ಗಂಗಾವತಿ: ಆದಿಶಕ್ತಿ ಗೋಶಾಲೆ ನಿರ್ವಹಣೆಗೆ ಸರ್ಕಾರದಿಂದ ನೆರವು; ಸಿಎಂ ಬೊಮ್ಮಾಯಿ ಘೋಷಣೆ
Team Udayavani, Nov 25, 2022, 1:08 PM IST
ಗಂಗಾವತಿ: ತಾಲೂಕಿನ ಆನೆಗೊಂದಿ ಗ್ರಾಮದ ವಾಲೀಕಿಲ್ಲಾ ಆದಿಶಕ್ತಿ ಶ್ರೀ ದುರ್ಗಾಪರಮೇಶ್ವರಿ ಗೋಶಾಲೆಗೆ ಸರ್ಕಾರದಿಂದ ಮೂಲಸೌಕರ್ಯ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಆನೆಗೊಂದಿಯ ಆದಿಶಕ್ತಿ ದೇಗುಲದ ಶ್ರೀ ಬ್ರಹ್ಮಯ್ಯ ಸ್ವಾಮಿ ಮತ್ತು ಶಾಸಕ ಪರಣ್ಣ ಮನವಳ್ಳಿ ಅವರಿಂದ ಸನ್ಮಾನ ಸ್ವೀಕರಿಸಿ, ಮನವಿ ಸ್ವೀಕರಿಸಿ ಬಳಿಕ ಮಾತನಾಡಿದರು.
ದುರ್ಗಾದೇವಿ ಗೋಶಾಲೆಯನ್ನು ಇನ್ನು ಮುಂದೆ ಸರ್ಕಾರ ನೋಡಿಕೊಳ್ಳಲಿದೆ. ಇಲ್ಲಿ 500ಕ್ಕೂ ಹೆಚ್ಚು ಗೋವುಗಳಿದ್ದು, ಅವುಗಳಿಗೆ ಮೇವು, ನೀರು ಕೊರತೆಯಾಗದಂತೆ ಮೂಲ ಸೌಕರ್ಯ ಕಲ್ಪಿಸಲಾಗುತ್ತದೆ. ಈ ಬಗ್ಗೆ ಶಾಸಕ ಪರಣ್ಣ ಮುನವಳ್ಳಿ ಹಲವು ಬಾರಿ ಮನವಿ ಮಾಡಿದ್ದು, ಸೂಕ್ತ ಸ್ಥಳ ಸಿಕ್ಕಿದ ಬಳಿಕ, ಶಾಶ್ವತ ಗೋಶಾಲೆ ನಿರ್ಮಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಆನೆಗುಂದಿ ಆದಿಶಕ್ತಿ ದೇವಾಲಯದ ಬ್ರಹ್ಮಯ್ಯ ಸ್ವಾಮಿ ಮತ್ತು ಶಾಸಕ ಪರಣಮನವಳ್ಳಿ ಸೇರಿದಂತೆ ಗಂಗಾವತಿಯ ಬಿಜೆಪಿ ಮತ್ತು ಆರ್.ಎಸ್.ಎಸ್. ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್