ವೈಭವದ ಕೊಟ್ಟೂರೇಶ್ವರ ರಥೋತ್ಸವ


Team Udayavani, Feb 12, 2018, 12:20 PM IST

vybhava.jpg

ಕೊಟ್ಟೂರು: ರಾಜ್ಯದ ಸುಪ್ರಸಿದ್ಧ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವ ಭಾನುವಾರ ಮೂಲಾ ನಕ್ಷತ್ರದ ಶುಭ ಮುಹೂರ್ತದಲ್ಲಿ ಸಂಜೆ 5.15ಕ್ಕೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಕಳೆದ ವರ್ಷ ರಥೋತ್ಸವದ ವೇಳೆ ನಡೆದ ಅವಘಡದ ನಂತರ ಹೊಸ ರಥ ನಿರ್ಮಿಸಲಾಗಿತ್ತು. ಈ ರಥದ ಮೂಲಗಡ್ಡೆ, ಚಕ್ರ ಸೇರಿ ಎಲ್ಲವನ್ನೂ ನುರಿತ ಶಿಲ್ಪಿಗಳು ಕೇವಲ ಒಂದು ವರ್ಷದಲ್ಲಿ ಹೊಸದಾಗಿ ನಿರ್ಮಿಸಿದ್ದರು. ಕಳೆದ ವರ್ಷ ನಡೆದ ಅವಘಢ ಮರೆತು ಲಕ್ಷಾಂತರ ಭಕ್ತರು 64 ಅಡಿ ಎತ್ತರದ ಹೊಸ ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು.

ಶ್ರೀ ಸ್ವಾಮಿಯ ನೂತನ ರಥವನ್ನು ವಿವಿಧ ಬಗೆಯ ಫಲಪುಷ್ಪಗಳೊಂದಿಗೆ ಅಲಂಕರಿಸಲಾಗಿತ್ತು. ಬೆಳಗ್ಗೆಯಿಂದ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ರಥೋತ್ಸವದದ ಅಂಗವಾಗಿ ಹಲವು ಧಾರ್ಮಿಕ ವಿವಿಧಿವಿಧಾನಗಳು ನಡೆದವು.

ದಲಿತ ಮಹಿಳೆಯಿಂದ ಆರತಿ: ಅರ್ಚಕರು ಪೂಜೆ ಸಲ್ಲಿಸಿದ ನಂತರ ಕೊಟ್ಟೂರೇಶ್ವರರ ಉತ್ಸವ ಮೂರ್ತಿಯನ್ನು ಬೆಳ್ಳಿ ಪಲ್ಲಕ್ಕಿಯಲ್ಲಿಟ್ಟು ಸಮಾಳ ನಂದಿಕೋಲು ಮತ್ತಿತರ ವಾದ್ಯಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಐದು ದಿನಗಳ ಕಾಲ ಶ್ರೀಸ್ವಾಮಿಗೆ ಹರಕೆ ಹೊತ್ತು ಉಪವಾಸ ನಡೆಸಿದ ದಲಿತ ಮಹಿಳೆ ದುರುಗಮ್ಮ ಶ್ರೀಸ್ವಾಮಿಗೆ ಕಳಸದಾರತಿ ಬೆಳಗಿದಳು.

ನಂತರ ಪಲ್ಲಕ್ಕಿ ತೇರು ಬಜಾರ್‌ ಮೂಲಕ ಸಂಚರಿಸಿ ರಥಬೀದಿಗೆ ತಲುಪಿತು. ನಂತರ ರಥಕ್ಕೆ ಐದು ಪ್ರದಕ್ಷಿಣೆ ಹಾಕಿದ ನಂತರ ಉತ್ಸವ ಮೂರ್ತಿಯನ್ನು ರಥದೊಳಗೆ ಪ್ರತಿಷ್ಠಾಪಿಸಲಾಯಿತು. ಕೊಟ್ಟೂರೇಶ್ವರ ಸ್ವಾಮಿ ರಥಾರೂಢರಾಗುತ್ತಿದ್ದಂತೆ “ಕೊಟ್ಟೂರೇಶ್ವರ ದೊರೆಯೇ, ನಿನಗಾರು ಸರಿಯೇ, ಸರಿ ಸರಿ ಎಂದವರ ಹಲ್ಲು ಮುರಿಯೇ ಬಹುಪರಾಕ್‌’ ಎಂಬ ಘೋಷಣೆ ಮುಗಿಲು ಮುಟ್ಟಿತು.

ದೈವ ಪ್ರೇರಣೆಯಂತೆ ಕ್ಷಣ ಮಾತ್ರದಲ್ಲಿ ರಥ ಮುಂದೆ ಸಾಗುತ್ತಿದ್ದಂತೆ ಲಕ್ಷಾಂತರ ಭಕ್ತರು ಮಿಣಿ ಹಿಡಿದೆಳೆದು ಸಂಭ್ರಮಿಸಿದರು. ರಥ ಸಾಗುತ್ತಿದ್ದಂತೆ ಭಕ್ತರು ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು. ನಂದಿಕೋಲು, ಸಮಾಳ, ಮಂಗಳವಾದ್ಯಗಳು ರಥೋತ್ಸವದ ಮೆರಗು ಹೆಚ್ಚಿಸಿದ್ದವು. ಲಕ್ಷಾಂತರ ಜನ ರಥಬೀದಿಯ ಇಕ್ಕೆಲಗಳಲ್ಲಿ ನಿಂತು ಹೊಸ ರಥವನ್ನು ವೀಕ್ಷಿಸಿ ಪುಳಕಿತರಾದರು.

ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಪಾದಯಾತ್ರೆ ಮೂಲಕ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದರು. ನೂತನ ರಥವು ರಥ ಬೀದಿಯಲ್ಲಿ ಸಾಗಿ ಪುನಃ ಕೇಂದ್ರ ಸ್ಥಾನಕ್ಕೆ ಸರಾಗವಾಗಿ ಬಂದು ತಲುಪಿತು. ರಥೋತ್ಸವದ ಮಿಣಿ (ಹಗ್ಗ) ಎಳೆಯಲು ಜನಸಾಗರ ಮುಗಿ ಬಿದ್ದು ನೂಕು ನುಗ್ಗಲು ಉಂಟಾದರೂ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಸಲಿಲ್ಲ.

ಉಜ್ಜಯಿನಿ ಜಗದ್ಗುರು ಶ್ರೀಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ, ಕ್ರಿಯಾಮೂರ್ತಿ ಶಂಕರ ಸ್ವಾಮೀಜಿ, ಚಾನುಕೋಟಿ ಮಠಾಧ್ಯಕ್ಷ ಡಾ| ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ನಂದಿಪುರ ಮಹೇಶ್ವರ ಸ್ವಾಮೀಜಿ, ಶಾಸಕ ಎಸ್‌.ಭೀಮಾನಾಯ್ಕ, ಜಿಲ್ಲಾಧಿಕಾರಿ ಡಾ| ರಾಮ್‌ಪ್ರಸಾತ್‌ ಮನೋಹರ್‌, ಎಸ್‌ಪಿ ಆರ್‌.ಚೇತನ್‌, ಜಿಪಂ ಸದಸ್ಯ ಎಂ.ಎಂ.ಜೆ.ಹರ್ಷವರ್ಧನ್‌, ಪಪಂ ಅಧ್ಯಕ್ಷ ಅನಿಲ್‌ ಹೊಸಮನಿ, ಸದಸ್ಯರಾದ ಬಿ.ಎಸ್‌.ವೀರೇಶ್‌, ಕರಡಿ ಕೊಟ್ರಯ್ಯ ಇದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.