Gangavati: ಅಕ್ರಮ ಪಟಾಕಿ ದಾಸ್ತಾನು… ಅಧಿಕಾರಿಗಳ ದಾಳಿ, ಲಕ್ಷಾಂತರ ರೂ. ಪಟಾಕಿ ವಶಕ್ಕೆ


Team Udayavani, Oct 12, 2023, 5:10 PM IST

Gangavati: ಅಕ್ರಮ ಪಟಾಕಿ ದಾಸ್ತಾನು… ಅಧಿಕಾರಿಗಳ ದಾಳಿ, ಲಕ್ಷಾಂತರ ರೂ. ಪಟಾಕಿ ವಶಕ್ಕೆ

ಗಂಗಾವತಿ: ಬೆಂಗಳೂರು ಮತ್ತು ತಮಿಳುನಾಡು ಪಟಾಕಿ ದಾಸ್ತಾನು ಮಳಿಗೆಗಳಲ್ಲಿ ಬೆಂಕಿ ಅನಾಹುತ ಜರುಗಿ ಹಲವರು ಮೃತರಾದ ಬೆನ್ನ ಹಿಂದೆ ಸರಕಾರ ಎಚ್ಚೆತ್ತುಕೊಂಡಿದ್ದು ಸರಕಾರದ ಸೂಚನೆ ಮೇರೆಗೆ ತಾಲೂಕು ಆಡಳಿತ ನಗರದ ಪಟಾಕಿ ಮಾರಾಟಗಾರರ ದಾಸ್ತಾನು ಮಳಿಗೆಗಳ ಮೇಲೆ ದಾಳಿ ನಡೆಸಿ ಲಕ್ಷಾಂತರ ರೂ.ಗಳ ಪಟಾಕಿ ಮತ್ತು ಸಿಡಿ ಮದ್ದುಗಳನ್ನು ವಶಕ್ಕೆ ಪಡೆದಿದೆ.

ತಹಸೀಲ್ದಾರ್ ಸೂಚನೆ ಮೇರೆಗೆ ಗಂಗಾವತಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ತಾತ್ಕಲಿಕ ಪರವಾನಿಗೆ ಪಡೆದಿರುವ ಮತ್ತು ಅರ್ಜಿ ಸಲ್ಲಿಸಿರುವ ಕರಿಬಸಪ್ಪ ಅಂಗಡಿ, ಅಶೋಕ ಹೂಗಾರ, ಮಹಾಬಳೇಶ್ವರ, ಪಾಂಡುರಂಗ, ಬಳ್ಳಾರಿ ಚನ್ನಬಸಪ್ಪ, ಚಂದ್ರಶೇಖರ, ಪಾರ್ವತಿ, ಪ್ರಲ್ಹಾದ್ ಇವರ ಅಂಗಡಿ ಮತ್ತು ದಾಸ್ತಾನು ಮಳಿಗೆಗಳ ಮೇಲೆ ತಾಲೂಕು ಆಡಳಿತದ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿ ಒಟ್ಟು ಮೂರು ಕಡೆ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ಮತ್ತು ಸಿಡಿ ಮದ್ದುಗಳ ಪಂಚನಾಮೆ ನಡೆಸಿ ವಶಕ್ಕೆ ಪಡೆದು ಅಕ್ರಮವಾಗಿ ಸಂಗ್ರಹಿಸಿದವರ ಮೇಲೆ ನಗರಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದಾರೆ.

ದಾಳಿಯಲ್ಲಿ ಡಿವೈಎಸ್‌ಪಿ ಸಿದ್ದಲಿಂಗಪ್ಪ ಗೌಡ, ನಗರಠಾಣೆ ಪ್ರಭಾರಿ ಪಿಐ ಮಂಜುನಾಥ ಸಿಲವೇರಿ, ಪೌರಾಯುಕ್ತ ವಿರೂಪಾಕ್ಷಮೂರ್ತಿ, ತಾ.ಪಂ.ಇಒ ಲಕ್ಷ್ಮಿ ದೇವಿ, ಲೋಕೊಪಯೋಗಿ ಇಲಾಖೆಯ ಎಇಇ ವಿಶ್ವನಾಥ, ಜೆಸ್ಕಾಂ ಇಂಜಿನಿಯರ್ ಪ್ರವೀಣ ಹಾಗೂ ಅಗ್ನಿಶಾಮಕದಳದ ಅಧಿಕಾರಿಗಳಿದ್ದರು.

ಜನತೆಯ ಸುರಕ್ಷತೆಯ ದೃಷ್ಠಿಯಿಂದ ಜನ ವಸತಿ ಪ್ರದೇಶದಲ್ಲಿ ಪಟಾಕಿ, ಸಿಡಿಮದ್ದುಗಳ ಅಕ್ರಮ ದಾಸ್ತಾನು ಪತ್ತೆ ಮಾಡಲು ಸರಕಾರ ಸೂಚನೆ ನೀಡಿದೆ. ಗಂಗಾವತಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ಪಟಾಕಿ ಮತ್ತು ಸಿಡಿಮದ್ದುಗಳ ಮಾರಾಟ ಮಾಡುವವರ ಮಳಿಗೆ ಅಂಗಡಿಗಳಲ್ಲಿ ಪಟಾಕಿ ದಾಸ್ತಾನು ಪರಿಶೀಲನೆ ನಡೆಸಲಾಗುತ್ತಿದೆ. ಗಂಗಾವತಿಯಲ್ಲಿ 2-3 ಕಡೆ ಅಕ್ರಮ ಪಟಾಕಿಗಳ ದಾಸ್ತಾನು ಪತ್ತೆಯಾಗಿದ್ದು ಪಂಚನಾಮೆ ಇತರೆ ಅಗತ್ಯ ಕಾನೂನು ರೀತ್ಯಾ ಅವರ ವಿರುದ್ಧ ಕೇಸ್ ದಾಖಲಿಸಲಾಗುತ್ತದೆ. ಸಾರ್ವಜನಿಕರು ಸಹ ತಾಲೂಕಿನಲ್ಲಿ ಅಕ್ರಮವಾಗಿ ಪಟಾಕಿ, ಸಿಡಿಮದ್ದುಗಳು ಮತ್ತು ಸ್ಪೋಟಕ ವಸ್ತುಗಳನ್ನು ಯಾರಾದರೂ ಸಂಗ್ರಹಿಸಿದ ಮಾಹಿತಿ ಇದ್ದರೆ ಪೊಲೀಸ್ ಇಲಾಖೆ ಅಥವಾ ತಹಸೀಲ್ ಕಚೇರಿಗೆ ತಿಳಿಸಬೇಕು.
-ಸಿದ್ದಲಿಂಗಪ್ಪಗೌಡ ಪಾಟೀಲ್ ಡಿವೈಎಸ್‌ಪಿ.

ಇದನ್ನೂ ಓದಿ: Dudhsagar Falls: ನಿರ್ಬಂಧ ತೆರವು… ದೂದ್ ಸಾಗರ್ ಜಲಪಾತ ವೀಕ್ಷಣೆಗೆ ಮುಕ್ತ ಅವಕಾಶ

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.