Tragedy: ಆಟವಾಡುತ್ತಿದ್ದಾಗ ಚರಂಡಿಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ಸಾವು
Team Udayavani, Feb 27, 2024, 7:36 PM IST
ಗಂಗಾವತಿ: ಚರಂಡಿಗೆ ಬಿದ್ದು ಒಂದುವರೆ ವರ್ಷದ ಮಗುವೊಂದು ಸಾವನ್ನಪ್ಪಿದ ಹೃದಯ ವಿದ್ರಾವಕ ಪ್ರಕರಣ ನಗರದ ಎಪಿಎಂಸಿ ಹಮಾಲರ ಕ್ವಾಟ್ರಸ್ ನಲ್ಲಿ ಮಂಗಳವಾರ ಬೆಳ್ಳಿಗ್ಗೆ ಜರುಗಿದೆ.
ಹಮಾಲರ ಕ್ವಾಟ್ರಸ್ನ ಪವಿತ್ರ ತಾಯಿ ಅಕ್ಕಮ್ಮ ಎಂಬ ಒಂದುವರೆ ವರ್ಷದ ಹೆಣ್ಣುಮಗು ಮನೆ ಹತ್ತಿರ ಆಟವಾಡುತ್ತಿರುವಾಗ ಚರಂಡಿಗೆ ಬಿದ್ದಿದೆ. ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಮಗು ಕಾಣೆಯಾಗಿರುವ ಕುರಿತು ಗಮನಕ್ಕೆ ಬಂದ ತಕ್ಷಣ ಇಡೀ ಕ್ವಾಟ್ರಸ್ ಹುಡಿಕಾಡಿದ್ದಾರೆ. ಚರಂಡಿಗಳಲ್ಲಿ ಹುಡಿಕಿದಾಗ ಮಗುವಿನ ಶವ ಚರಂಡಿಯಲ್ಲಿ ಪತ್ತೆಯಾಗಿದೆ.
ಪ್ರತಿಭಟನೆ: ಚರಂಡಿಯನ್ನು ಹಲವು ದಿನಗಳಿಂದ ಸ್ವಚ್ಛ ಮಾಡದೇ ಇರುವ ಕಾರಣ ಹಮಾಲರ ಕ್ವಾಟ್ರಸ್ ಚರಂಡಿಗಳು ತುಂಬಿದ್ದು ಮಗುವಿನ ಸಾವಿಗೆ ನಗರಸಭೆ ಕಾರಣವಾಗಿದೆ ಎಂದು ಆರೋಪಿಸಿ ಮಗುವಿನ ಕುಟುಂಬದವರು ಹಾಗೂ ಸ್ಥಳೀಯರು ನಗರಸಭೆ ಶವದೊಂದಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು. ಈ ಮಧ್ಯೆ ಪೌರಾಯುಕ್ತ ವಿರೂಪಾಕ್ಷಮೂರ್ತಿ ಸ್ಥಳಕ್ಕೆ ಆಗಮಿಸಿ ಎಪಿಎಂಸಿ ಹಮಾಲರ ಕ್ವಾಟ್ರಸ್ ಪ್ರದೇಶ ನಗರಸಭೆ ವ್ಯಾಪ್ತಿಗೆ ಬರುವುದಿಲ್ಲ. ಎಪಿಎಂಸಿಯವರೇ ಚರಂಡಿ ಸ್ವಚ್ಛ ಮಾಡಿಸಬೇಕಿತ್ತು ಎಂದು ಎಪಿಎಂಸಿ ಕಾರ್ಯದರ್ಶಿ ಎಚ್.ಪತ್ತಾರ ಅವರನ್ನು ಕರೆಸಿಕೊಂಡು ಸಮಸ್ಯೆ ಬಗ್ಗೆ ತಿಳಿಸಿದರು. ಎಪಿಎಂಸಿ ಹಾಗೂ ನಗರಸಭೆ ಅಧಿಕಾರಿಗಳು ವೈಯಕ್ತಿಕವಾಗಿ 30 ಸಾವಿರ ರೂ.ಗಳ ಪರಿಹಾರ ನೀಡಿದ್ದಾರೆ.
ಇದನ್ನೂ ಓದಿ: ಮಹಿಳೆಯ ಆತ್ಯಾಚಾರ ಪ್ರಕರಣ: ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು