ವೈಭವದ ಗವಿಸಿದ್ದೇಶ್ವರ ರಥೋತ್ಸವ


Team Udayavani, Jan 13, 2020, 1:25 PM IST

kopala-tdy-1

ಕೊಪ್ಪಳ: ಇಲ್ಲಿಯ ಗವಿಸಿದ್ದೇಶ್ವರರ ಮಹಾರಥೋತ್ಸವ ರವಿವಾರ ಸಂಜೆ ಲಕ್ಷಾಂತರ ಭಕ್ತ ಸಮೂಹದ ಮಧ್ಯೆ ವೈಭವದಿಂದ ನೆರವೇರಿತು. 6 ಲಕ್ಷಕ್ಕೂ ಅಧಿಕ ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು. ಅಂತಾರಾಷ್ಟ್ರೀಯ ಕ್ರೀಡಾಪಟು ಡಾ| ಮಾಲತಿ ಹೊಳ್ಳ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು.

ನಾಡಿನ ಹರಗುರು ಚರಮೂರ್ತಿಗಳು ರಥೋತ್ಸವದಲ್ಲಿ ಪಾಲ್ಗೊಂಡು ಶುಭ ಹಾರೈಸಿದರು. ನಾಡಿನ ಗಣ್ಯಾತೀತರು ನಾಡಿನ ಒಳಿತಿಗೆ ಬೇಡಿಕೊಂಡರು. ಸುತ್ತಲಿನ ನೂರಾರು ಹಳ್ಳಿಗಳ ಜನರು ಎತ್ತಿನ ಬಂಡಿ, ಟಂಟಂ, ಲಾರಿ ಸೇರಿ ಬಸ್‌ಗಳನ್ನೇರಿ ರವಿವಾರ ಮಧ್ಯಾಹ್ನವೇ ಜಾತ್ರೆಗೆಆಗಮಿಸಿದ್ದರೆ, ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದರು. ಮಠದಲ್ಲಿ ಧಾರ್ಮಿಕ ಸಂಪ್ರದಾಯದಂತೆನಂದಿ ಕೋಲಿನ ಮೆರವಣಿಗೆ ಜರುಗಿತು. ಗವಿಸಿದ್ದೇಶ್ವರರ ಬೆಳ್ಳಿ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡುತ್ತ ರಥೋತ್ಸವದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಅಭಿನವ ಗವಿಸಿದ್ದೇಶ್ವರ ಮಹಾ ಸ್ವಾಮೀಜಿ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಬಳಿಕ ಧ್ವಜಾರೋಹಣ ಸ್ಥಳಕ್ಕೆ ಆಗಮಿಸಿದರು. ಅಂತಾರಾಷ್ಟ್ರೀಯ ಕ್ರೀಡಾಪಟು ಡಾ| ಮಾಲತಿ ಹೊಳ್ಳ ಧ್ವಜಾರೋಹಣ ನೆರವೇರಿಸಿ ಮಹಾರಥೋತ್ಸವಕ್ಕೆ ಚಾಲನೆ ನೀಡಿದರು.

ಭಕ್ತಸಾಗರ ರಥೋತ್ಸವಕ್ಕೆ ಹೂವು, ಉತ್ತತ್ತಿ ಹಾಗೂ ಬಾಳೆಹಣ್ಣು ಸಮರ್ಪಿಸಿ ಭಕ್ತಿ ಸಮರ್ಪಿಸಿದರು. ಜಾತ್ರೋತ್ಸವದಲ್ಲಿ ಶಾಸಕ ವೆಂಕಟರಾವ್‌ ನಾಡಗೌಡ, ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್‌, ಮಾಜಿ ಸಚಿವ ಬಸವರಾಜ ರಾಯರಡ್ಡಿ, ಸಂಸದ ಸಂಗಣ್ಣ ಕರಡಿ, ಸಿ.ವಿ. ಚಂದ್ರಶೇಖರ, ಅಮರೆಗೌಡ ಬಯ್ನಾಪೂರ, ಬಸವರಾಜ ರಾಯರಡ್ಡಿ, ರಾಘವೇಂದ್ರ ಹಿಟ್ನಾಳ, ಇಕ್ಬಾಲ್‌ ಅನ್ಸಾರಿ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸುಗೂರು, ಜಿಪಂ ಅಧ್ಯಕ್ಷ ವಿಶ್ವನಾಥ ರಡ್ಡಿ, ಜಿಲ್ಲಾಧಿಕಾರಿ ಸುನೀಲ್‌ ಕುಮಾರ ಇದ್ದರು.

ಜಾತ್ರೋತ್ಸವದಲ್ಲಿ ಮೋದಿ ಘೋಷಣೆ :  ಮಹಾ ರಥೋತ್ಸವ ಸಾಗುವ ಅರ್ಧ ಗಂಟೆಗೂ ಮುನ್ನ ಸಿ.ಟಿ. ರವಿ, ಬಿ.ವೈ. ವಿಜಯೇಂದ್ರ ಅವರು ಭಾಷಣ ಆರಂಭಿಸುತ್ತಿದ್ದಂತೆ ಕೆಲ ಯುವಕರ ದಂಡು “ಮೋದಿ ಮೋದಿ’ ಎಂದು ಘೋಷಣೆ ಕೂಗಲಾರಂಭಿಸಿದರು. ಇದನ್ನರಿತು ಗವಿಸಿದ್ದಪ್ಪ ಕೊಪ್ಪಳ ಎಂಬ ಭಕ್ತರು ಕೂಡಲೇ ಮೈಕ್‌ ಹಿಡಿದು ಇದು ಮಠದ ಸಂಸ್ಕೃತಿಯಲ್ಲ. ಆ ರೀತಿ ವರ್ತಿಸುವುದು ಸರಿಯಲ್ಲ. ಮಠದ ಭಕ್ತರು ಗವಿಸಿದ್ದನಿಗೆ ಕಪ್ಪು ಚುಕ್ಕೆ ತಾರದಿರಲಿ ಎಂದು ಪದೇ ಪದೇ ಹೇಳಿ ಮನವಿ ಮಾಡಿದರು.

ಕಂಬಳಿ ಬೀಸಿದ ಯುವಕ :  ಗವಿಸಿದ್ದೇಶ್ವರ ಮಹಾರಥೋತ್ಸವ ಸಾಗುವ ಕೆಲ ಗಂಟೆಯ ಸಮಯದಲ್ಲಿ ಮಾಜಿ ಸಿಎಂಸಿದ್ದರಾಮಯ್ಯ ಅವರು ಮಹಾರಥೋತ್ಸವ ಸಾಗುವ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಜನಸಮೂಹಕೇಕೆ ಹಾಕಿತು. ಸಿದ್ದರಾಮಯ್ಯ ಅವರು ಧ್ವಜಾರೋಹಣದ ಸ್ಥಳಕ್ಕೆ ತೆರಳುತ್ತಿದ್ದಂತೆ ವ್ಯಕ್ತಿಯೋರ್ವ ಕಂಬಳಿ ಹಿಡಿದು ಬೀಸಲಾರಂಭಿಸಿದನು. ಇದನ್ನು ಕಂಡ ಕೆಲವರು ಕೇಕೆ ಹಾಕಿದರು.ಮಾತನ್ನಾಡಿ ಎಲ್ಲರ ಗಮನ ಸೆಳೆದರು.

ಹೌದ್ದ ಹುಲಿಯಾ ಎಂದ ಅನ್ಸಾರಿ :  ಗಂಗಾವತಿ ಮಾಜಿ ಶಾಸಕ ಇಕ್ಬಾಲ್‌ ಅನ್ಸಾರಿ ಅವರು ಗವಿಸಿದ್ದೇಶ್ವರ ಮಹಾರಥೋತ್ಸವ ವೇಳೆ ಭಾಷಣ ಆರಂಭಿಸಿದರು. ಗವಿಮಠದ ಜಾತ್ರೆ, ಗತ ವೈಭವಮಾತನಾಡುತ್ತಲೇ ಕೊನೆಗಳಿಗೆಯಲ್ಲಿ ಸಿದ್ದರಾಮಯ್ಯ ಅವರನ್ನು ನೋಡುತ್ತಲೇ ಈಗಎಲ್ಲವೂ ಹೌದ್ದ ಹುಲಿಯಾ ಎನ್ನುವ ಮಾತು ಕೇಳಿ ಬರುತ್ತಿವೆ ಎನ್ನುವ.

ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಅಧ್ಯಾತ್ಮ, ಅಕ್ಷರ,ಅನ್ನದಾಸೋಹ ಸಂಸ್ಕೃತಿಯಲ್ಲಿ ಹೆಸರು ಮಾಡಿದೆ.ಅನೇಕ ಮಕ್ಕಳಿಗೆ ಶಿಕ್ಷಣ ಕೊಡುವ ಕಾಯಕವೂ ಮಠದಿಂದ ನಡೆದಿದೆ. ಇತ್ತೀಚೆಗೆ ಶ್ರೀಗಳು ಕೈಗೊಂಡ ಹಿರೇಹಳ್ಳದ ಸ್ವಚ್ಛತಾ ಕಾರ್ಯ ನಿಜಕ್ಕೂ ಶ್ಲಾಘನೀಯ. ಶ್ರೀಗಳು ರೈತರ ಹಿತ ಕಾಯುತ್ತಿದ್ದಾರೆ. ಅದಕ್ಕೆ ಜಿಲ್ಲಾಡಳಿತವೂ ಸಹಕಾರ ನೀಡಿದೆ. ಗವಿಮಠವು ಸಾಮಾಜಿಕ ಆಂದೋಲನ ಜಾತ್ರೆಯಾಗಿದೆ.  –ಪಿ. ಸುನೀಲ್‌ಕುಮಾರ್‌, ಕೊಪ್ಪಳ ಜಿಲ್ಲಾ ಧಿಕಾರಿ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ

3-koppala

Koppala: ಅಪರಿಚಿತ ವಾಹನ‌ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು

Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು

Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ

Tungabhadra Dam: Increased inflows release water to canals from June 19

Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.