ವಿದ್ಯಾರ್ಥಿ ಬಸ್‌ಪಾಸ್‌ ಪಡೆಯಲು ಹರಸಾಹಸ


Team Udayavani, Jan 21, 2021, 6:37 PM IST

Getting a student bus pass

ಗಂಗಾವತಿ: ಕೋವಿಡ್ ಮಹಾಮಾರಿ ಭೀತಿ ನಂತರ ಶಾಲಾ-ಕಾಲೇಜುಗಳು ಇದೀಗ ಆರಂಭವಾಗಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೆಎಸ್‌ಆರ್‌ ಟಿಸಿ ಬಸ್‌ಗಳ ಮೂಲಕ ಶಾಲಾ-ಕಾಲೇಜುಗಳಿಗೆ ತೆರಳಲು ಬಸ್‌ಪಾಸ್‌ ನೀಡಲಾಗುತ್ತಿದ್ದು, ಪಾಸ್‌ ಪಡೆಯಲು ವಿದ್ಯಾರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸಬೇಕಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ಪಾಸ್‌ ಪಡೆಯಲು ಹೊಸದಾಗಿ ಹಲವು ನಿಯಮಗಳನ್ನು ರೂಪಿಸಿದ್ದು, ಸುಲಭವಾಗಿ ಬಸ್‌ಪಾಸ್‌ ಪಡೆಯುತ್ತಿದ್ದ ವಿದ್ಯಾರ್ಥಿಗಳು ಈಗ ಸರಕಾರಿ ಕಚೇರಿಗಳಿಗೆ ಅಲೆದಾಡುವ ಅನಿವಾರ್ಯತೆ ಎದುರಾಗಿದೆ.

ಈ ಮೊದಲು ವಿದ್ಯಾರ್ಥಿಗಳು ತಾವು ಓದುವ ಶಾಲಾ-ಕಾಲೇಜುಗಳ ಮುಖ್ಯ ಗುರುಗಳು ಮತ್ತು ಪ್ರಾಚಾರ್ಯರ ಮೂಲಕ ಬಸ್‌ಪಾಸ್‌ ಪಡೆಯುತ್ತಿದ್ದರು. ಇದೀಗ ಇಂಟರ್ನೆಟ್‌ ಅಂಗಡಿಗಳಲ್ಲಿ ಬಸ್‌ಪಾಸ್‌ಗಾಗಿ ಅರ್ಜಿ ಸಲ್ಲಿಸಬೇಕಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ ನಂತರ ಪುನಃ ಅರ್ಜಿ ಒಂದು ಪ್ರತಿಯನ್ನು ಶಾಲಾ, ಕಾಲೇಜುಗಳಲ್ಲಿ ಸಲ್ಲಿಸಿ 15 ದಿನಗಳವರೆಗೆ ಕಾಯಬೇಕಾದ ಅನಿವಾರ್ಯತೆ ಇದೆ.

ಬಸ್‌ಪಾಸ್‌ ಪಡೆಯಲು ಈ ಮೊದಲು ಶಾಲಾ, ಕಾಲೇಜುಗಳಲ್ಲಿ ವಾಸಸ್ಥಳ ಮತ್ತು ಆಧಾರ ಕಾರ್ಡ್‌ ನೀಡಿ ನಿಗದಿತ ಶುಲ್ಕ ಪಾವತಿಸಿದರೆ ಶಾಲಾ, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳಿಗೆ ಒಂದೆರಡು ದಿನಗಳಲ್ಲಿ ಬಸ್‌ಪಾಸ್‌ ತಂದು ಕೊಡುತ್ತಿದ್ದರು. ಇದೀಗ ಆನ್‌ಲೈನ್‌ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳ ಮತ್ತು ಪಾಲಕರ ಆಧಾರ್‌ ಕಾರ್ಡ್‌ ಕಡ್ಡಾಯ ಮಾಡಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಧಾರ್‌ ಕಾರ್ಡ್‌ನಲ್ಲಿರುವ ಮೊಬೈಲ್‌ ನಂಬರ್‌ಗೆ ಒಟಿಪಿ ಬಂದರೆ ಮಾತ್ರ ಅರ್ಜಿಯನ್ನು ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌ ಸ್ವೀಕರಿಸುತ್ತದೆ. ಇಲ್ಲದಿದ್ದರೆ ಪುನಃ ತಹಶೀಲ್ದಾರ್‌ ಕಚೇರಿ ಅಥವಾ ಆಧಾರ್‌ ಕಾರ್ಡ್‌ ತಿದ್ದುಪಡಿ ಮಾಡುವ ಕಚೇರಿಗೆ ತೆರಳಿ ಹಣ ಮತ್ತು ಸಮಯ ವ್ಯರ್ಥ ಮಾಡಿ ಆಧಾರ ಕಾರ್ಡ್‌ ತಿದ್ದುಪಡಿ ಮಾಡಬೇಕಾಗಿದೆ. ಸಂಬಂಧಿಕರ ಮನೆಯಲ್ಲಿ ವಾಸ ಮಾಡುವ ಪರ ಊರಿನ ವಿದ್ಯಾರ್ಥಿಗಳ ಕಷ್ಟ ಹೇಳತೀರದ್ದಾಗಿದೆ. ಅನ್ಯ ಊರುಗಳಲ್ಲಿರುವ ಆಧಾರ ಕಾರ್ಡ್‌ ವಿಳಾಸ ಪ್ರಸ್ತುತ ವಾಸ ಮಾಡುವ ಊರಿನ ವಿಳಾಸ ಬದಲಾವಣೆಯಾದರೆ ಬಸ್‌ ಪಾಸ್‌ ಸಿಗುವುದಿಲ್ಲ. ಇದರಿಂದ ಶೇ. 30ರಷ್ಟು ವಿದ್ಯಾರ್ಥಿಗಳು ಬಸ್‌ಪಾಸ್‌ ತೊಂದರೆಯಿಂದ ನಿತ್ಯವೂ ಹಣ ಕೊಟ್ಟು ಬರುವಂತಾಗಿದೆ.

ಇದನ್ನೂ ಓದಿ: ಬುಡಕಟ್ಟು ಹಿನ್ನೆಲೆ  ಜಾತಿ ಎಸ್‌ಸಿ-ಎಸ್‌ಟಿ ಮೀಸಲಿಗೆ ಅರ್ಹ: ಪ್ರೊ| ಕೆ.ಎಂ. ಮೈತ್ರಿ 

ಮೊದಲಿದ್ದಂತೆ ಶಾಲಾ, ಕಾಲೇಜುಗಳಲ್ಲೇ ಬಸ್‌ಪಾಸ್‌ ವಿತರಣೆ ವ್ಯವಸ್ಥೆ ಮಾಡಬೇಕು. ಕೋವಿಡ್ ರೋಗದ ಪರಿಣಾಮ ಗ್ರಾಮೀಣ ಜನರು ಹಣಕಾಸಿನ ತೊಂದರೆಯಲ್ಲಿದ್ದು, ಕೆಎಸ್‌ಆರ್‌ಟಿಸಿ ವಿದ್ಯಾರ್ಥಿಗಳಿಗೆ, ಪಾಲಕರಿಗೆ ತೊಂದರೆ ಕೊಡಬಾರದು. ಎಲ್ಲ ವಿದ್ಯಾರ್ಥಿ ಸಂಘಟನೆಗಳ ಜತೆಗೂಡಿ ಹೋರಾಟ ನಡೆಸಲಾಗುತ್ತದೆ.

ಗ್ಯಾನೇಶ ಕಡಗದ ವಿದ್ಯಾರ್ಥಿ ಮುಖಂಡರು ಎಸ್‌ಎಫ್‌ಐ

ಕೆ. ನಿಂಗಜ್ಜ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.