ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಮುಸ್ಲಿಂ ವೃದ್ಧನ ಮೇಲೆ ದೌರ್ಜನ್ಯ… ಪ್ರಕರಣ ದಾಖಲು
Team Udayavani, Dec 1, 2023, 1:33 PM IST
ಗಂಗಾವತಿ : ನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವೃದ್ಧರೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ.
ನವೆಂಬರ್ 25ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಈ ಕುರಿತು ಎಸ್ ಡಿಪಿಐ ಪಕ್ಷದ ಕಾರ್ಯಕರ್ತರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಲ್ಲೆಗೊಳಗಾದ ವೃದ್ಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೋಟೋ ಹಾಕಿ ಘಟನೆಯನ್ನು ಖಂಡಿಸಿ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.
ಘಟನೆಯ ವಿವರ: ಗಂಗಾವತಿ ಮಹೆಬೂಬನಗರದ ನಿವಾಸಿ ಅಂಧ ವ್ಯಕ್ತಿಯಾಗಿರುವ ಹುಸೇನಸಾಬ ಹೊಸಪೇಟೆ ಯಿಂದ ನ.24 ರಂದು ಬೆಳಗಿನ ಜಾವ ಆಗಮಿಸಿ ಮನೆಗೆ ತೆರಳಲು ಆಟೋಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಕೆಲ ಯುವಕರ ಗುಂಪು ಸ್ಥಳಕ್ಕೆ ಆಗಮಿಸಿ ಮಾತನಾಡಿಸುವ ನೆಪದಲ್ಲಿ ಬೈಕ್ ಮೇಲೆ ಹತ್ತಿಸಿಕೊಂಡು ಆರೋಪಿಗಳು ಸಿದ್ದಿಕೇರಿಗೆ ಹೋಗುವ ರಸ್ತೆಯ ರೈಲ್ವೆ ಸೇತುವೆಯ ಕೆಳಗಡೆ ಕರೆದುಕೊಂಡು ಹೋಗಿ ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ನನ್ನ ಗಡ್ಡಕ್ಕೆ ಬೆಂಕಿ ಹಚ್ಚಿದ್ದಾರೆ” “ಆರೋಪಿಗಳು ನನ್ನ ಬಳಿಯಿದ್ದ ಹಣ ದೋಚಿಕೊಂಡು ಹೋಗಿದ್ದಾರೆ. ಬೆಳಗಿನ ಜಾವ ಕುರಿ ಕಾಯುವ ಹುಡುಗರು ನನ್ನನ್ನು ನೋಡಿ ಮನೆಯ ವಿಳಾಸ ಕೇಳಿ ರಕ್ಷಣೆ ಮಾಡಿ, ಮನೆಗೆ ತಲುಪಿಸಿದ್ದಾರೆ” ಎಂದು ಹುಸೇನಸಾಬ್ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಘಟನೆಯ ಕುರಿತು ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Bomb Threat; ಶಾಲೆಗಳಿಗೆ ಬೆದರಿಕೆ ಹಾಕಿದವರನ್ನು ಬಿಡುವ ಪ್ರಶ್ನೆಯಿಲ್ಲ: ಮಧು ಬಂಗಾರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು