ಜಿಡ್ದುಗಟ್ಟಿದ ಯುಜಿಡಿ ಕಾಮಗಾರಿ 


Team Udayavani, Sep 17, 2018, 5:17 PM IST

17-sepctember-22.jpg

ಗಂಗಾವತಿ: ನಗರದ ರಸ್ತೆಗಳು ಸೇರಿ ವಾರ್ಡ್‌ನ ಒಳರಸ್ತೆಗಳನ್ನು ಹಿಂದಿನ ಸರಕಾರದ ಅವಧಿಯಲ್ಲಿ ಕೋಟ್ಯಂತರ ರೂ. ಖರ್ಚು ಮಾಡಿ ಡಾಂಬರೀಕರಣ ಮತ್ತು ಕಾಂಕ್ರೀಟ್‌ ರಸ್ತೆಗಳನ್ನಾಗಿ ನಿರ್ಮಿಸಲಾಗಿತ್ತು. ಇದೀಗ ಒಳಚರಂಡಿ ಮತ್ತು ನಗರಸಭೆಯ ಕುಡಿಯುವ ನೀರಿನ ಪೈಪ್‌ಗ್ಳ ದುರಸ್ತಿ ನೆಪದಲ್ಲಿ ನಗರದ ಶೇ. 80ರಷ್ಟು ರಸ್ತೆಗಳನ್ನು ಅಗೆಯಲಾಗಿದೆ. ಇದರಿಂದ ಜನರ ಸಂಚಾರಕ್ಕೆ ತೊಂದರೆಯಾಗಿದ್ದು, ಕೋಟ್ಯಂತರ ರೂ. ಗಳನ್ನು ನೀರಿನಲ್ಲಿ ಹೋಮ ಮಾಡಿದಂತಾಗಿದೆ.

ಕಳೆದ 18 ವರ್ಷಗಳಿಂದ ನಗರದಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದು, ಇದು ಯಾವಾಗ ಪೂರ್ಣಗೊಳ್ಳುತ್ತದೆ ಎಂಬುದು ದೇವರೇ ಬಲ್ಲ. ಪ್ರತಿ ವರ್ಷ ಗುತ್ತಿಗೆದಾರ ಬದಲಾಗುತ್ತಾರೆ. ಪುನಃ ಹೊಸ ಗುತ್ತಿಗೆದಾರ ನಗರದ ರಸ್ತೆಗಳನ್ನು ಅಗೆಸುತ್ತಾರೆ. ಇದು ಹೀಗೆ ನಡೆದಿದ್ದು, ಆಗಾಗ ನಗರಸಭೆಯ ಅಧಿಕಾರಿಗಳು ನೀರಿನ ಪೈಪ್‌ ದುರಸ್ತಿ ನೆಪದಲ್ಲಿ ಅಗೆಯುವ ಮೂಲಕ ರಸ್ತೆಗಳು ಹಾಳಾಗಲು ಕಾರಣರಾಗಿದ್ದಾರೆ. ವರ್ಷದಲ್ಲಿ ನಾಲ್ಕೈದು ಭಾರಿ ಕುಡಿಯುವ ನೀರಿನ ಪೈಪ್‌ಗ್ಳ ದುರಸ್ತಿ ನೆಪದಲ್ಲಿ ನಗರಸಭೆಯವರು ಆನೆಗೊಂದಿ ರಸ್ತೆ, ಕೇಂದ್ರ ಬಸ್‌ ನಿಲ್ದಾಣ, ನೀಲಕಂಠೇಶ್ವರ ಕ್ಯಾಂಪ್‌, ಮಹಾವೀರ ವೃತ್ತ ಹೀಗೆ ಹಲವು ಕಡೆ ರಸ್ತೆ ಅಗೆದು ಹಾಳು ಮಾಡಿದ್ದಾರೆ. ಯಾವುದೇ ಯೋಜನೆ ಹಾಗೂ ವ್ಯವಸ್ಥೆ ಇಲ್ಲದೇ ರಸ್ತೆ ಅಗೆಯುವ ಮೂಲಕ ನಗರದ ಸೌಂದರ್ಯಕ್ಕೆ ಧಕ್ಕೆ ತಂದಿದ್ದಾರೆ.

ಲಿಂಗರಾಜ್‌ ಕ್ಯಾಂಪ್‌ಗೆ ಕುಡಿಯುವ ನೀರು ಪೂರೈಕೆ ಮಾಡುವ ಪೈಪ್‌ ದುರಸ್ತಿ ನೆಪದಲ್ಲಿ ಕನಕಗಿರಿ ರಸ್ತೆಯ ನಗರಸಭೆ ಕಾಂಪ್ಲೆಕ್ಸ್‌ ಎದುರು ಕಳೆದ ಕೆಲ ದಿನಗಳ ಹಿಂದೆ ಸುಮಾರು 30 ಮೀಟರ್‌ ನೆಲವನ್ನು ಅಗೆಯಲಾಗಿದೆ. ಆದರೆ ಪೈಪ್‌ ದುರಸ್ತಿ ಮಾಡುತ್ತಿಲ್ಲ. ಅಗೆದ ನೆಲವನ್ನು ಮುಚ್ಚದೇ ಇರುವ ಕಾರಣ ಹಲವು ಜನರು ತೆಗ್ಗಿನಲ್ಲಿ ಬಿದ್ದು ಗಾಯಗೊಂಡ ಘಟನೆಯೂ ನಡೆದಿವೆ. 

ಒಬ್ಬರ ಮೇಲೊಬ್ಬರ ಆರೋಪ: ನಗರದ ರಸ್ತೆ ಅಗೆಯುವ ಕುರಿತು ಯುಜಿಡಿ ಮತ್ತು ನಗರಸಭೆ ಅಧಿಕಾರಿಗಳು ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತ ಜವಾಬ್ದಾರಿಯಿಂದ ಜಾರಿಕೊಳ್ಳುವ ಮಾತನಾಡುತ್ತಿದ್ದಾರೆ. ಸಾರ್ವಜನಿಕರು ಈ ಕುರಿತು ದೂರು ನೀಡಲು ನಗರಸಭೆಗೆ ಆಗಮಿಸಿದರೆ ಈ ಕಾಮಗಾರಿ ನಮಗೆ ಸಂಬಂಧಿಸಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಯುಜಿಡಿ ಅಧಿಕಾರಿಗಳನ್ನು ವಿಚಾರಿಸಲು ಅವರು ಕೈಗೆ ಸಿಗುವುದೇ ಇಲ್ಲ. 

ಸರಕಾರದ ಕೋಟ್ಯಂತರ ರೂ. ಅನುದಾನ ಬಳಕೆ ಮಾಡಿ ರಸ್ತೆ ನಿರ್ಮಾಣ ಮಾಡಲಾಗಿದೆ. ಯುಜಿಡಿ ಮತ್ತು ನಗರಸಭೆಯವರು ಪದೇ ಪದೇ ಅಗೆಯುವ ಮೂಲಕ ನಗರದ ಸೌಂದರ್ಯ ಹಾಳು ಮಾಡುವ ಜತೆ ಸಾರ್ವಜನಿಕರ ಹಣ ಪೋಲು ಮಾಡುತ್ತಿದ್ದಾರೆ. ನಗರಸಭೆ ಅಧಿ ಕಾರಿಗಳನ್ನು ಈ ಕುರಿತು ಕೇಳಿದರೆ ಹಾರಿಕೆ ಉತ್ತರ ನೀಡುತ್ತಾರೆ. ಕೂಡಲೇ ಜಿಲ್ಲಾಧಿಕಾರಿಗಳು ಇತ್ತ ಗಮನ ಹರಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.
ರಾಜಾಸಾಬ್‌ ನವಣೆಕ್ಕಿ, 11ನೇ ವಾರ್ಡ್‌ ನಿವಾಸಿ.

ನಗರದ ವಿವಿಧ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಪೈಪ್‌ ದುರಸ್ತಿಗಾಗಿ ನೆಲ ಅಗೆಯಲಾಗಿದ್ದು ದುರಸ್ತಿ ಮಾಡಿ ನೆಲ ಮುಚ್ಚುವ ಕಾರ್ಯ ತ್ವರಿತವಾಗಿ ನಡೆಯುತ್ತಿದೆ. ಎಲ್ಲಿಯೂ ರಸ್ತೆ ಅಗೆದಿಲ್ಲ. ಯುಜಿಡಿ ಕಾಮಗಾರಿ ನಡೆದಿದ್ದು, ಅಗೆದ ರಸ್ತೆ ಮುಚ್ಚಿ ಡಾಂಬರೀಕರಣ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಪುನಃ ಇನ್ನೊಮ್ಮೆ ನಗರಸಭೆಯಿಂದ ಪತ್ರ ಬರೆದು ತಿಳಿಸಲಾಗುತ್ತದೆ.
ಕೆ. ಶ್ರುತಿ, ಪೌರಾಯುಕ್ತ

ಕೆ. ನಿಂಗಜ್ಜ

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.