ಕೋವಿಡ್ ಸೋಂಕಿತ ಗರ್ಭಿಣಿಯ ಹೆರಿಗೆಗೆ ನೆರವಾದ ಸರಕಾರಿ ಆಸ್ಪತ್ರೆ ಸಿಬ್ಬಂದಿ-ಕಾಂಗ್ರೆಸ್ ಮುಖಂಡ
Team Udayavani, May 30, 2021, 7:15 PM IST
ಗಂಗಾವತಿ: ಕೋವಿಡ್ ಸಂಕಷ್ಟದ ಮಧ್ಯೆ ತಾಲೂಕಿನ ಶ್ರೀರಾಮನಗರದ ಪಾಜಿಟೀವ್ ಬಂದಿರುವ 9 ತಿಂಗಳ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡ ತಕ್ಷಣ ಸ್ಥಳೀಯ ಕಾಂಗ್ರೆಸ್ ಮುಖಂಡ ಎಪಿಎಂಸಿ ನಿರ್ದೇಶಕ ರೆಡ್ಡಿಶ್ರೀನಿವಾಸ ನೆರವಿಗೆ ಧಾವಿಸಿ ಅಂಬುಲೆನ್ಸ್ ವ್ಯವಸ್ಥೆ ಮಾಡಿ ಸಾಮಾಜಿಕ ಅಂತರ ಪಾಲನೆ ಮಾಡಿ ಗರ್ಭಿಣಿಯನ್ನು ಗಂಗಾವತಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲು ಕರೆದುಕೊಂಡು ಬಂದಿದ್ದಾರೆ.
ಕೊರೊನಾ ಪಾಜಿಟೀವ್ ಆಗಿರುವ ಗರ್ಭಿಣಿಯರ ಹೆರಿಗೆಯನ್ನು ಕೊಪ್ಪಳ ಸರಕಾರಿ ಆಸ್ಪತ್ರೆಯಲ್ಲಿ ಮಾಡಲು ಪ್ರತೇಕ ವಿಭಾಗ ಆರಂಭಿಸಲಾಗಿದ್ದು ಅಲ್ಲಿಗೆ ಕರೆದುಕೊಂಡು ಹೋಗಲು ಸೂಚಿಸಲಾಯಿತು. ಈ ವೇಳೆಗೆ ಗರ್ಭಿಣಿ ಗೆ ತೀವ್ರ ನೋವು ಕಾಣಿಸಿಕೊಂಡಿದ್ದ ರಿಂದ ವೈದ್ಯಾಧಿಕಾರಿ ಡಾ.ಈಶ್ವರ ಸಲಹೆ ಮೇರೆಗೆ ಅಗತ್ಯ ಕೊರೊನಾ ಸುರಕ್ಷತೆಯ ಜತೆ ಗರ್ಭಿಣಿ ಗೆ ಸಹಜ ಹೆರಿಗೆ ಮಾಡಿಸಿಕೊಳ್ಳಲಾಗಿದೆ.
ತಾಯಿ ಮತ್ತು ಜನಿಸಿದ ಗಂಡುಮಗು ಆರೋಗ್ಯವಾಗಿದ್ದು ತಾಯಿಯನ್ನು ಕೊವೀಡ್ ಬೆಡ್ ಗೆ ಸ್ಥಳಾಂತರ ಮಾಡಲಾಗಿದೆ. ಮಗುವನ್ನು ವಿಶೇಷ ಕೊಠಡಿಯಲ್ಲಿಟ್ಟು ಪಾಲನೆ ಮಾಡಲಾಗುತ್ತಿದೆ. ಕೋಕೊರೊನಾ ಸಂಕಷ್ಟದಲ್ಲೂ ಸರಕಾರಿ ಆಸ್ಪತ್ರೆ ವೈದ್ಯರು ಸಿಬ್ಬಂದಿಯವರು ಹಾಗೂ ಕಾಂಗ್ರೆಸ್ ಮುಖಂಡ ರೆಡ್ಡಿಶ್ರೀನಿವಾಸ ಅವರಿಗೆ ಬಾಣಂತಿಯ ಕುಟುಂಬದವರು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ