ಗಂಗಾವತಿ: ಅಲ್ಪಾವಧಿಯಲ್ಲಿ 3.42 ಕೋಟಿ ರೂ.ರಾಜಸ್ವ ಸಂಗ್ರಹ
501 ಬಾರಿ ದಾಳಿ... ಅಕ್ರಮ ಮದ್ಯ ಮಾರಾಟಕ್ಕೆ ತಡೆ
Team Udayavani, Jan 31, 2024, 7:33 PM IST
ಗಂಗಾವತಿ: ಅಲ್ಪಾವಧಿಯಲ್ಲಿ ಸರಕಾರದ ಸೂಚನೆಯಂತೆ 3.42 ಕೋಟಿ ರೂ.ಗಳ ರಾಜಸ್ವ ಸಂಗ್ರಹಿಸಲಾಗಿದ್ದು ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ ಕೈಗೊಂಡು 501 ಬಾರಿ ದಾಳಿ ನಡೆಸಿ ಅಕ್ರಮ ತಡೆದು ಕೇಸ್ ದಾಖಲಿಸಲಾಗಿದೆ ಎಂದು ಅಬಕಾರಿ ವಲಯ ನಿರೀಕ್ಷಕ ವಿಠಲ್ ಪಿರಗಣ್ಣವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಲಯ ವ್ಯಾಪ್ತಿಯಲ್ಲಿ ಒಟ್ಟು 62 ಸನ್ನದು (ಮದ್ಯದ ಅಂಗಡಿಗಳು) ಇರುತ್ತವೆ. ಮೇಲಿಂದ ಮೇಲೆ ಸನ್ನದುಗಳ ತಪಾಸಣೆ ಮಾಡುತ್ತಾ ಸನ್ನದು ಷರತ್ತುಗಳ ಉಲ್ಲಂಘಿಸಿದವರ ವಿರುದ್ಧ ಕೇಸ್ ಹಾಕಲಾಗಿದೆ. 14 ಘೋರ ಪ್ರಕರಣಗಳು 22 ಬಿಎಲ್ಸಿ ಪ್ರಕರಣ, 176 ದಾಳಿಗಳನ್ನು ಮಾಡಿ 532 ಲೀ ಅಕ್ರಮ ಮದ್ಯ ಜಪ್ತಿ ಮಾಡಿ 09 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
50 ಘೋರ ಪ್ರಕರಣಗಳನ್ನು ದಾಖಲಿಸಿದ್ದು, 492, 15(ಎ) ಪ್ರಕರಣಗಳನ್ನು ದಾಖಲಿಸಿದ್ದು, ಸನ್ನದು (ಮದ್ಯ ಅಂಗಡಿ) ಮೇಲೆ 110 ಬಿಎಲ್ಸಿ ಪ್ರಕರಣಗಳನ್ನು ದಾಖಲಿಸಿದ್ದು, 01 ಎನ್.ಡಿ.ಪಿ.ಎಸ್ (ಗಾಂಜಾ) ಪ್ರಕರಣ ದಾಖಲಿಸಿ 501 ದಾಳಿಗಳನ್ನು ಮಾಡಲಾಗಿದೆ. 2260.24 ಲೀ ಅಕ್ರಮ ಮದ್ಯ ಜಪ್ತಿ ಮಾಡಲಾಗಿದೆ. 109.78 ಲೀ ಬಿಯರ್ ಜತೆ 27 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಮತ್ತು ಸನ್ನದುಗಳ ಮೇಲೆ ನಿಗಾವಹಿಸಿ ಸನ್ನದು ಷರತ್ತುಗಳ ಉಲ್ಲಂಘನೆಯಾಗದಂತೆ ಸನ್ನದುದಾರರಿಗೆ ಎಚ್ಚರಿಕೆಯನ್ನು ನೀಡಿ ಸರ್ಕಾರದ ರಾಜ್ಯಸ್ವದ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಮೇಲಾಧಿಕಾರಿಗಳ ಆದೇಶದಂತೆ ಅಕ್ರಮ ಮದ್ಯ ಮಾರಾಟ ತಡೆಯಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದು, ಅಕ್ರಮ ಮದ್ಯ ಮಾರಾಟದ ಕುರಿತು ಸಾರ್ವಜನಿಕರು ಇಲಾಖೆಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ