ಮೊದಲ ಹಂತಕ್ಕೆ 4699 ಉಮೇದುವಾರಿಕೆ


Team Udayavani, Dec 13, 2020, 3:36 PM IST

ಮೊದಲ ಹಂತಕ್ಕೆ  4699 ಉಮೇದುವಾರಿಕೆ

ಕೊಪ್ಪಳ: ಜಿಲ್ಲೆಯಲ್ಲಿ 73 ಗ್ರಾಪಂಗಳ 1321 ಸದಸ್ಯ ಸ್ಥಾನಗಳಿಗೆ ಘೋಷಣೆಯಾಗಿರುವ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಅವಧಿ  ಡಿ. 11ರಂದು ಮುಗಿದಿದ್ದು, ಒಟ್ಟಾರೆ 4699 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಹಳ್ಳಿಯ ಚುನಾವಣಾ ರಣಕಣ ರಂಗೇರಿದ್ದು, ಅಭ್ಯರ್ಥಿಗಳು ಖುಷಿ ಖುಷಿಯಿಂದಲೇ ಪ್ರಚಾರಕ್ಕಿಳಿದಿದ್ದಾರೆ. ಜಿಲ್ಲೆಯ ಯಾವ ಹಳ್ಳಿಯಲ್ಲೂ ಕೇಳಿದರೂ ಬರಿ ಚುನಾವಣಾ ವಿಷಯವೇ ಚರ್ಚೆಯಾಗುತ್ತಿದೆ. ಯಾರು ನಾಮಪತ್ರ ಕೊಟ್ಟರು, ಯಾರು ಅಭ್ಯರ್ಥಿಯಾದರು. ಯಾರು ಯಾವ ಪಕ್ಷದ ಬೆಂಬಲಿತ ಅಭ್ಯರ್ಥಿ ಎನ್ನುವುದೇ ಹೆಚ್ಚಾಗಿ ಚರ್ಚೆಯಾಗುತ್ತಿವೆ. ವಿಶೇಷವೆಂಬಂತೆ ಜಿಲ್ಲೆಯಲ್ಲಿ ಮೊದಲ ಹಂತದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ಅವಧಿ ಶುಕ್ರವಾರವೇ ಅಂತಿಮವಾಗಿದ್ದರಿಂದ ಅಭ್ಯರ್ಥಿಗಳು ನಾ ಮುಂದು ತಾ ಮುಂದೆಂದು ಪ್ರತಿಷ್ಠೆಯನ್ನೇ ಪಣಕ್ಕಿಟ್ಟು ನಾಮಪತ್ರ ಸಲ್ಲಿಸಿದ್ದಾರೆ.

1321 ಸ್ಥಾನಕ್ಕೆ 4699 ನಾಮಪತ್ರಗಳು: ಜಿಲ್ಲೆಯಲ್ಲಿ ಮೊದಲ ಹಂತದ 73 ಗ್ರಾಪಂಗಳ 1321 ಸದಸ್ಯ ಸ್ಥಾನಗಳಿಗೆ ಜಿಲ್ಲೆಯಲ್ಲಿ 4699 ಆಕಾಂಕ್ಷಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಈ ಪೈಕಿ ಕೊಪ್ಪಳ ತಾಲೂಕಿನ 38 ಗ್ರಾಪಂಗಳ 736 ಸದಸ್ಯ ಸ್ಥಾನಕ್ಕೆ 2880 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರೆ, ಯಲಬುರ್ಗಾ ತಾಲೂಕಿನ 20 ಗ್ರಾಪಂಗಳ 345 ಸದಸ್ಯ ಸ್ಥಾನಗಳಿಗೆ 1086 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇನ್ನೂ ಕುಕನೂರು 15 ಗ್ರಾಪಂಗಳ 240 ಸದಸ್ಯ ಸ್ಥಾನಕ್ಕೆ 733 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟಾರೆ 1321 ಗ್ರಾಪಂ ಸದಸ್ಯ ಸ್ಥಾನಕ್ಕೆ 4699 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಕೊಪ್ಪಳದಲ್ಲೇ ಹೆಚ್ಚು ನಾಮಪತ್ರ: ಕೊಪ್ಪಳ ತಾಲೂಕಿನಲ್ಲಿಯೇ ಅತಿ ಹೆಚ್ಚು ನಾಮಪತ್ರ ಸಲ್ಲಿಸಿಕೆಯಾಗಿರುವುದು ಗಮನಾರ್ಹ ಸಂಗತಿ.ಬಿಜೆಪಿ ಬೆಂಬಲಿತ, ಕಾಂಗ್ರೆಸ್‌ ಬೆಂಬಲಿತ, ಜೆಡಿಎಸ್‌ ಬೆಂಬಲಿತ ಎನ್ನುವಂತೆ ನಾಮಪತ್ರ ಸಲ್ಲಿಕೆಯಾಗಿದ್ದರೆ, ಇದರ ಹೊರತಾಗಿಯೂ ಬೆಂಬಲಿತರಲ್ಲಿ ಅವಕಾಶ ಸಿಗದೇ ಇದ್ದವರು ಬಂಡಾಯದ ಬಾವುಟ ಹಾರಿಸಿ ಸ್ವ ಪ್ರತಿಷ್ಠೆಯಿಂದಲೇ ನಾಮಪತ್ರ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಇಳಿದಿದ್ದಾರೆ.

ಆದರೆ ಇನ್ನೂ ಚುನಾವಣಾ ಅಧಿಕಾರಿಗಳು ಅಭ್ಯರ್ಥಿಗಳು ಕೊಟ್ಟಿರುವ ನಾಮಪತ್ರಗಳನ್ನು ಪರಿಶೀಲನೆ ಮಾಡುತ್ತಿದ್ದು, ಅವುಗಳು ಕ್ರಮಬದ್ಧವಾಗಿ ಇವೆಯೋ? ಇಲ್ಲವೋ ಎನ್ನುವ ಕುರಿತು ಗಮನಿಸುತ್ತಿದ್ದಾರೆ. ಒಂದು ವೇಳೆಕ್ರಮಬದ್ಧವಾಗಿ ಇಲ್ಲದಿದ್ದರೆ ನಾಮಪತ್ರಗಳೇ ತಿರಸ್ಕೃತವಾಗಲಿವೆ.

ಸದ್ದಿಲ್ಲದೇ ಪ್ರಚಾರ: ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಂತೆ ಸದ್ದಿಲ್ಲದೇ ಪ್ರಚಾರ ಕಾರ್ಯಕ್ಕೆ ಇಳಿದು ನಮಗೆ ಮತ ನೀಡಿ… ನಮಗೆ ಮತ ನೀಡಿ.. ಎಂದು ತಮ್ಮ ವಾರ್ಡ್‌ ಮತದಾರರ ಮನವೊಲಿಸುತ್ತಿದ್ದಾರೆ. ಇನ್ನು ಕೆಲವರು ನಾಮಪತ್ರ ದೃಢವಾದ ಬಳಿಕವೇ ಪ್ರಚಾರಕ್ಕೆ ಇಳಿಯುವ ಯೋಚನೆಯಲ್ಲಿದ್ದಾರೆ.ಇದಲ್ಲದೇ ಈ ಬಾರಿ ಗ್ರಾಪಂ ಚುನಾವಣಾ ಪ್ರಚಾರಕ್ಕೆ ಸಾಮಾಜಿಕ ಜಾಲತಾಣದ ಮೂಲಕವೂ ಪ್ರಚಾರ ನಡೆಯುತ್ತಿದ್ದು, ತಮ್ಮದೇ ವಿಚಾರಗಳನ್ನು ಪ್ರಸ್ತಾಪಿಸಿ ವಾರ್ಡ್‌ ಸಮಸ್ಯೆ ಪರಿಹಾರ ಮಾಡುವೆ ನನಗೆ ಮತ ನೀಡಿ ಎಂದೆನ್ನುತ್ತಿದ್ದಾರೆ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.