Gangavathi: ಕಾಲುವೆ ನೀರು ಹರಿಸದಿದ್ದರೆ ರೈತರ ಜತೆಗೂಡಿ ಹೋರಾಟ
ಸರ್ಕಾರದ ನಿರ್ಲಕ್ಷ್ಯ ಎಡದಂಡೆ ಕಾಲುವೆ ಎಸ್ಕೇಪ್ ಕ್ರಸ್ಟ್ ಗೇಟ್ ದುರಸ್ಥಿ ವಿಳಂಬ
Team Udayavani, Jul 27, 2023, 1:08 PM IST
ಗಂಗಾವತಿ: ತುಂಗಭದ್ರಾ ಡ್ಯಾಂ ಒಳಹರಿವು ಹೆಚ್ಚಿದ್ದು, ಅಚ್ಚುಕಟ್ಟು ರೈತರು ಭತ್ತ ನಾಟಿ ಮಾಡಲು ಸಿದ್ಧತೆ ನಡೆಸಿದ್ದು, ಈ ಸಂದರ್ಭದಲ್ಲಿ ಶಿವಪೂರ ಬೋರುಕಾ ಎಸ್ಕೇಪ್ ಕ್ರಸ್ಟ್ ಗೇಟ್ ದುರಸ್ಥಿ ಆರಂಭಿಸಿದ್ದು, ಹಲವು ಅನುಮಾನಗಳನ್ನು ಹುಟ್ಟಿಸಿದೆ. ಕೂಡಲೇ ಕಾಲುವೆಗೆ ನೀರು ಹರಿಸದಿದ್ದರೆ ರೈತರ ಜತೆಗೂಡಿ ಹೋರಾಟ ನಡೆಸಲಾಗುತ್ತದೆ ಎಂದು ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿದರು
ಅವರು ಜು. 27ರ ಗುರುವಾರ ಬೆಳ್ಳಿಗ್ಗೆ ಶಿವಪೂರ ಬೋರುಕಾ ಎಸ್ಕೇಪ್ ಕ್ರಸ್ಟ್ ಗೇಟ್ ದುರಸ್ಥಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ನೀರಾವರಿ ಸಲಹಾ ಸಮಿತಿ ರಚನೆ ಬಗ್ಗೆ ಸಿಎಂ ಬಳಿ ಮಾತನಾಡುವುದಾಗಿ ಹೇಳಿರುವುದು ಸರಿಯಲ್ಲ. ತುಂಗಭದ್ರಾ ಡ್ಯಾಂ ಬೈಲಾ ಪ್ರಕಾರ ಐಸಿಸಿ ಖಾಯಂ ಆಗಿರುತ್ತದೆ. ಅಚ್ಚುಕಟ್ಟು ಪ್ರದೇಶದ ಶಾಸಕರು, ಎಂಎಲ್ಸಿಗಳು, ಸಂಸದರು, ಕೃಷಿ ಇಲಾಖೆ ಅಯಾ ಜಿಲ್ಲಾಧಿಕಾರಿಗಳು ಐಸಿಸಿ ಸದಸ್ಯರಾಗಿರುತ್ತಾರೆ. ಪ್ರಸ್ತುತ ಉತ್ತಮ ಮಳೆಯಾಗುತ್ತಿದ್ದು ಬೇಗನೆ ಕಾಲುವೆಗಳಿಗೆ ನೀರು ಹರಿಸಬೇಕು. ಆಗಷ್ಟ್ ತಿಂಗಳಲ್ಲಿ ಭತ್ತ ನಾಟಿ ಮಾಡಲು ಅನುಕೂಲವಾಗಿದ್ದು ಬೇಗನೆ ನೀರು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ತರಾಟೆಗೆ: ಕಾಲುವೆ ಕಾಮಗಾರಿ ಸ್ಥಳಕ್ಕೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಭೇಟಿ ನೀಡಿದ ಸಂದರ್ಭದಲ್ಲಿ ಜಲಸಂಪನ್ಮೂಲ ಇಲಾಖೆಯ ಇಂಜಿನಿಯರಿಂಗ್ ಗೆ ಮೊಬೈಲ್ ಕರೆ ಮಾಡಿ ಕಾಲುವೆಗೆ ನೀರು ಬಿಡುವಾಗ ಎಸ್ಕೇಪ್ ಕ್ರಸ್ಟ್ ಗೇಟ್ ದುರಸ್ತಿ ಮಾಡುತ್ತಿದ್ದು ಇದರಿಂದಾಗಿ ಭತ್ತದ ನಾಟಿ ಮಾಡುವ ಕಾರ್ಯ ವಿಳಂಬವಾಗುವ ಸಾಧ್ಯತೆ ಇದ್ದು, ಇದರಿಂದ ರೈತರಿಗೆ ತೊಂದರೆಯಾಗುತ್ತದೆ ಕೂಡಲೇ ನೀರು ಬಿಡಲು ಕ್ರಮಕೈಗೊಳ್ಳುವಂತೆ ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ಕೆ.ಆರ್.ಪಿ. ಪಕ್ಷದ ಜಿಲ್ಲಾಧ್ಯಕ್ಷ ಮನೋಹರ ಗೌಡ, ಯಮನೂರಚೌಡ್ಕಿ, ಹುಸೇನಬಾಷಾ ಸೇರಿ ರೈತ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ