ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಆನಂದ್ ಸಿಂಗ್ ಗೆ ಟಾಂಗ್ ನೀಡಿದ ಗೋವಿಂದ ಕಾರಜೋಳ
Team Udayavani, Aug 17, 2021, 10:54 AM IST
ಕೊಪ್ಪಳ: ತುಂಗಭದ್ರಾ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಶುಭ ಘಳಿಗೆಯಲ್ಲಿ ಬೃಹತ್ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಗಂಗಾಮಾತೆಗೆ ಬಾಗಿನ ಅರ್ಪಿಸಿದರು.
ಡ್ಯಾಂ ಜಲಾಶಯದ ತಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿ, ತುಂಗಭದ್ರಾ ಎಲ್ಲೆಡೆಯೂ ಮಳೆ ಚೆನ್ನಾಗಿ ಆಗುತ್ತಿವೆ. ಹಾಗಾಗಿ ತುಂಗಭದ್ರಾ ಜಲಾಶಯದ ಇತಿಹಾಸದಲ್ಲಿ ಅವಧಿ ಮೊದಲೇ ತುಂಬಿದೆ. ಇದರಿಂದ ಲಕ್ಷಾಂತರ ರೈತರು ಖುಷಿಯಲ್ಲಿದ್ದಾರೆ. ಹಾಗಾಗಿ ಎಲ್ಲ ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗುತ್ತಿದೆ ಎಂದರು.
ಆಲಮಟ್ಟಿ ಜಲಾಶಯಕ್ಕೆ ಇದೇ ಆ.21 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬಾಗಿನ ಅರ್ಪಿಸಲು ಬರಲಿದ್ದಾರೆ. ನೀರಾವರಿ ವಿಚಾರದಲ್ಲಿ ಸರ್ಕಾರ ಹೆಚ್ಚು ಕಾಳಜಿ ವಹಿಸಿದೆ ಎಂದರು.
ಇದನ್ನೂ ಓದಿ:ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಸಚಿವ ಆನಂದ್ ಸಿಂಗ್ ಅವರು ಬಾಗಿನ ಅರ್ಪಣೆ ವೇಳೆ ಗೈರು ವಿಚಾರಕ್ಕೆ ಪ್ರತಿಕ್ರಿಯಿಸಿ, ಭಾರತೀಯ ಸಂಸ್ಕೃತಿಯಲ್ಲಿ ಗಂಗಾಮಾತೆಗೆ ಬಾಗಿನ ಅರ್ಪಣೆ ಮಾಡುವುದು ನಮ್ಮ ಸಂಸ್ಕೃತಿ. ನಾವು ಸಂಸ್ಕೃತಿ, ಸಂಸ್ಕಾರ ಪಾಲಿಸಬೇಕು. ಆದರೆ ಅವರು ಬಾಗಿನ ಕಾರ್ಯಕ್ರಮಕ್ಕೆ ಬರುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ ಎನ್ನುವ ಮೂಲಕ ಸಚಿವ ಆನಂದ್ ಸಿಂಗ್ ಅವರಿಗೆ ಭಾರತೀಯ ಸಂಸ್ಕೃತಿ ಗೊತ್ತಿಲ್ಲ ಎಂದು ಪರೋಕ್ಷವಾಗಿ ಏಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!