Gangavathi ; ಕಡೆಬಾಗಿಲು-ಹೊಸಪೇಟೆ ರಸ್ತೆಯಲ್ಲಿ ಬೃಹತ್ ಲಾರಿಗಳ ಸಂಚಾರ ನಿಷೇಧ
ಉದಯವಾಣಿ ವಿಸ್ತೃತ ವರದಿ ಪ್ರಕಟಿಸಿತ್ತು... ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಆದೇಶ..
Team Udayavani, Aug 7, 2023, 7:40 PM IST
ಗಂಗಾವತಿ: ತಾಲೂಕಿನ ಕಡೆಬಾಗಿಲು -ಹೊಸಪೇಟೆ ರಸ್ತೆಯಲ್ಲಿ ಬೃಹತ್ ಮೈನ್ಸ್ ಮತ್ತು ಮರಳು ಟ್ರಕ್ ಗಳ ಸಂಚಾರವನ್ನು ಪೊಲೀಸ್ ಇಲಾಖೆಯವರು ಕಟ್ಟುನಿಟ್ಟಾಗಿ ನಿಷೇಧ ಮಾಡಿದ್ದು ಕಳೆದ ಎರಡು ದಿನಗಳಿಂದ ಜುಲೈ ನಗರ ಮತ್ತು ಗಂಗಾವತಿ ಕೇಂದ್ರ ಬಸ್ ನಿಲ್ದಾಣದ ಹತ್ತಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಿ ಅಕ್ರಮವಾಗಿ ಬರುವ ಲಾರಿಗಳನ್ನು ವಾಪಸ್ ಕಳಿಸುತ್ತಿದ್ದಾರೆ.
ಗಂಗಾವತಿ ಕಡೆ ಬಾಗಿಲು ಹೊಸಪೇಟೆ ಆನೆಗುಂದಿ ಮುನಿರಾಬಾದ್ ರಸ್ತೆ ಅತ್ಯಂತ ಕಿರಿದಾಗಿದ್ದು ಇಲ್ಲಿ ಬೃಹತ್ ಗಾತ್ರದ ಲಾರಿಗಳು ಮತ್ತು ಮರಳಿನ ಟ್ರಕ್ ಗಳು ವ್ಯಾಪಕವಾಗಿ ಸಂಚಾರ ಮಾಡುತ್ತಿದ್ದವು ಇದರಿಂದಾಗಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಕಿಷ್ಕಿಂಧಾ ಅಂಜನಾದ್ರಿ ಸೇರಿದಂತೆ ಆನೆಗೊಂದಿ ಭಾಗದ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರಿಗೆ ಇದರಿಂದ ಬಹಳ ತೊಂದರೆಯಾಗಿತ್ತು. ಈ ಕುರಿತು ಉದಯವಾಣಿ ಆ.03 ರಂದು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು ಇದನ್ನು ಗಮನಿಸಿದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಈ ಹಿಂದೆ ಮಾಡಿದ್ದ ಆದೇಶದಂತೆ ಕಡೆಬಾಗಿಲು,ಆನೆಗೊಂದಿ ,ಹೊಸಪೇಟೆ ರಸ್ತೆಯಲ್ಲಿ ಬೃಹತ್ ಗಾತ್ರದ ಮೈನ್ಸ್ ಮತ್ತು ಮರಳಿನ ಲಾರಿಗಳ ಸಂಚಾರವನ್ನು ನಿಷೇಧ ಮಾಡಿ ಆದೇಶವನ್ನು ಪುನರ್ ಜಾರಿ ಮಾಡಲಾಗಿದೆ. ಗಂಗಾವತಿಯ ಜುಲೈ ನಗರ ಮತ್ತು ಕೇಂದ್ರ ಬಸ್ ನಿಲ್ದಾಣದ ಹತ್ತಿರ ಪೊಲೀಸರನ್ನು ಯೋಜನೆ ಮಾಡುವ ಮೂಲಕ ಅಕ್ರಮ ಸಂಚಾರಕ್ಕೆ ತಡೆ ನೀಡಲಾಗುದೆ. ಜಿಲ್ಕಾಡಳಿತ ಮತ್ತು ಪೊಲೀಸ್ ಇಲಾಖೆಯ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ