ಗಂಗಾವತಿ: ದನದಮಾಂಸ ಅಕ್ರಮ ಮಾರಾಟ ಅಧಿಕಾರಿಗಳ ದಾಳಿ; 70 ಕೆಜಿ ಮಾಂಸ ವಶಕ್ಕೆ
Team Udayavani, Jan 13, 2022, 5:33 PM IST
ಗಂಗಾವತಿ: ನಗರದ ಬೇರೂನಿ ಮಸೀದಿ ಹತ್ತಿರ ದನದ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಪೊಲೀಸ್ ಇಲಾಖೆಯ 112 ನಂಬರ್ ಗೆ ದೂರು ಬಂದ ಹಿನ್ನೆಲೆಯಲ್ಲಿ ನಗರಸಭೆ, ಪೊಲೀಸ್, ಪಶುವೈದ್ಯಕೀಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ದಾಳಿ ನಡೆಸಿ 70 ಕೆಜಿ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಬೈಪಾಸ್ ರಸ್ತೆ ಹಾಗೂ ಜಂತಗಲ್ ನಲ್ಲಿದ್ದ ದನದ ಮಾಂಸ ಅಕ್ರಮ ಮಾರಾಟ ಕೇಂದ್ರಗಳನ್ನು ತಾಲೂಕು ಆಡಳಿತ ಗೋಹತ್ಯೆ ನಿಷೇಧ ಕಾಯ್ದೆ ಅನ್ವಯ ತೆರವುಗೊಳಿಸಿದ ನಂತರ ಅನಾಮಧೇಯ ಸ್ಥಳದಲ್ಲಿ ಗೋವುಗಳನ್ನು ಹತ್ಯೆ ಮಾಡಿ ದನದ ಮಾಂಸವನ್ನು ಬೇರೂನಿ ಮಸೀದಿ ಹತ್ತಿರ ಸುಮಾರು ಹತ್ತು ಸೆಡ್ಗಳಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಪೊಲೀಸ್ ಇಲಾಖೆಯ 112 ನಂಬರ್ ಗೆ ಕರೆ ಮಾಡಿ ದೂರು ದಾಖಲು ಮತ್ತು ಸಂಘ ಪರಿವಾರದ ಮುಖಂಡ ಎಚ್.ಶ್ರೀಕಾಂತ ನೇತೃತ್ವದಲ್ಲಿ ನಗರಸಭೆ ಪೌರಾಯುಕ್ತರು ಮತ್ತು ನಗರ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ ತಕ್ಷಣ ನಗರಸಭೆ, ಪೊಲೀಸ್, ಪಶುವೈದ್ಯಕೀಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ಮಾಂಸದ ಅಂಗಡಿಗಳ ಮಾಲೀಕರು ಅಲ್ಲಿಂದ ಓಡಿ ಹೋಗಿದ್ದಾರೆ. ದಾಳಿಯ ಸಂದರ್ಭದಲ್ಲಿ ಇದ್ದ ಸುಮಾರು 70 ಕೆಜಿ ಮಾಂಸವನ್ನು ವಶಕ್ಕೆ ಪಡೆದು ಪಶುವೈದ್ಯಕೀಯ ಇಲಾಖೆ ಅಧಿಕಾರಿಗಳು ಮಾಂಸವನ್ನು ಯಾವ ಪ್ರಾಣಿಯದ್ದು ಎಂದು ಪರೀಕ್ಷೆ ಮಾಡಿದ ನಂತರ ಅಲ್ಲಿದ್ದ ಅಂಗಡಿಗಳ ಮಾಲೀಕರ ವಿರುದ್ಧ ದೂರು ದಾಖಲಿಸಿಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.
ಅಕ್ರಮ ಮಾಂಸ ಮಾರಾಟದ ಅಂಗಡಿಗಳ ಮೇಲಿನ ದಾಳಿಯ ಸಂದರ್ಭದಲ್ಲಿ ನಗರಸಭೆ ನೈರ್ಮಲ್ಯಾಧಿಕಾರಿ ನಾಗರಾಜ, ಪಿಐ ಟಿ.ವೆಂಕಟಸ್ವಾಮಿ, ಕಂದಾಯ ಗ್ರಾಮಲೆಕ್ಕಾಧಿಕಾರಿ ಅಭಿಷೇಕ ಸೇರಿ ಪಶುವೈದ್ಯಕೀಯ ಇಲಾಖೆಯ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್