ಉದ್ಯೋಗ ಖಾತ್ರಿ ಉತ್ತಮ ಅವಕಾಶ
Team Udayavani, Jun 4, 2020, 7:10 AM IST
ಕುಷ್ಟಗಿ: ಗುಮಗೇರಾದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಭಿತ್ತಿಪತ್ರವನ್ನು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಬಿಡುಗಡೆ ಮಾಡಿದರು.
ಕುಷ್ಟಗಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಬದು, ಕೃಷಿ ಹೊಂಡ ನಿರ್ಮಾಣ, ತೋಟಗಾರಿಕೆ, ರೇಷ್ಮೆ ಕೃಷಿ, ಅರಣ್ಯೀಕರಣ, ಎರೆಹುಳ ಗೊಬ್ಬರ, ತೊಟ್ಟಿ ನಿರ್ಮಾಣ ಮಾಡಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಹೇಳಿದರು.
ಗುಮಗೇರಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಭಿತ್ತಿಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೋವಿಡ್ ವೈರಸ್ ವ್ಯಾಪಕವಾಗಿದ್ದು, ವಲಸೆ ಬಂದವರು, ಪುನಃ ಹೊರರಾಜ್ಯ, ಜಿಲ್ಲೆಗಳಿಗೆ ಪುನಃ ವಲಸೆ ಹೋಗುವುದು ಅಗತ್ಯವಿಲ್ಲ. ಇಲ್ಲಿಯೇ ತಮ್ಮ ಜಮೀನಿನಲ್ಲಿ ಕೆಲಸವಿದೆ. ಕಾಯಕ ಮಿತ್ರ ಆ್ಯಪ್ ಮೂಲಕ ಕೂಲಿ ಬೇಡಿಕೆ ಸಲ್ಲಿಸಲು ಲಾಗಿನ್ ನೋಂದಣಿ ಅಗತ್ಯವಿಲ್ಲ. 15 ದಿನಗಳ ವರೆಗೆ ಕೂಲಿ ಬೇಡಿಕೆ ಸಲ್ಲಿಸಬಹುದಾಗಿದೆ ಎಂದರು.
ತಾಪಂ ಇಒ ಕೆ.ತಿಮ್ಮಪ್ಪ, ರವಿಕುಮಾರ ಜಂಬಲದಿನ್ನಿ, ತನ್ವಿರ್, ಚಂದ್ರಶೇಖರ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಮುಖಂಡರು, ಪಿಡಿಒ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ