ಕಡೆಬಾಗಿಲು ವೃತ್ತಕ್ಕೆ ಶ್ರೀರಂಗದೇವರಾಯಲು ನಾಮಕರಣ ಸಾರ್ಥಕ: MLA ಗಾಲಿ ಜನಾರ್ದನ ರೆಡ್ಡಿ


Team Udayavani, Sep 18, 2023, 3:10 PM IST

23–gangavathi

ಗಂಗಾವತಿ: ಕಡೆಬಾಗಿಲು ವೃತ್ತಕ್ಕೆ ರಾಜಮನೆತನದ ಮಾಜಿ ಸಚಿವ ರಾಜಾ ಶ್ರೀರಂಗದೇವರಾಯಲು ಎಂದು ನಾಮಕರಣ ಮಾಡುವ ಮೂಲಕ ಆನೆಗೊಂದಿ ಗ್ರಾ.ಪಂ. ಆಡಳಿತ ಮಂಡಳಿ ಅತ್ಯುತ್ತಮ ಕಾರ್ಯ ಮಾಡಿದೆ. ಮುಂಬರುವ ದಿನಗಳಲ್ಲಿ ಶ್ರೀರಂಗದೇವರಾಯಲು ಆಳೆತ್ತರದ ಪುತ್ಥಳಿ ಪ್ರತಿಷ್ಠಾಪಿಸಲಾಗುತ್ತದೆ ಎಂದು ಶಾಸಕ ಗಾಳಿ ಜನಾರ್ದನರೆಡ್ಡಿ ಹೇಳಿದರು.

ಅವರು ತಾಲೂಕಿನ ಕಡೆಬಾಗಿಲು ಕ್ರಾಸ್ ನಲ್ಲಿ ವೃತ್ತದಲ್ಲಿ ಶ್ರೀರಂಗದೇವರಾಯಲು ವೃತ್ತದ ನೂತನ ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು.

ಶ್ರೀರಂಗದೇವರಾಯಲು ಐದು ಭಾರಿ ಶಾಸಕರಾಗಿ ಸಚಿವರಾಗಿ ಮತ್ತು ರಾಜಮನೆತನದವರಾಗಿ ಯಾವುದೇ ಆಹಂಕಾರ ಇರದ ಸರಳ ವ್ಯಕ್ತಿತ್ವವನ್ನು ರೂಪಿಸಿಕೊಂಡಿದ್ದ ಮಹಾನ್ ವ್ಯಕ್ತಿಯಾಗಿದ್ದರು. ಕಡೆಬಾಗಿಲು ವೃತ್ತಕ್ಕೆ ಅವರ ಹೆಸರು ನಾಮಕರಣ ಮಾಡಿದ್ದು ಅತ್ಯುತ್ತಮವಾಗಿದೆ. ಶೀಘ್ರವೇ ಪುತ್ಥಳಿ ನಿರ್ಮಿಸುವ ಕಾರ್ಯ ನಡೆಯಲಿದೆ ಎಂದರು.

ಈ ಭಾರಿಯ ಆನೆಗೊಂದಿ ಉತ್ಸವದಲ್ಲಿ ಶ್ರೀರಂಗದೇವರಾಯಲು ಜೀವನ ಚರಿತ್ರೆಯ ಪುಸ್ತಕವನ್ನು ಪ್ರಕಟಿಸುವ ಕುರಿತು ಅವರ ಕುಟುಂಬ ಹಾಗೂ ಬರಹಗಾರರ ಜತೆ ಮಾತನಾಡನಾಡಲಾಗುವುದು. ಆನೆಗೊಂದಿ ಭಾಗದ ರಸ್ತೆ ಸೇರಿ ಮೂಲ ಸೌಕರ್ಯಕ್ಕೆ 200 ಕೋಟಿ ಯೋಜನೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಲ್ಲಿ 70 ಕೋಟಿ ರೂ.ಗಳಲ್ಲಿ ರಸ್ತೆ ನಿರ್ಮಿಸಲಾಗುತ್ತದೆ. ಇನ್ನೂ ವಿಶ್ವ ವಿಖ್ಯಾತ ಕಿಷ್ಕಿಂಧಾ ಅಂಜನಾದ್ರಿ ಅಭಿವೃದ್ಧಿಯ ಮೂಲಕ ಪ್ರವಾಸೋದ್ಯಮ ಬೆಳೆಸಲಾಗುತ್ತದೆ. ಇದರಿಂದ ನೇರ ಪರೋಕ್ಷ ಉದ್ಯೋಗ ಸೃಷ್ಠಿಯಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜಮನೆತನದ ಲಲಿತಾರಾಣಿ ಶ್ರೀರಂದೇವರಾಯಲು, ನರಸಿಂಗ ದೇವರಾಯಲು,ಕುಪ್ಪರಾಜು, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಗ್ರಾ.ಪಂ.ಅಧ್ಯಕ್ಷೆ ಕೆ.ಮಹಾದೇವಿ ತಿಮ್ಮಪ್ಪ ಬಾಳೆಕಾಯಿ, ಉಪಾಧ್ಯಕ್ಷೆ ಸುಶೀಲಾಬಾಯಿ, ಜಿ.ಪಂ. ಮಾಜಿ ಸದಸ್ಯ ಎಚ್.ಎಂ.ಸಿದ್ದರಾಮಯ್ಯಸ್ವಾಮಿ, ಮುಖಂಡರಾದ ರಾಜೇಶ್ವರಿ ಸುರೇಶ, ತಿಪ್ಪೇರುದ್ರಸ್ವಾಮಿ, ಮನೋಹರಗೌಡ, ಅಮರಜ್ಯೋತಿ ನರಸಪ್ಪ, ಯಮನೂರ ಚೌಡ್ಕಿ, ಟಿ.ಜಿ.ಬಾಬು, ನರಸಿಂಹಲು, ಟಿ.ಸತ್ಯನಾರಾಯಣ, ಸಿ.ರಾಮಕೃಷ್ಣ, ಜಾನಕೀ ರಾಮ, ತಿರುಕಪ್ಪ, ಗೂಗಿಬಂಡಿ ಸುಬ್ಬಾರಾವ್, ವೀರಭದ್ರಪ್ಪ ನಾಯಕ, ಜೋಗದ ನಾರಾಯಣಪ್ಪ ನಾಯಕ, ಹನುಮಂತಪ್ಪ ನಾಯಕ, ಸಂಕ್ರಾಂತಿ ವೆಂಕಟೇಶ್ವರ ರಾವ್, ಕೋಡಿ ನಾಗೇಶ, ರಾಘವೇಂದ್ರಶೆಟ್ಟಿ, ಸುಂಕದ ಚಂದ್ರಶೇಖರ, ಫಕೀರಯ್ಯ, ಅಯ್ಯಪ್ಪ, ಡಾ.ಸೋಮರಾಜು, ಪಿಡಿಒ ಕೆ.ಕೃಷ್ಣಪ್ಪ ಸೇರಿ ಆನೆಗೊಂದಿ, ಸಂಗಾಪೂರ, ಸಾಣಾಪೂರ, ಮಲ್ಲಾಪೂರ ಗ್ರಾ.ಪಂ. ವ್ಯಾಪ್ತಿಯ ಗ್ರಾಮಸ್ಥರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.