ಬಂಟಿಂಗ್ಸ್ ಪ್ರಿಂಟ್ ಮಾಡುವ ಮುಂಚೆ ನಗರಸಭೆಯ ಪರವಾನಿಗೆಯನ್ನು ನೋಡಬೇಕು ಇಲ್ಲದಿದ್ದರೆ ಮುದ್ರಣ ಮಾಡುವವರ ವಿರುದ್ಧ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.

ಕೆಲವರು ರೈಸ್ ಮಿಲ್ ಹಾಗೂ ಚಿತ್ರಮಂದಿರಗಳನ್ನು ಮಾಲ್ ಹಾಗೂ ಗೋಡೌನಗಳಾಗಿ ಪರಿವರ್ತಿಸುತ್ತಿದ್ದು, ಇದಕ್ಕೆ ನಗರಸಭೆ ಪರವಾನಿಗೆ ಅಗತ್ಯವಾಗಿದ್ದು ನಿಯಮ ಉಲ್ಲಂಘಿಸಿದವರನ್ನು ಪತ್ತೆ ಮಾಡಿ ಕ್ರಮ ಜರುಗಿಸಲಾಗುತ್ತದೆ ಎಂದರು.

ಅಧಿಕೃತ ಲೇಔಟ್‌ಗಳಲ್ಲಿ ಶೇ.100 ರಷ್ಟು ಅಭಿವೃದ್ಧಿ ಮಾಡಿದವರಿಗೆ ಎಲ್ಲಾ ನಿವೇಶನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಕಳೆದ ಹಲವು ವರ್ಷಗಳಿಂದ ಅನಧಿಕೃತ ಲೇಔಟ್‌ಗಳ ನಿವೇಶನಗಳನ್ನು 20 ರೂ.ಗಳ ಬಾಂಡ್ ಮೇಲೆ ನೊಂದಣಿ ಮಾಡಿದ್ದರೂ ಖಾತೆ ಮಾಡಲಾಗಿದ್ದು ಇದು ನಿಯಮಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು.

ಇನ್ನೂ ಅಧಿಕೃತ ಲೇಔಟ್ ಗಳಲ್ಲಿ ಶೇ.100 ರಷ್ಟು ಅಭಿವೃದ್ಧಿ ಮಾಡದೇ ಇದ್ದರೂ ನಗರಸಭೆಯಲ್ಲಿ ಖಾತೆ ಮಾಡಲಾಗಿದೆ. ಇಂತಹ ಪ್ರಕರಣಗಳನ್ನು ಪತ್ತೆ ಮಾಡಿ ಕ್ರಮ ಜರುಗಿಸಲಾಗುತ್ತದೆ. ಮಳಿಗೆ, ಬಾಡಿಗೆ, ಟ್ರೇಡ್ ಲೈಸೆನ್ಸ್, ನೀರಿನ ಕರ, ಮನೆ ನಿರ್ಮಾಣ ತೆರಿಗೆ, ಸೇರಿ ಒಟ್ಟಾರೆ ನಗರಸಭೆಗೆ ವಾರ್ಷಿಕ ಆದಾಯ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸಲಹೆಗಳು ಬಂದಿದ್ದು ಆಡಳಿತ ಮಂಡಳಿಯ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಪೂರ್ವಭಾವಿ ಸಭೆಯಲ್ಲಿ ಪೌರಾಯುಕ್ತ ವಿರೂಪಾಕ್ಷ ಮೂರ್ತಿ, ಸ್ಥಾಯಿ ಸಮಿತಿ ಚೇರಮನ್ ಜಬ್ಬಾರ್ ಖಾನ್, ನಗರ ಯೋಜನಾ ಪ್ರಾಧಿಕಾರದ ಸದಸ್ಯ ಶಿವಪ್ಪ ಪೂಜಾರಿ, ಪತ್ರಕರ್ತರಾದ ಕೆ.ನಿಂಗಜ್ಜ, ಪ್ರಸನ್ನ ದೇಸಾಯಿ, ವೀರಾಪೂರ ಕೃಷ್ಣ, ಗಂಗಲ ತಿರುಪಾಲಯ್ಯ, ದೇವದಾನಂ, ನಗರಸಭೆ ಸದಸ್ಯರಾದ ಪರಶುರಾಮ ಮಡ್ಢೇರ, ವಾಸುದೇವ ನವಲಿ, ಉಮೇಶ ಸಿಂಗನಾಳ, ರಮೇಶ ಚೌಡ್ಕಿ, ಮೌಲಸಾಬ,ಮೊಹಮದ್ ಉಸ್ಮಾನ್ ಸೇರಿ ನಗರಸಭೆಯ ಕಂದಾಯ, ನೈರ್ಮಲ್ಯ, ಲೆಕ್ಕಪತ್ರ ಸೇರಿ ಹಲವು ವಿಭಾಗದ ಅಧಿಕಾರಿಗಳು ನೌಕರರಿದ್ದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.