ಎನ್ ಇಪಿ ಜಾರಿಯಿಂದ ದಲಿತರು, ಅಲ್ಪಸಂಖ್ಯಾತರನ್ನು ಶಿಕ್ಷಣದಿಂದ ದೂರ ಉಳಿಸುವ ಹುನ್ನಾರ


Team Udayavani, Jul 23, 2022, 8:24 PM IST

ಎನ್ ಇಪಿ ಜಾರಿಯಿಂದ ದಲಿತರು, ಅಲ್ಪಸಂಖ್ಯಾತರನ್ನು ಶಿಕ್ಷಣದಿಂದ ದೂರ ಉಳಿಸುವ ಹುನ್ನಾರ

ಗಂಗಾವತಿ : ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ ಇಪಿ) ಜಾರಿಗೊಳಿಸಿ ಉಡುಪು, ಆಹಾರದ ಹೆಸರಿನಲ್ಲಿ ಹೆಣ್ಣು ಮಕ್ಕಳು ಆದಿವಾಸಿಗಳು, ದಲಿತರು, ಹಿಂದುಳಿದರು, ಅಲ್ಪಸಂಖ್ಯಾತರನ್ನು ಶಿಕ್ಷಣದ ದೂರ ಉಳಿಸಲು ಮನುವಾದಿಗಳು ವ್ಯವಸ್ಥಿತ ಸಂಚು ರೂಪಿಸಿದ್ದಾರೆ ಎಂದು ಎಸ್ಎಫ್ಐ ರಾಷ್ಟಾಧ್ಯಕ್ಷ ವಿ. ಪಿ. ಸಾನು ಕಳವಳ ವ್ಯಕ್ತಪಡಿಸಿದ್ದಾರೆ.

ಅವರು ಶನಿವಾರ ನಗರದ ಶ್ರೀ ಚನ್ನಬಸವ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ ಎಫ್ ಐ ) ರಾಜ್ಯ ಅಧ್ಯಯನ ಶಿಬಿರ ಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಸರ್ಕಾರದ ಶಿಕ್ಷಣ ವಿರೋಧಿ ನೀತಿಗಳ ವಿರುದ್ಧ ದೇಶಾದ್ಯಂತ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ದೊಡ್ಡ ಪ್ರಮಾಣದ ಹೋರಾಟ ಚಳುವಳಿಯನ್ನು ಬೆಳೆಸಲಿದೆ. ಇದರ ಭಾಗವಾಗಿ ಆಗಸ್ಟ್ 01 ರಿಂದ ದೇಶಾದ್ಯಂತ ಶಿಕ್ಷಣ ಉಳಿಸಿ ಸಂವಿಧಾನಗೊಳಿಸಿ ದೇಶ ಉಳಿಸಿ ಎಂಬ ಹೆಸರಿನಲ್ಲಿ ಅಖಿಲ ಭಾರತ ಜಾತ ಹಮ್ಮಿಕೊಳ್ಳಲಾಗಿದೆ.

ಬಂಡವಾಳಶಾಹಿ ಆರ್ಥಿಕ ನೀತಿಗಳಿಂದಾಗಿ ಕೋವಿಡ್ ಸಂದರ್ಭದಲ್ಲಿ ಜಗತ್ತಿನಲ್ಲಿ ಆಹಾರ ಮತ್ತು ಲಸಿಕೆ ಅಸಮಾನ ಹಂಚಿಕೆಯಾಗಿದೆ. ಒಂದು ಕಾಲದಲ್ಲಿ ಅಮೇರಿಕದ ಆರ್ಥಿಕ ದಿಗ್ಬಂದನಕ್ಕೆ ಒಳಗಾಗಿ ಒಂದು ಸಿರಂಜ್ ನೀಡಲು ಸಹ ಪರದಾಡುತ್ತಿದ್ದ ಕ್ಯೂಬಾ ಸಮಾಜವಾದಿ ರಾಷ್ಟ್ರ ಈ ಕೋವಿಡ್ ಸಂದರ್ಭದಲ್ಲಿ ಜಗತ್ತಿನ ಶ್ರೀಮಂತ ದೇಶಗಳಿಗೆ ವೈದ್ಯರು ಹಾಗೂ ವೈದ್ಯಕೀಯ ಪರಿಕರಗಳನ್ನು ಕಳುಹಿಸಿದೆ. ಇದು ಜಗತ್ತಿನ ಜನರು ಕೋವಿಡ್ ನಂತರದಲ್ಲಿ ಬಲಪಂಥೀಯ ರಾಜಕಾರಣದಿಂದ ಎಡಪಂಥೀಯ ರಾಜಕಾರಣದ ಕಡೆಗೆ ವಾಲುತ್ತಿದ್ದಾರೆ ಎಂಬುದನ್ನು ಸೂಚಿಸುತ್ತದೆ.

ಲ್ಯಾಟಿನ್ ಅಮೆರಿಕಾದ ದೇಶಗಳು ಸೇರಿದಂತೆ ಚಿಲಿ, ಬ್ರೆಜಿಲ್, ವಿಯೆಟ್ನಾಂ, ಕ್ಯೂಬಾ ಮುಂತಾದ ದೇಶಗಳು ಸಮಾಜವಾದಿ ಆರ್ಥಿಕ ನೀತಿಗಳಿಂದ ಆ ದೇಶದ ಎಲ್ಲಾ ಜನರಿಗೂ ಆಹಾರ, ಅಕ್ಷರ, ಆರೋಗ್ಯವನ್ನು ಉಚಿತವಾಗಿ ನೀಡುತ್ತಿವೆ. ನರೇಂದ್ರ ಮೋದಿ 2014ರಲ್ಲಿ ಅಧಿಕಾರಕ್ಕೆ ಬಂದ ಮೇಲೆ ಅವರ ಅನುಸರಿಸಿದ ಬಂಡವಾಳಶಾಹಿ ಆರ್ಥಿಕ ನೀತಿಗಳಿಂದ ನಿರುದ್ಯೋಗ ಹೆಚ್ಚಾಗಿದೆ. ಆದರೆ ಚುನಾವಣೆ ಸಂದರ್ಭದಲ್ಲಿ ಒಂದೊಂದು ಸುಳ್ಳು ಹೇಳಿ ಯುವಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. 2014ರ ಚುನಾವಣೆಯಲ್ಲಿ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆಂದು ಹೇಳಿ ಉದ್ಯೋಗಗಳನ್ನು ನಾಶಗೊಳಿಸಿದ್ದಾರೆ.

ಇದೀಗ ಚುನಾವಣೆ ಒಂದುವರೆ ವರ್ಷ ಇರುವಾಗ ಅಗ್ನಿಪತ್ ಯೋಜನೆ ಮೂಲಕ ಕೇವಲ ನಾಲ್ಕು ವರ್ಷಗಳಿಗೆ 10 ಲಕ್ಷ ಜನ ಸೈನಿಕರನ್ನು ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದಿರುವುದು ದೇಶದ ಭದ್ರತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡಲಿದೆ. ಏಕೆಂದರೆ ಅಧಿಕಾರಕ್ಕೆ ಬರುವ ಮುನ್ನ ಒನ್ ರಾಂಕ್ ಒನ್ ಪೆನ್ಷನ್ ಎಂದು ಸೈನಿಕರಿಗೆ ಭರವಸೆ ನೀಡಿ ಇದೀಗ ಉಲ್ಟಾ ಹೊಡೆದಿರುವ ಮೋದಿ ಸರ್ಕಾರ ಸೈನಿಕರಿಗೆ ಸಂಬಳ ನೀಡಲು ಸಹ ಸಾಧ್ಯವಿಲ್ಲ ಎಂದು ಹೇಳಿ ನಿರುದ್ಯೋಗಿ ಯುವಕರ ಪಡೆಯನ್ನು ಅಗ್ನಿ ಪಥ ಹೆಸರಿನಲ್ಲಿ ಬಳಸಿ ಬಿಸಾಕುವ ಕೆಲಸಕ್ಕೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯಾಧ್ಯಕ್ಷ ಅಮರೇಶ ಕಡಗದ್, ಗ್ಯಾನೇಶ ಕಡಗದ್, ಶಿವಕುಮಾರ್ ಈಚನಾಳ,ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ, ರಾಜ್ಯ ಪದಾಧಿಕಾರಿಗಳಾದ ಗಾಯತ್ರಿ, ಶಿವಪ್ಪ, ಶಿವಕುಮಾರ್ ಮ್ಯಾಗಳಮನಿ, ಭೀಮನಗೌಡ, ಗ್ಯಾನೇಶ ಕಡಗದ್, ರಮೇಶ ವೀರಾಪೂರು, ಸೋಮನಾಥ, ನಿರುಪಾದಿ, ಮಂಜುನಾಥ, ಮರಿನಾಗ ಸೇರಿದಂತೆ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.