ಕನ್ನಡ ಸಿನಿಮಾ ಪ್ರೇಕ್ಷಕರಿಗಿದೆ ದೊಡ್ಡ ಗೌರವ
Team Udayavani, Oct 27, 2021, 7:00 PM IST
ಗಂಗಾವತಿ: ದಕ್ಷಿಣ ಭಾರತದ ಸಿನಿಮಾ ಕ್ಷೇತ್ರದಲ್ಲಿ ಕನ್ನಡದ ಪ್ರೇಕ್ಷಕರಿಗೆ ಬಹುದೊಡ್ಡ ಗೌರವವಿದೆ. ಎಲ್ಲ ಭಾಷೆಗಳ ಚಿತ್ರಗಳನ್ನು ವೀಕ್ಷಿಸಿ ವಿಮರ್ಶೆ ಮಾಡುವ ಮೂಲಕ ಚಿತ್ರರಂಗವನ್ನು ಬೆಳೆಸುವ ಗುಣ ಕನ್ನಡಿಗರಿಗೆ ಇದೆ ಎಂದು ಪೆಳ್ಳಿ ಸಂದಡಿ-2 ತೆಲುಗು ಸಿನಿಮಾದ ನಾಯಕನಟ ರೋಷನ್ ಶ್ರೀಕಾಂತ್ ಹೇಳಿದರು.
ಅವರು ಸಮೀಪದ ವಡ್ಡರಹಟ್ಟಿ ಕ್ಯಾಂಪ್ ನಿವಾಸಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಮ್ಮ ತಂದೆ ಶ್ರೀಕಾಂತ್ ಅವರು ಗಂಗಾವತಿಯ ವಡ್ಡರಹಟ್ಟಿ ಬಸಾಪಟ್ಟಣದಲ್ಲಿ ಜನಿಸಿ, ಬೆಳೆದು ನಂತರ ತೆಲುಗು ಸಿನಿಮಾದಲ್ಲಿ ಹೆಸರು ಮಾಡಲು ಕನ್ನಡಿಗರು ಕಾರಣರಾಗಿದ್ದಾರೆ. ಈಗ ನಾನು ಪೆಳ್ಳಿ ಸಂದಡಿ-2 ತೆಲುಗು ಸಿನಿಮಾದಲ್ಲಿ ನಟನೆ ಮಾಡಿದ್ದು, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾ ಭರ್ಜರಿಯಾಗಿ ಓಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಗಂಗಾವತಿಯ ಬಸಾಪಟ್ಟಣ ವಡ್ಡರಹಟ್ಟಿ ಗ್ರಾಮದಲ್ಲಿರುವ ನಮ್ಮ ತಂದೆ ಅವರ ನಿವಾಸಕ್ಕೆ ಭೇಟಿ ನೀಡಿ ಸ್ಥಳೀಯ ಜನರೊಂದಿಗೆ ಆಶೀರ್ವಾದ ಪಡೆಯುತ್ತಿರುವುದು ಸಂತೋಷವಾಗಿದೆ. ತೆಲುಗು ಸಿನಿಮಾ ರಂಗದಲ್ಲಿ ಇನ್ನಷ್ಟು ಹೆಸರು ಮಾಡಲು ತಂದೆ ಹಾಗೂ ಅವರ ಅಭಿಮಾನಿಗಳ ಆಶೀರ್ವಾದ ಇದೆ. ಮುಂದೊಂದು ದಿನ ಕನ್ನಡದಲ್ಲಿಯೂ ಅವಕಾಶ ಸಿಕ್ಕರೆ ನಟನೆ ಮಾಡುವುದಾಗಿ ರೋಶನ್ ಹೇಳಿದರು.
ಈ ಸಂದರ್ಭದಲ್ಲಿ ನಟ ಶ್ರೀಕಾಂತ್, ಅಭಿಮಾನಿಗಳಾದ ಸಂಕ್ರಾಂತಿ ವೆಂಕಟೇಶ್ವರರಾವ್ ದುರ್ಗಾರಾವ್ ಸೇರಿದಂತೆ ನೂರಾರು ಜನರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು