ಕೋವಿಡ್-19 ನಿಯಮ ಉಲ್ಲಂಘನೆ: ಗಂಗಾವತಿಯಲ್ಲಿ 297 ಕೇಸ್, 29,700 ರೂ. ದಂಡ ವಸೂಲಿ!
Team Udayavani, Apr 21, 2021, 12:54 PM IST
ಗಂಗಾವತಿ: ಕೋವಿಡ್-19 ಎರಡನೇ ಅಲೆ ವ್ಯಾಪಕವಾಗಿದ್ದು ಸರಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೆಚ್ಚು ಜನ ಗುಂಪು ಸೇರಬಾರದು. ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಮುನ್ನೆಚ್ಚರಿಕೆ ಇದ್ದರೂ ಕೆಲವರು ನಿಯಮ ಉಲ್ಲಂಘನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.
ಪೊಲೀಸರು ಗಂಗಾವತಿ ನಗರದಲ್ಲಿ ಕೋವಿಡ್ ಎರಡನೇ ಅಲೆಯು ಹೆಚ್ಚಳವಾಗದಂತೆ ತಡೆಯಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಧ್ವನಿವರ್ಧಕದ ಮೂಲಕ ಪ್ರಚಾರ ಮಾಡುತ್ತಿದ್ದಾರೆ.
ಈ ಮಧ್ಯೆ ಪ್ರಮುಖ ವೃತ್ತಗಳು ಜನನಿಬಿಡ ಪ್ರದೇಶದಲ್ಲಿ ಸಂಚಾರ ಮಾಡಿ ಜನರಿಗೆ ತಿಳುವಳಿಕೆ ಹೇಳುವ ಜತೆಗೆ ಪದೇ ಪದೇ ಮಾಸ್ಕ್ ಇಲ್ಲದೇ ಸಂಚಾರ ಮಾಡುವವರ ವಿರುದ್ದ 297 ಕೇಸ್ ದಾಖಲು ಮಾಡಿ ಅವರಿಂದ 29700 ರೂ. ದಂಡ ವಸೂಲಿ ಮಾಡಿದ್ದಾರೆ. ಒಎಸ್ಬಿ ರೋಡ್ ಗಾಂಧಿ, ಮಹಾವೀರ ಮತ್ತು ಗಣೇಶ ವೃತ್ತಗಳಲ್ಲಿರುವ ಕೆಲ ಅಂಗಡಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿ ಜನರನ್ನು ಸೇರಿಸಲು ಕಾರಣರಾದ ಅಂಗಡಿ ಮಾಲೀಕರ ವಿರುದ್ದ ಕೇಸ್ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?
ಜನಜಾಗೃತಿ ಅಗತ್ಯ: ಕೋವಿಡ್ ರೋಗ ವ್ಯಾಪಕವಾಗುತ್ತಿದ್ದು ಜನರು ಮನೆಯಿಂದ ಹೊರಗೆ ಅನಿವಾರ್ಯವಿದ್ದರೆ ಮಾತ್ರ ಮುನ್ನೆಚ್ಚರಿಕೆ ಕ್ರಮದಲ್ಲಿ ಬರಬೇಕು. ಮಾಸ್ಕ್ ಧರಿಸಬೇಕು ಸಾಮಾಜಿಕ ಅಂತರ ಕಾಪಾಡುವಂತೆ ನಗರಠಾಣೆ ಪಿಐ ವೆಂಕಟಸ್ವಾಮಿ ಮನವಿ ಮಾಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು