ಗಂಗಾವತಿ: ನೋಂದಣಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ, ಸಾರ್ವಜನಿಕರಿಗೆ ಸಂಕಷ್ಟ!
Team Udayavani, Feb 12, 2021, 2:00 PM IST
ಗಂಗಾವತಿ: ನಗರಸಭೆ ಮತ್ತು ನೋಂದಣಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ಆಸ್ತಿ ನೋಂದಣಿ ಮಾಡಲು ಆಗಮಿಸುವ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.
ನಗರ ಪ್ರದೇಶದಲ್ಲಿ ಮನೆ ನಿವೇಶನ ಖರೀದಿಸಿ ನೋಂದಣಿ ಮಾಡಿಸಿಕೊಳ್ಳಲು ಮತ್ತು ನಗರಸಭೆಯಲ್ಲಿ ಮ್ಯಟೇಶನ್ ಮಾಡಿಸಿಕೊಳ್ಳಲು ಜನರಿಗೆ ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ನಿತ್ಯವೂ ನೋಂದಣಿ ಇಲಾಖೆ ಮತ್ತು ನಗರಸಭೆ ಕಚೇರಿಗೆ ಅಲೆಯುವಂತಾಗಿದೆ.
ಇದನ್ನೂ ಓದಿ:ಸಿಎಂ ವಿರುದ್ಧ ಟೀಕೆ: ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್ ನೀಡಿದ ಬಿಜೆಪಿ ಹೈಕಮಾಂಡ್
ನಗರಸಭೆ ವ್ಯಾಪ್ತಿಯಲ್ಲಿ ಮಾಡಲಾದ ಹೊಸ ಲೇಔಟ್ ಅನ್ ಸೈಜ್ ನಿವೇಶನಗಳ ಮಾಹಿತಿ ನೋಂದಣಿ ಕಚೇರಿಯಲ್ಲಿ ಲಭ್ಯವಿಲ್ಲದ ಕಾರಣ ರಿಜಿಸ್ಟ್ರಾರ್ ಮಾಡಿಸಿಕೊಳ್ಳಲು ತೊಂದರೆಯಾಗಿದೆ.
ನೋಂದಣಿ ಇಲಾಖೆಯ ನಿಯಮದಂತೆ ಪ್ರತಿನಿತ್ಯ ನೋಂದಣಿ ಆಗಿರುವ ಆಸ್ತಿಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಬೇಕಿದ್ದು ಗಂಗಾವತಿಯಲ್ಲಿ ಮರುದಿನ ಸ್ಕ್ಯಾನ್ ಮತ್ತು ಅಪ್ ಲೋಡ್ ಮಾಡಲಾಗುತ್ತಿದೆ. ಮೂರನೇ ದಿನಕ್ಕೆ ಆಸ್ತಿ ಖರೀದಿದಾರರಿಗೆ ದಾಖಲೆಗಳನ್ನು ಲಭ್ಯವಾಗುವುದರಿಂದ ಹೊಸ ನೋಂದಣಿದಾರರು ಎರಡು ಮೂರು ದಿನ ಕ್ಯೂನಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ.
ಇದನ್ನೂ ಓದಿ:ಬಾದಾಮಿ: ಒಂದೇ ವೇದಿಕೆಯಲ್ಲಿ ಸಿದ್ದರಾಮಯ್ಯ- ಶ್ರೀರಾಮುಲು
ಕ್ರಮಕ್ಕೆ ಆಗ್ರಹ: ನೋಂದಣಿ ಕಚೇರಿಯಲ್ಲಿ ಕೆಲಸ ಕಾರ್ಯಗಳು ವಿಳಂಭವಾಗುತ್ತಿದ್ದು ಜನರಿಗೆ ತೊಂದರೆಯಾಗುತ್ತಿದೆ. ನೋಂದಣಿ ಇಲಾಖೆಯ ಆಯುಕ್ತರು ಸೂಕ್ತ ಕ್ರಮ ಜರುಗಿಸುವಂತೆ ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ವೈ.ರಮೇಶ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ