Gangavathi: ಸಾವಿಗೆ ಆಹ್ವಾನ ನೀಡುತ್ತಿರುವ ಬಸ್ ನಿಲ್ದಾಣದ ವಿದ್ಯುತ್ ಟ್ರಾನ್ಸ್ ಫಾರ್ಮರ್
ಶಾಲಾ-ಕಾಲೇಜು ಮಕ್ಕಳು ಸೇರಿ ಸಾರ್ವಜನಿಕರಿಗೆ ಜೀವಕಂಟಕವಾಗಿರುವ ಬಸ್ ನಿಲ್ದಾಣ ಅಸ್ವಚ್ಛತೆ,ವಿದ್ಯುತ್ ಟ್ರಾನ್ಸ್ ಫಾರ್ಮರ್
Team Udayavani, Jul 23, 2023, 10:04 AM IST
ಗಂಗಾವತಿ: ಶಾಲಾ ಕಾಲೇಜು ಮಕ್ಕಳು ಸೇರಿ ಸಾರ್ವಜನಿಕರಿಗೆ ಕಂಟಕವಾಗಿರುವ ವಿದ್ಯಾನಗರದ ಬಸ್ ನಿಲ್ದಾಣದಲ್ಲಿನ ಅಸ್ವಚ್ಛತೆ ಮತ್ತು ವಿದ್ಯುತ್ ಟ್ರಾನ್ಸ್ ಫಾರ್ಮರ್ ಸಾವಿಗೆ ಆಹ್ವಾನ ನೀಡುವಂತಿದೆ.
ಸ್ವಚ್ಚತೆ ಕಾಪಾಡಬೇಕಾದ ನಗರಸಭೆ ಮತ್ತು ವಿದ್ಯುತ್ ಅವಘಡ ಸಂಭವಿಸದಂತೆ ತಡೆಯಬೇಕಾಗಿರುವ ಜೆಸ್ಕಾಂ ಇಲಾಖೆಯ ಅಧಿಕಾರಿಗಳಲ್ಲಿ ನಿರ್ಲಕ್ಷ್ಯ ಕಾಣುತ್ತಿದ್ದು ಹಲವು ಬಾರಿ ಸಾರ್ವಜನಿಕರು ನಗರಸಭೆ ಮತ್ತು ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.
ವಿದ್ಯಾನಗರದ ಬಸ್ ನಿಲ್ದಾಣದಲ್ಲಿ ಇಲ್ಲಿರುವ ಶಾರದ ಎಜುಕೇಶನ್ ಸಂಸ್ಥೆಯ ನೂರಾರು ವಿದ್ಯಾರ್ಥಿಗಳು ಇಲ್ಲಿಂದಲೇ ಬಸ್ ನಲ್ಲಿ ಪ್ರಯಾಣ ಮಾಡುತ್ತಾರೆ. ವಿದ್ಯಾರ್ಥಿಗಳು ಮಾತ್ರವಲ್ಲದೇ ವಿದ್ಯಾನಗರದ ನಿವಾಸಿಗಳು ಇಲ್ಲಿಂದಲೇ ಬಸ್ ಹತ್ತುತ್ತಾರೆ ಮತ್ತು ಇದೇ ಬಸ್ ನಿಲ್ದಾಣದಲ್ಲಿ ಇಳಿಯುತ್ತಾರೆ.
ಮಳೆಗಾಲ ಮತ್ತು ಬೇಸಿಗೆ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ನಿಲ್ಲಬೇಕಾಗುತ್ತದೆ. ಬಸ್ ಸ್ಟಾಂಡ್ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಜೋಡಣೆ ಮಾಡಿದ್ದು, ಸುತ್ತಲೂ ತಂತಿ ಬೇಲಿ ಹಾಕದೆ ತೆರೆದ ಸ್ಥಳದಲ್ಲಿ ಹಾಗೆಯೇ ಬಿಡಲಾಗಿದ್ದು, ಮಳೆಗಾಲ ಸಂದರ್ಭದಲ್ಲಿ ವಿದ್ಯುತ್ ಅಪಘಾತಗಳು ಸಂಭವಿಸುವ ಸಾಧ್ಯತೆಗಳಿದೆ.
ಈ ಬಗ್ಗೆ ಜೆಸ್ಕಾಂ ಇಲಾಖೆಯವರು ಗಮನ ಹರಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ನಿತ್ಯವೂ ವಿದ್ಯುತ್ ಅವಘಡಗಳು ಸಂಭವಿಸಿ ಸಾವುಗಳು ಸಂಭವಿಸುತ್ತಿರುವ ಸಂದರ್ಭದಲ್ಲಿ ಜೆಸ್ಕಾಂ ಇಲಾಖೆಯವರು ನೂರಾರು ವಿದ್ಯಾರ್ಥಿಗಳು ನಿಂತುಕೊಳ್ಳುವ ವಿದ್ಯಾನಗರದ ಬಸ್ ನಿಲ್ದಾಣದಲ್ಲಿರುವ ಟ್ರಾನ್ಸ್ ಫಾರ್ಮರ್ ಸುತ್ತಲೂ ತಂತಿ ಬೇಲಿ ಹಾಕಬೇಕು ಹಾಗೂ ನಗರ ಸಭೆಯವರು ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ