ಗಂಗಾವತಿ: ಅನಗತ್ಯವಾಗಿ ಸಂಚರಿಸುವ ವಾಹನಗಳನ್ನು ಸೀಜ್ ಮಾಡಿ; ನೋಡೆಲ್ ಅಧಿಕಾರಿಗಳಿಗೆ DSP ಆದೇಶ
Team Udayavani, May 27, 2021, 12:48 PM IST
ಗಂಗಾವತಿ: ಅನಗತ್ಯ ಬೈಕ್ ಸವಾರರೇ ಕೊರೊನಾ ಹಬ್ಬಿಸುವ ಸಾಧ್ಯತೆ ಇದ್ದು ಪ್ರತಿ ವಾರ್ಡ್ ಗ್ರಾ.ಪಂ.ನೋಡೆಲ್ ಅಧಿಕಾರಿಗಳು ಬೈಕ್ ಹಾಗೂ ಇತರೆ ವಾಹನಗಳನ್ನು ಸೀಜ್ ಮಾಡುವಂತೆ ಡಿಎಸ್ ಪಿ ರುದ್ರೇಶ ಉಜ್ಜನಕೊಪ್ಪ ಆದೇಶ ನೀಡಿದ್ದಾರೆ.
ನಗರಸಭೆಯ ಕೊರೊನಾ ಮಾರ್ಗಸೂಚಿ ಪಾಲನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿ ಗ್ರಾ.ಪಂ ನಗರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ನೋಡೆಲ್ ಅಧಿಕಾರಿಗಳು, ಕೊರೊನಾ ಹರಡದಂತೆ ತಡೆಯಲು ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸಬೇಕು. ಶಾಸಕರು,ನಗರಸಭೆ ಸದಸ್ಯರು, ಎಸ್ಪಿ, ಡಿಸಿ ಅವರು ನೋಡೆಲ್ ಅಧಿಕಾರಿಗಳ ಬೆಂಬಲಕ್ಕಿದ್ದು ಪ್ರತಿ ಓಣಿಗಳಲ್ಲಿ ಜನ ಹೆಚ್ಚು ಸೇರುವುದು ಮಕ್ಕಳು ಆಟವಾಡುವುದನ್ನು ತಡೆಯಬೇಕು. ಸೋಂಕಿತರಿಗೆ ಮನೆಯಲ್ಲಿ ಚಿಕಿತ್ಸೆಗೆ ಅವಕಾಶ ನೀಡದೇ ಕಾಳಜಿ ಕೇಂದ್ರಕ್ಕೆ ಕಳಿಸುವ ಕಾರ್ಯ ಮಾಡಬೇಕೆಂದರು.
ಇದನ್ನೂ ಓದಿ:ಚೋಕ್ಸಿಗೆ ಎಲ್ಲಾ ದಾರಿ ಬಂದ್…ಡೊಮಿನಿಕಾದಿಂದ ಚೋಕ್ಸಿ ಕರೆತರಲು ಭಾರತ ಸಿದ್ಧತೆ
ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ ಮಾತನಾಡಿ ವಾರ್ಡುಗಳಲ್ಲಿ ಸೋಂಕಿತರನ್ನು ಪತ್ತೆ ಮಾಡಿ ಅವರ ಮನವೊಲಿಸಿ ಕಾಳಜಿ ಕೇಂದ್ರಕ್ಕೆ ಕಲಿಸಬೇಕು. ವಾಹನ ಅನಗತ್ಯ ಸಂಚಾರ ನಿಲ್ಲಿಸಬೇಕು. ಕೊರೊನಾ ಸಂಬಂಧಿಸಿದಂತೆ ಇರುವ ಅಗತ್ಯ ಮಾಹಿತಿಯನ್ನು ಮೇಲಿನ ಅಧಿಕಾರಿಗಳಿಗೆ ರವಾನೆ ಮಾಡಬೇಕೆಂದರು.
ತಹಸೀಲ್ದಾರ್ ಯು.ನಾಗರಾಜ ಸೇರಿ ನಗರಸಭೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ