ವಾಣಿಭದ್ರೇಶ್ವರನಿಗೆ ಶ್ರಾವಣ ಮಾಸದ ವಿಶೇಷ ಪೂಜೆ
Team Udayavani, Aug 24, 2022, 5:43 PM IST
ಗಂಗಾವತಿ: ಶ್ರಾವಣ ಮಾಸದಲ್ಲಿ ಪ್ರತಿಯೊಬ್ಬರೂ ಮನೆ ದೇವರುಗಳ ದರ್ಶನ ಪಡೆದು ಪುನೀತರಾಗುವ ಮೂಲಕ ಆದ್ಯಾತ್ಮದಿಂದ ಉತ್ತಮ ಕಾರ್ಯ ಮಾಡುವಂತೆ ಬಿಜೆಪಿ ಮುಖಂಡ ಎಚ್.ಆರ್.ಚನ್ನಕೇಶವ ಹೇಳಿದರು.
ಅವರು ಬುಧವಾರ ಶ್ರಾವಣ ಮಾಸದ ನಿಮಿತ್ತ ಇತಿಹಾಸ ಪ್ರಸಿದ್ಧ ವಾಣಿಭದ್ರೇಶ್ವರ ಬೆಟ್ಟದಲ್ಲಿ ವಾಣಿಭದ್ರೇಶ್ವರ ದೇವರಿಗೆ ಪೂಜೆ ನೆರವೇರಿಸಿ ಮಾತನಾಡಿದರು.
ವಾಣಿಭದ್ರೇಶ್ವರ ಬೆಟ್ಟವು ಪವಿತ್ರವಾದದ್ದು ಇಲ್ಲಿ ದೇವಾನುದೇವತೆಗಳು ನೆಲೆಸಿರುವ ಕುರಿತು ವಿದ್ಯಾರಣ್ಯರು ಮನಗಂಡು ಹಂಪಿಯ ಸುತ್ತಲೂ 8 ಲಿಂಗ ಪ್ರತಿಷ್ಠಾಪಿಸಿದಾಗ ವಾಣಿಭದ್ರೇಶ್ವರ ಬೆಟ್ಟದಲ್ಲಿಯೂ ಲಿಂಗ ಸ್ಥಾಪಿಸಿರುವ ಕುರಿತು ಇತಿಹಾಸದಲ್ಲಿ ಉಲ್ಲೇಖವಾಗಿದ್ದು ಪ್ರತಿಯೊಬ್ಬರೂ ವಾಣೀಭದ್ರೇಶ್ವರನ ದರ್ಶನ ಪಡೆಯುವಂತೆ ಮನವಿ ಮಾಡಿದರು.
ಶ್ರಾವಣ ಮಾಸದ ನಿಮಿತ್ತ ವಾಣೀಭದ್ರೇಶ್ವರ ದೇವರಿಗೆ ಬೆಳ್ಳಿಗ್ಗೆ ನೈರ್ಮಲ್ಯ ವಿಸರ್ಜನೆ, ಜಲಾಭಿಷೇಕ, ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಪುಷ್ಪಾಲಂಕಾರ ಮತ್ತು ಆಗಮಿಸಿದ ಭಕ್ತರಿಗೆ ಅನ್ನ ಪ್ರಸಾದ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಎಚ್.ಆರ್. ಚನ್ನಕೇಶವ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಹಾಲಿಂಗಪ್ಪ ಬನ್ನಿಕೊಪ್ಪ, ಟಿ.ಆರ್.ರಾಯಬಾಗಿ, ರೇಖಾ ರಾಯಬಾಗಿ, ನೀಲಕಂಠಸ್ವಾಮಿ, ಕೆ.ಕಾಳಪ್ಪ, ಅಕ್ಕಿ ಕೊಟ್ರಪ್ಪ, ಹೊಸ್ಕೇರಿ ಗಿರಿಯಪ್ಪ, ದೇಸಾಯಿ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ