ಶೋಷಿತರಿಗೆ ಭೂಮಿ ಹಂಚಿಕೆ ಮಾಡಿದ್ದ ಟಿಪ್ಪು ಸುಲ್ತಾನ್‌


Team Udayavani, Nov 11, 2018, 4:59 PM IST

11-november-20.gif

ಗಂಗಾವತಿ: ಭೂಸುಧಾರಣೆ ಮೂಲಕ ಶೋಷಿತರಿಗೆ ಭೂಮಿ ಹಂಚಿಕೆ ಮಾಡಿದ ಹರಿಕಾರ ಟಿಪ್ಪು ಸುಲ್ತಾನ್‌ ಎಂದು ಶರಣಸಾಹಿತಿ ಸಿ.ಎಚ್‌. ನಾರಿನಾಳ ಹೇಳಿದರು. ಅವರು ಬಾಲಕಿಯರ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡ ಹಜರತ್‌ ಟಿಪ್ಪು ಸುಲ್ತಾನ್‌ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದಲ್ಲಿದ್ದ ಪಾಳೆಗಾರರು, ಜಮೀನ್ದಾರರು, ಪುರೋಹಿತಶಾಹಿ ಕೈಯಲ್ಲಿದ್ದ ಸಾವಿರಾರು ಎಕರೆ ಭೂಮಿಯನ್ನು ಪಡೆದು ಬಡವರಿಗೆ, ಕೆಳವರ್ಗದವರಿಗೆ ಹಂಚಿಕೆ ಮಾಡಬೇಕೆಂಬ ಚಿಕ್ಕದೇವರಾಯ ಒಡೆಯರ್‌, ಹೈದರ್‌ ಅಲಿ ಕನಸನ್ನು ಟಿಪ್ಪು ಸುಲ್ತಾನ್‌ ನನಸು ಮಾಡಿದ್ದಾರೆ. ರಾಜ ಎಂದರೆ ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಮಾಡುವುದು ಸಹಜ ಅದನ್ನು ಕೋಮುವಾದಿಗಳು ಇನ್ನಿಲ್ಲದ ಕಥೆ ಕಟ್ಟಿ ಟಿಪ್ಪು ಕೋಮುವಾದಿ, ಮತಾಂತರ ಮಾಡಿದ ಎಂದು ಗುಲ್ಲೆಬ್ಬಿಸುತ್ತಿದ್ದಾರೆ. ಕೆರೆ ಕಟ್ಟೆ ರಸ್ತೆ ಬೃಹತ್‌ ಪಟ್ಟಣಗಳ ನಿರ್ಮಾಣ ಮಾಡಿದ್ದು ಟಿಪ್ಪು. ಕೆಳವರ್ಗದ ಮಹಿಳೆಯರ ಮಾನ ಹರಾಜು ಹಾಕುತ್ತಿದ್ದ ಕೇರಳ ಮತ್ತು ಮಡಿಕೇರಿಯ ಸಂಪ್ರದಾಯಿಕ ಪದ್ಧತಿ ಹಾಗೂ ಮದ್ಯಪಾನ ನಿಷೇಧ ಮಾಡುವ ಮೂಲಕ ಪ್ರಗತಿಯ ಹರಿಕಾರರಾಗಿದ್ದಾರೆ. ಬಿಜೆಪಿಯವರು ಟಿಪ್ಪುವಿಗೆ ಕೋಮುವಾದಿ ಪಟ್ಟ ಕಟ್ಟುವ ಮೂಲಕ ಸಂಪ್ರದಾಯವಾದಿಗಳ ಪರವಾಗಿದ್ದಾರೆ. ಇವರಿಗೆ ಶೋಷಿತರು, ಬಡವರ ಉದ್ಧಾರ ಬೇಕಿಲ್ಲ. ಟಿಪ್ಪು ಆಂಧ್ರಪ್ರದೇಶದಲ್ಲಿ ಯುದ್ಧ ನಿರತರಾಗಿದ್ದ ಸಂದರ್ಭದಲ್ಲಿ ಮರಾಠರು ಶೃಂಗೇರಿ ಶಾರದೆ ಮಠದ ಮೇಲೆ ದಾಳಿ ನಡೆಸಿ ಚಿನ್ನಾಭರಣ ಸೇರಿ ಅಪಾರ ಸಂಪತ್ತು ಲೂಟಿ ಮಾಡಿದಾಗ ಮಠದ ಪೂಜ್ಯರು ಟಿಪ್ಪುವಿಗೆ ಪತ್ರ ಬರೆದು ವಿಷಯ ಗಮನಕ್ಕೆ ತಂದಾಗ ಆಗಿರುವ ನಷ್ಟ ಭರ್ತಿ ಮಾಡಿ ಪ್ರತಿ ವರ್ಷ ಶೃಂಗೇರಿ ಮತ್ತು ಮೇಲುಕೋಟೆ ಚಲುವನಾರಾಯಣ ಸ್ವಾಮಿ ದೇವಾಲಯಕ್ಕೆ ದೇಣಿಗೆ ನೀಡುವ ಸಂಪ್ರದಾಯ ಹಾಕಿದ್ದರು ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಮಹಮ್ಮದ್‌ ಉಸ್ಮಾನ್‌, ಅಬೀದಾಬೇಗಂ, ಕಸಾಪ ಮಾಜಿ ಅಧ್ಯಕ್ಷ ಅಜಮೀರ್‌ ನಂದಾಪೂರ, ಕಾಶಿಂ ಅಲಿ ಮುದ್ದಾಬಳ್ಳಿ, ಚಕ್ರವರ್ತಿ ನಾಯಕ, ಕೆ. ಪಾಮಪ್ಪ, ತಹಶೀಲ್ದಾರ್‌ ವಿರೇಶ ಬಿರಾದಾರ, ಡಿವೈಎಸ್‌ಪಿ ಸಂತೋಷ ಬನಹಟ್ಟಿ,  ಜುನಾಥ ಸ್ವಾಮಿ, ಜಂಬಣ್ಣ ಐಲಿ, ಮಹೇಶ ದಲಾಲ್‌ ಸೇರಿ ಅನೇಕರಿದ್ದರು.

ಶಾಸಕರು ಸೇರಿ ಜನಪ್ರತಿನಿಧಿಗಳು ಗೈರು
ತಾಲೂಕು ಆಡಳಿತ ಆಯೋಜಿಸಿದ್ದ ಹಜರತ್‌ ಟಿಪ್ಪು ಸುಲ್ತಾನ್‌ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಪರಣ್ಣ ಮುನವಳ್ಳಿ, ಸಂಸದ ಕರಡಿ ಸಂಗಣ್ಣ, ಜಿಪಂ ಉಪಾಧ್ಯಕ್ಷೆ ಲಕ್ಷ್ಯಮ್ಮ ನೀರಲೂಟಿ, ತಾಪಂ ಅಧ್ಯಕ್ಷ ವಿರೂಪಾಕ್ಷಿಗೌಡ, ನಗರಸಭೆ ಸದಸ್ಯರು ಗೈರಾಗಿದ್ದರು. ನಿಗದಿ ವೇಳೆಗಿಂತ ಕಾರ್ಯಕ್ರಮ ಎರಡು ಗಂಟೆ ತಡವಾಗಿ ಆರಂಭವಾಯಿತು. ಅಹಿತಕರ ಘಟನೆ ಜರುಗದಂತೆ ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.