ಗಂಗಾವತಿ: ಮತ ಚಲಾಯಿಸಿ ಬ್ಯಾಲೆಟ್ ಪೇಪರ್ ಹರಿದು ಹಾಕಿದ ಕುಡುಕರು; ಪ್ರಕರಣ ದಾಖಲು
Team Udayavani, Dec 27, 2020, 4:58 PM IST
ಗಂಗಾವತಿ: ತಾಲೂಕಿನ ಆನೆಗೊಂದಿ ಗ್ರಾಪಂ ಚುನಾವಣೆ ವಾರ್ಡ್ 01 ಮತ್ತು 03 ರ ಮತಗಟ್ಟೆ ಕೇಂದ್ರದಲ್ಲಿ ಮದ್ಯ ಸೇವಿಸಿ ಆಗಮಿಸಿದ್ದ ಇಬ್ಬರು ಮತದಾರರು, ಮತ ಚಲಾವಣೆಯ ನಂತರ ಬ್ಯಾಲೆಟ್ ಪೇಪರ್ ಹರಿದು ಹಾಕಿದ ಘಟನೆ ಜರುಗಿದೆ.
ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ಮತದಾನ ಸ್ಥಗಿತಗೊಂಡಿದ್ದು, ಸ್ಥಳಕ್ಕೆ ತಹಸೀಲ್ದಾರ್ ಎಂ.ರೇಣುಕಾ, ಇಒ ಡಾ.ಮೋಹನಕುಮಾರ, ಡಿಎಸ್ಪಿ ರುದ್ರೇಶ ಉಜ್ಜನಕೊಪ್ಪ, ಗ್ರಾಮೀಣ ಸಿಪಿಐ ಉದಯರವಿ, ಪಿಎಸ್ ಐ ಜೆ.ದೊಡ್ಡಪ್ಪ ಭೇಟಿ ನೀಡಿ ಪರಿಶೀಲಿಸಿದರು.
ಬ್ಯಾಲೆಟ್ ಪೇಪರ್ ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮ್ಮಪ್ಪ ಹಾಗೂ ನಂದಕುಮಾರ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ : ಮಧ್ಯಾಹ್ನ 3ಕ್ಕೆ ಶೇ.67.14 ರಷ್ಟು ಮತದಾನ
ಕೊಪ್ಪಳ ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ 76 ಗ್ರಾಪಂಗೆ ನಡೆದ ಚುನಾವಣೆಯ ಮತದಾನದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ.67.14 ರಷ್ಟು ಮತದಾನವಾಗಿದೆ. ಕುಷ್ಟಗಿ ತಾಲೂಕಿನಲ್ಲಿ ಶೇ.64.90, ಕನಕಗಿರಿ ತಾಲೂಕಿನಲ್ಲಿ ಶೇ. 72.26, ಕಾರಟಗಿ ತಾಲೂಕಿನಲ್ಲಿ ಶೇ. 68.51 ಹಾಗೂ ಗಂಗಾವತಿ ತಾಲೂಕಿನಲ್ಲಿ ಶೇ. 67.75 ರಷ್ಟು ಮತದಾನ ಸೇರಿದಂತೆ ಒಟ್ಟಾರೆ ಜಿಲ್ಲೆಯಾದ್ಯಂತ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 67.14 ರಷ್ಟು ಮತದಾನ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
Online Bitcoin Gambling Enterprises: An Overview to Betting with Cryptocurrency