ಮೃತ್ಯುಕೂಪವಾಗಿರುವ ಸಾಣಾಪೂರ ಕೆರೆ: ಪ್ರವಾಸಿಗರ ಜೀವ ಉಳಿಸಲು ಜಿಲ್ಲಾಡಳಿತ ಮುಂದಾಗಲಿ


Team Udayavani, Oct 20, 2021, 12:11 PM IST

Untitled-1

ಗಂಗಾವತಿ:  ಪ್ರವಾಸಿಗರ ಸ್ವರ್ಗ ಎಂದೂ ಕರೆಯಲ್ಪಡುವ ಕಿಷ್ಕಿಂದಾ ಪ್ರದೇಶದಲ್ಲಿರುವ ಸಾಣಾಪೂರ ಲೇಕ್(ಕೆರೆ) ಕಳೆದ ಹಲವು ವರ್ಷಗಳಿಂದ ಮೃತ್ಯುಕೂಪವಾಗುತ್ತಿದ್ದರೂ ಜಿಲ್ಲಾಡಳಿತ ಮತ್ತು ಹಂಪಿ ಅಭಿವೃದ್ಧಿ ಪ್ರಾಧಿಕಾರ ಪ್ರವಾಸಿಗರ ಜೀವ ಉಳಿಸುವ ಕ್ರಮಕೈಗೊಳ್ಳದೇ ಮೌನವಹಿಸಿದ್ದು ಕೂಡಲೇ ಪ್ರವಾಸಿಗರ ಜೀವನ ಸಂರಕ್ಷಣೆಗೆ ಮುಂದಾಗಬೇಕಿದೆ. ಪ್ರತಿ ಎರಡ್ಮೂರು ತಿಂಗಳಿಗೊಮ್ಮೆ ಇಲ್ಲಿಗೆ ಈಜಾಡಲು ಬರುವ ದೇಶ ವಿದೇಶಿ ಪ್ರವಾಸಿಗರು ಕೆರೆಯ ನೀರಿನ ಆಳ ಅರಿಯದೇ ಜೀವ ಕಳೆದುಕೊಳ್ಳುತ್ತಿರುವುದು ಕಂಡು ಬರುತ್ತಿದೆ.

ಸಾಣಾಪೂರ ಹತ್ತಿರದ ಕಿಷ್ಕಿಂದಾ ಏಳುಗುಡ್ಡ ಪ್ರದೇಶದಲ್ಲಿ ಹರಿಯುವ ತುಂಗಭದ್ರಾ ಎಡದಂಡೆ ಕಾಲುವೆ ನೀರು ಇಕ್ಕಟಾದ ಸ್ಥಳದಲ್ಲಿ ಹೋಗುವಾಗ ನೈಸರ್ಗಿಕವಾಗಿ ಕೆರೆ ನಿಮಾರ್ಣವಾಗುತ್ತಿದ್ದು ಎರಡು ಕಡೆ  ಬೃಹತ್ ಪ್ರಮಾಣದ ನೀರು ನಿಂತಿರುವುದರಿಂದ  ಎರಡು ಕೆರೆಗಳು ನಿರ್ಮಾಣವಾಗಿವೆ. ಸುತ್ತಲೂ ಗುಡ್ಡ ಕಲ್ಲುಬಂಡೆ ಇರುವುದರಿಂದ ಪ್ರವಾಸಿ ತಾಣವಾಗಿ ಕಳೆದ ಎರಡು ದಶಕಗಳಿಂದ ಆಕರ್ಷಿಣೀಯ ಸ್ಥಳವಾಗಿದೆ. ವಿರೂಪಾಪೂರಗಡ್ಡಿಯಲ್ಲಿ ರೆಸಾರ್ಟ್ ಗಳು ಇದ್ದ ಸಂದರ್ಭದಲ್ಲಿ ವಿದೇಶ ಪ್ರವಾಸಿಗರು ಹಾಗೂ ದೇಶಿಯ ಐಟಿಬಿಟಿ ಉದ್ಯೋಗಿಗಳು ವೀಕ್ ಎಂಡ್ ನೆಪದಲ್ಲಿ ಇಲ್ಲಿಗೆ ಆಗಮಿಸಿ ಇಲ್ಲಿ  ತಂಗಿ ನಿತ್ಯವೂ ಸಾಣಾಪೂರ ಕೆರೆಯಲ್ಲಿ ಈಜಾಡಲು ಮತ್ತು ಬೋಟಿಂಗ್(ತೆಪ್ಪ) ಮಾಡುತ್ತಿದ್ದರು. ಪ್ರವಾಸಿಗರನ್ನು ಸ್ಥಳೀಯ  ಯುವಕರು ಕೆರೆಯಲ್ಲಿ ಬೋಟಿಂಗ್ (ತೆಪ್ಪ ಅಥವಾ ಹರಿಗೋಲಿನಲ್ಲಿ) ಮಾಡಿಸುತ್ತಿದ್ದರು.

ಬೋಟಿಂಗ್ ಮಾಡಿದ ಪೊಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರಿಂದ ಸಾಣಾಪೂರ ಲೇಕ್ ಬೋಟಿಂಗಿಗೆ ಆಗಮಿಸುವವರ ಸಂಖ್ಯೆ ಹೆಚ್ಚಾಗಿದೆ. ಕಿಷ್ಕಿಂದಾಕ್ಕೆ ಬರುವ ಪ್ರವಾಸಿಗರು ಕೆರೆಯ ಬದಿ ಕಲ್ಲು ಬಂಡೆಗಳ ಮೇಲಿಂದ ನೀರಿಗೆ ಧುಮಿಕಿ ಸಂತೋಷಪಡುತ್ತಿದ್ದರು. ಧುಮುಕುವುದನ್ನು ಪ್ರವಾಸಿಗರಿಗೆ ಕಲಿಸಲು ಮತ್ತು ಬೋಟಿಂಗ್ ನಲ್ಲಿ ಸುತ್ತಾಡಿಸಲು ಸ್ಥಳೀಯ ಕೆಲ ಯುವಕರು ಸಾವಿರಾರು ರೂ.ಗಳನ್ನು ಪಡೆಯುತ್ತಾರೆ. ಸರಿಯಾಗಿ ಈಜಲು ಬಾರದ ಪ್ರವಾಸಿಗರು ಕಲ್ಲಿನ ಮೇಲಿಂದ ಧುಮುಕಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇತ್ತೀಚೆಗೆ ಕೆರೆಯಲ್ಲಿ ಬೋಟಿಂಗ್ ಮತ್ತು ನೀರಿನಲ್ಲಿ ಜಂಪಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ನೀರಿನ ಆಳ ಗೊತ್ತಿಲ್ಲದ ಹಲವು ಪ್ರವಾಸಿಗರು ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಿದ್ದಾರೆ.

ಜಿಲ್ಲಾಡಳಿತ ಈ ಪ್ರದೇಶವನ್ನು ನಿರ್ವಾಹಣೆ ಮಾಡುವ ಹಂಪಿ ಅಭಿವೃದ್ಧಿ ಪ್ರಾಧಿಕಾರ ಸಾಣಾಪೂರ ಕೆರೆಯ ಸುತ್ತಲೂ ಪ್ರವಾಸಿಗರು ಹೋಗದಂತೆ ಸೂಕ್ತ ಸಿಬ್ಬಂದಿ ನಿಯೋಜನೆ ಮಾಡಬೇಕು. ಇಲ್ಲವೇ ಈಜಾಡಲು ಮತ್ತು ಬೋಟಿಂಗ್ ಮಾಡದಂತೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕಿದೆ. ಕೆರೆಯ ಸುತ್ತ ಆಳೆತ್ತರದ ಕಬ್ಬಿಣದ ತಡೆಗೋಡೆ ನಿರ್ಮಿಸಬೇಕು. ಇಲ್ಲವೇ ಪ್ರವಾಸೋದ್ಯಮ ಇಲಾಖೆಯಿಂದ ಬೋಟಿಂಗ್ ಮತ್ತು ಈಜಾಡಲು ತರಬೇತಿ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಪ್ರವಾಸಕ್ಕೆ ಆಗಮಿಸಿದ ಮತ್ತು ಹೋಳಿ, ನೂತನ ವರ್ಷ, ಸಂಕ್ರಾಂತಿ  ಹಬ್ಬದ ಸಂದರ್ಭದಲ್ಲಿ ಇಲ್ಲಿಗೆ ಬರುವ ಪ್ರವಾಸಿಗರು ಪ್ರಾಣ ಕಳೆದುಕೊಳ್ಳುವುದು ಇನ್ನೂ ಹೆಚ್ಚಾಗಬಹುದಾಗಿದೆ.

ಅಕ್ರಮ ಬೋಟಿಂಗ್ ನಿಲ್ಲಿಸಲಿ: ಸಾಣಾಪೂರ ಕೆರೆ ಅತ್ಯಂತ ಅಪಾಯಕಾರಿಯಾಗಿದೆ ಇಲ್ಲಿ ಸದ್ಯ ಬೋಟಿಂಗ್(ತೆಪ್ಪಗಳಲ್ಲಿ) ನಿಷೇಧವಿದ್ದರೂ ಜೀವ ಸಂರಕ್ಷಕ ಸಲಕರಣೆ ಇಲ್ಲದೇ ಸ್ಥಳೀಯ ಕೆಲವರು ಅಕ್ರಮವಾಗಿ ಬೋಟಿಂಗ್ ನಡೆಸುತ್ತಿದ್ದಾರೆ. ಕೆರೆಯಲ್ಲಿ ಮೇಲಿಂದ ಜಂಪಿಂಗ್  ಮಾಡುವ ದೃಶ್ಯ ಮೊಬೈಲ್‌ಗಳಲ್ಲಿ ಸೆರೆ ಹಿಡಿಯಲು ಮೇಲಿಂದ ಜಂಪಿಂಗ್ ಮಾಡಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದರಲ್ಲಿ ಬಹುತೇಕ ಯುವಕರಾಗಿದ್ದು ಅವರ ಕುಟುಂಬ ಇಡೀ ಜೀವನ ಪರ್ಯಾಂತ ಪರಿತಪಿಸುವಂತಾಗಿದೆ. ಕೂಡಲೇ ಸರಕಾರ ಸಾಣಾಪೂರ ಕೆರೆಯಲ್ಲಿ ಸುರಕ್ಷತಾ ಕ್ರಮಕೈಗೊಳ್ಳಬೇಕು. ಸ್ಥಳೀಯರ ಬೋಟಿಂಗ್ ನಿಷೇಧ ಮಾಡಿದ್ದರೂ ಅರಿಗೋಲಿನಲ್ಲಿ ಪ್ರವಾಸಿಗರನ್ನು ಕೆರೆಯಲ್ಲಿ ಈಜಾಡುವವರ ವಿರುದ್ಧ  ಸ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲಿ ಈಜಾಡಲು ಅವಕಾಶ ನೀಡಬಾರದೆಂದು  ಸ್ಥಳೀಯರಾದ  ಮಹೇಶ ಸಾಗರ ಒತ್ತಾಯಿಸಿದ್ದಾರೆ .

ಕಠಿಣ ಕ್ರಮ: ಸಾಣಾಪೂರ ಕೆರೆಯಲ್ಲಿ ಬೋಟಿಂಗ್ ನಿಷೇಧ ಮಾಡಿ ಹಲವು ಸಲ ಅರಿಗೋಲುಗಳನ್ನು ಸೀಜ್ ಮಾಡಲಾಗಿದೆ. ಸ್ಥಳೀಯರು ರಾಜಕಾರಣಿಗಳ ಪ್ರಭಾವ ಬಳಸಿ ಅರಿಗೋಲು ತೆಗೆದುಕೊಂಡು ಹೋಗಿ ಪುನಹ ಕೆರೆಯಲ್ಲಿ ಅರಿಗೋಲು ಹಾಕುತ್ತಿದ್ದಾರೆ. ಇಲ್ಲಿ ಈಜಾಡಲು ನಿಷೇಧ ಅಪಾಯಕಾರಿ ಎಂದು ಹಲವು ಕಡೆ  ಬರೆಸಿದ್ದರೂ ಇಲ್ಲಿಗೆ ಬರುವ ಪ್ರವಾಸಿಗರು ಕಲ್ಲುಗಳ ಮೇಲಿಂದ ಜಂಪಿಂಗ್ಗ್  ಮಾಡಿ ಪ್ರಾಣ ಕಳೆದುಕೊಳ್ಳುತ್ತಿದ್ದು ಅರಿಗೋಲು ಹಾಕುವವರ ವಿರುದ್ಧ ಇನ್ನೂ ನಿರ್ದಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಸಾಣಾಪುರ ಗ್ರಾಪಂ ಪಿಡಿಒ ಬಬಸವರಾಜಗೌಡ ನಾಯಕ ಉದಯವಾಣಿ ಗೆ ತಿಳಿಸಿದ್ದಾರೆ.

-ಕೆ.ನಿಂಗಜ್ಜ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.