ಚರ್ಚೆಗೆ ಸೀಮಿತ ಸಮಾನಾಂತರ ಜಲಾಶಯ


Team Udayavani, Feb 11, 2019, 10:15 AM IST

11-february-19.jpg

ಗಂಗಾವತಿ: ಈ ಭಾಗದ ಜೀವನಾಡಿಯಾದ ತುಂಗಭದ್ರಾ ಜಲಾಶಯ ನಿರ್ಮಿಸಿ ಆರು ದಶಗಳೇ ಕಳೆದಿದ್ದು, ಜಲಾಶಯದಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಹೂಳು ತುಂಬಿಕೊಂಡಿರುವುದೇ ಇದಕ್ಕೆ ಪ್ರಮುಖ ಕಾರಣ ಎಂದು ನೀರಾವರಿ ತಜ್ಞರು ವರದಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಸುಮಾರು 33 ಟಿಎಂಸಿ ಅಡಿಯಷ್ಟು ಹೂಳು ಸಂಗ್ರಹವಾಗಿರುವ ಕಾರಣ ಜಲಾಶಯದಲ್ಲಿ ಎರಡು ಬೆಳೆಗಾಗುವಷ್ಟು ನೀರನ್ನು ಸಂಗ್ರಹಿಸಲು ಆಗುತ್ತಿಲ್ಲ. ಕಳೆದ ನಾಲ್ಕೈದು ವರ್ಷಗಳಿಂದ ಅಚ್ಚುಕಟ್ಟು ಪ್ರದೇಶದ ರೈತರು ಮುಂಗಾರಿನಲ್ಲಿ ಒಂದೇ ಬೆಳೆ ಬೆಳೆಯಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ತುಂಗಭದ್ರಾ ಜಲಾಶಯ 123 ಟಿಎಂಸಿ ಅಡಿ ನೀರಿನ ಸಂಗ್ರಹ ಸಾರ್ಮಥ್ಯ ಹೊಂದಿದ್ದು, ಇದರಲ್ಲಿ ಹೂಳಿನ ಪರಿಣಾಮ ನಾಲ್ಕೈದು ವರ್ಷಗಳಿಂದ 97 ಟಿಎಂಸಿ ಅಡಿಗೂ ಕಡಿಮೆ ನೀರು ಸಂಗ್ರಹವಾಗುತ್ತಿದೆ. ಹೂಳನ್ನು ತೆಗೆಸುವ ಕುರಿತು ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಅನೇಕ ಬಾರಿ ಭರವಸೆ ಮತ್ತು ಹೋರಾಟ ಮಾಡುವ ನೆಪದಲ್ಲಿ ಜನರಿಂದ ಮತಗಳನ್ನು ಪಡೆದಿವೆ. ಅಧಿಕಾರಕ್ಕೆ ಬಂದ ನಂತರ ಹೂಳಿನ ಬಗ್ಗೆ ಚಕಾರವೆತ್ತುತ್ತಿಲ್ಲ. ಕೇಂದ್ರ ಮತ್ತು ರಾಜ್ಯ ಸರಕಾರ ಮಂಡನೆ ಮಾಡಿದ ಬಜೆಟ್‌ಗಳಲ್ಲಿಯೂ ಹೂಳಿನ ಸಮಸ್ಯೆ ನಿವಾರಣೆಗೆ ಪ್ರಸ್ತಾಪಿಸಿಲ್ಲ. 2012ರಲ್ಲಿ ತಜ್ಞರ ಸಮಿತಿ ಹೂಳು ತೆಗೆಯುವುದು ಅವೈಜ್ಞಾನಿಕ. ಇದರ ಬದಲಿಗೆ ಮಳೆಗಾಲದಲ್ಲಿ ಪೋಲಾಗುವ ನೀರನ್ನು ಸಮಾನಾಂತರ ಜಲಾಶಯ ನಿರ್ಮಿಸುವ ಸಂಗ್ರಹಿಸಬೇಕು. ಅಚ್ಚುಕಟ್ಟು ಪ್ರದೇಶದಲ್ಲಿರುವ ಕೆರೆ, ಕಟ್ಟೆಗಳನ್ನು ತುಂಬಿಸಿ ಬೇಸಿಗೆಯಲ್ಲಿ ಸಂಗ್ರಹಿಸಿದ ನೀರನ್ನು ಬಳಕೆ ಮಾಡಿಕೊಳ್ಳಲು ವರದಿಯಲ್ಲಿ ಸಲಹೆ ನೀಡಲಾಗಿದೆ. ಅದರಂತೆ ಕನಕಗಿರಿ ತಾಲೂಕಿನ ನವಲಿ ಗ್ರಾಮದ ಹತ್ತಿರ 37 ಟಿಎಂಸಿ ಅಡಿ ನೀರನ್ನು ಸಂಗ್ರಹ ಮಾಡಲು ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ವಿಸ್ತೃತ ವರದಿ ಸಿದ್ಧಪಡಿಸಲಾಗಿದೆ. ತುಂಗಭದ್ರಾ ಜಲಾಶಯ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೂ ಸಂಬಂಧಿಸಿರುವುದರಿಂದ ಮೂರು ರಾಜ್ಯಗಳ ಒಪ್ಪಿಗೆ ಅಗತ್ಯವಾಗಿದೆ. ರಾಜ್ಯ ಸರಕಾರ ಮೂರು ರಾಜ್ಯಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಕರೆದು ಸಮನಾಂತರ ಜಲಾಶಯ ನಿರ್ಮಾಣ ಕುರಿತು ಮಾತುಕತೆ ನಡೆಸಬೇಕು. ಕಳೆದ 10 ವರ್ಷಗಳಿಂದ ಸಮಾಂತರ ಜಲಾಶಯದ ಕುರಿತು ಮುಖಂಡರು ಹೇಳಿಕೆ ನೀಡುತ್ತಿದ್ದಾರೆಯೇ ಹೊರತು ಕಾರ್ಯ ಮಾಡುತ್ತಿಲ್ಲ. ಪ್ರತಿ ಬಜೆಟ್ ಮಂಡನೆ ವೇಳೆ ಅಚ್ಚುಕಟ್ಟು ರೈತರು ಹೂಳು ಮತ್ತು ಸಮನಾಂತರ ಜಲಾಶಯ ನಿರ್ಮಾಣದ ಕುರಿತು ಆಶಾಭಾವ ಹೊಂದಿರುತ್ತಾರೆ. ನಂತರ ನಿರಾಸೆಯಾಗುತ್ತಾರೆ.

ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿದ್ದರಿಂದ ನೀರು ಸಂಗ್ರಹ ಕಡಿಮೆಯಾಗಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ತೊಂದರೆಯಾಗಿದೆ. ಪ್ರತಿ ಬೇಸಿಗೆ ಸಂದರ್ಭದಲ್ಲಿ ಎಲ್ಲಾ ರಾಜಕೀಯ ಮುಖಂಡರು ಪ್ರತಿಭಟನೆ ನೆಪದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಹೂಳು ತೆಗೆಸುವ ಅಥವಾ ಸಮಾನಾಂತರ ಜಲಾಶಯ ನಿರ್ಮಿಸುವ ಇಚ್ಛಾಶಕ್ತಿ ಯಾರಿಗೂ ಇಲ್ಲ. ಜಲಾಶಯದಲ್ಲಿ ಸಂಗ್ರಹವಾದ ನೀರನ್ನು ಮೇಲ್ಭಾಗದ ಹಾಗೂ ಕೆಳಭಾಗದ ರೈತರು ಬಳಕೆ ಮಾಡಲು ಜಗಳವಾಡುವಂತೆ ರಾಜಕೀಯ ಮುಖಂಡರು ಷಡ್ಯಂತ್ರ ನಡೆಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ನವಲಿ ಹತ್ತಿರ ನಿರ್ಮಿಸಲುದ್ದೇಶಿಸಿರುವ ಸಮಾನಾಂತರ ಜಲಾಶಯದ ಕುರಿತು ಕೇಂದ್ರ ಹಾಗೂ ರಾಜ್ಯ ಸರಕಾರದ ಬಜೆಟ್‌ನಲ್ಲಿ ಪ್ರಸ್ತಾಪಿಸದೇ ಇರುವುದು ಖಂಡನೀಯ.
•ಕನಕರೆಡ್ಡಿ ಕುಮಾರಪ್ಪ, ಸಿಂಗನಾಳ ರೈತ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.