ಸರಳವಾಗಿ ಜರುಗಿದ ಗ್ರಾಮದೇವತೆ ದುರುಗಮ್ಮದೇವಿ ಜಾತ್ರೆ ಕೆಲವೇ ಜನರಿಂದ ರಥೋತ್ಸವ
Team Udayavani, Jan 17, 2022, 7:17 PM IST
ಗಂಗಾವತಿ: ಕೊರೊನಾ ಮಾರ್ಗಸೂಚಿ ಪಾಲನೆ ಹಿನ್ನೆಲೆಯಲ್ಲಿ ಗಂಗಾವತಿ ಗ್ರಾಮದೇವತೆಯ ಜಾತ್ರಾ ಮಹೋತ್ಸವದ ರಥೋತ್ಸವ ಸರಳವಾಗಿ ಕೆಲವೇ ಜನರಿಂದ ಜರುಗಿತು.
ಜಿಲ್ಲಾಡಳಿತ 50 ಜನರಿಗೆ ರಥ ಎಳೆಯಲು ಅವಕಾಶ ಕಲ್ಪಿಸಿ ನಿಯಮಗಳ ಕಡ್ಡಾಯ ಪಾಲನೆ ಮಾಡುವಂತೆ ಸೂಚನೆ ಹಿನ್ನೆಲೆಯಲ್ಲಿ ಸೋಮವಾರ ಬೆಳ್ಳಿಗ್ಗೆ ದೇಗುಲದಲ್ಲಿ ಅಭಿಷೇಕ ಸೇರಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಬೆಳ್ಳಿಗ್ಗೆ 9.10 ಕ್ಕೆ ಶ್ರೀದುರುಗಮ್ಮ ದೇವಿಯ ಮಹಾರಥೋತ್ಸವಕ್ಕೆ ಶಾಸಕ ಪರಣ್ಣ ಮುನವಳ್ಳಿ, ಹಾಗೂ ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ಚಾಲನೆ ನೀಡಿದರು. ರಥದಲ್ಲಿ ದೇವಿಯ ಮೂರ್ತಿ ಪ್ರತಿಷ್ಠಾಪಿಸಿ ರಥವನ್ನು ಐದು ಹೆಜ್ಜೆ ಎಳೆಯಲಾಯಿತು.
ಈ ಸಂದರ್ಭದಲ್ಲಿ ದೇಗುಲ ಕಮಿಟಿಯ ಜೋಗದ ನಾರಾಯಣಪ್ಪ, ಬಿ.ಅಶೋಕ, ಜೋಗದ ಹನುಮಂತಪ್ಪ, ಯು.ಲಕ್ಷ್ಮಣ , ತಾಂದಳೆ ಶ್ರೀನಿವಾಸ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ