ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆಗೆ ಮುಂದಾದ ಗ್ರಾಪಂ ಸಿಬ್ಬಂದಿ
Team Udayavani, Apr 19, 2021, 9:03 PM IST
ದೋಟಿಹಾಳ: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ, ಅವರನ್ನು ಶಾಲಾ ಮುಖ್ಯವಾಹಿನಿಗೆ ಕರೆ ತರುವ ಹೊಣೆಗಾರಿಕೆಯನ್ನು ಪಂಚಾಯತ್ಗಳಿಗೆ ನೀಡಿರುವುದರಿಂದ ಗ್ರಾಪಂ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದು ಗ್ರಾಪಂ ಸಿಬ್ಬಂದಿ ಅಳಲು ತೋಡಿಕೊಂಡರು.
ಗ್ರಾಪಂ ಮಾಟೂರು, ಹೆಸರೂರ ಮತ್ತು ದೋಟಿಹಾಳ ಸೇರಿ ಸುಮಾರು 1178 ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಬೇಕು. ಗ್ರಾಪಂ ಸಿಬ್ಬಂದಿ 8-10 ದಿನಗಳಿಂದ ಪ್ರತಿದಿನ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ಹಾಗೂ ಜಿಪಿಆರ್ಎಸ್ ಮಾಡಬೇಕು. ಒಂದೊಂದು ಮನೆಗೆ ಕನಿಷ್ಟ ಅರ್ಧ ಗಂಟೆ ಬೇಕಾಗುತ್ತದೆ. ಇದರಿಂದ ಗ್ರಾಪಂ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಗ್ರಾಮೀಣ ಭಾಗದಲ್ಲಿ ಹೆಚ್ಚಾಗುತ್ತಿರುವುದರಿಂದ ಹೈಕೋರ್ಟ್ ನಿರ್ದೇಶನದ ಬಳಿಕ ಶಿಕ್ಷಣ ಇಲಾಖೆ ಮನವಿ ಮೇರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆಯು ಈ ಬಗ್ಗೆ ಪಂಚಾಯತ್ಗಳಿಗೆ ಮಾರ್ಗಸೂಚಿ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ 2019ರ ನ. 7ರಂದು ಸರಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವರವಾಗಿ ಚರ್ಚಿಸಿ, ಗ್ರಾಮೀಣ ಭಾಗದಲ್ಲಿ ಕಾರ್ಮಿಕರೊಡನೆ ವಲಸೆ ಬಂದ ಮಕ್ಕಳ ಗಣತಿ ನಡೆಸಿ ಅವರು ಶಾಲೆಗೆ ದಾಖಲಾಗುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಸಹ ಪಂಚಾಯತ್ ರಾಜ್ ಸಂಸ್ಥೆಗಳಿಗೆ ವಹಿಸಲಾಗಿದೆ.
ಈ ಮಧ್ಯೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತರುವ ಜವಾಬ್ದಾರಿ ನಿರ್ವಹಿಸುವ ಕುರಿತಂತೆ ಪಂಚಾಯತ್ಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಶಿಕ್ಷಣ ಇಲಾಖೆ ಡಿ. 10ರಂದು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿತ್ತು. ಅದನ್ನು ಉಲ್ಲೇಖೀಸಿ ಗ್ರಾಮೀಣಾಭಿವೃದ್ಧಿ ಇಲಾಖೆಯು ಡಿ. 11ರಂದು ಎಲ್ಲ ಪಂಚಾಯತ್ ಗಳಿಗೆ ಸುತ್ತೂಲೆ ಕಳಿಸಿದ ಕಾರಣ ಸದ್ಯ ಎಲ್ಲ ಗ್ರಾಪಂ ಸಿಬ್ಬಂದಿ ಹಳ್ಳಿಗಳಲ್ಲಿ ಶಾಲಾ ಬಿಟ್ಟ ಮಕ್ಕಳ ಸಮೀಕ್ಷೆ ಮಾಡಿ ವರದಿ ನೀಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ