ಹಿರಿಯರ ಮಾರ್ಗದರ್ಶನ ಎಲ್ಲರಿಗೂ ದಾರಿದೀಪ: ಕರಡಿ


Team Udayavani, Oct 2, 2020, 6:04 PM IST

Kopala-tdy-1

ಕೊಪ್ಪಳ: ಹಿರಿಯ ನಾಗರಿಕರು ನಮ್ಮೆಲ್ಲರ ಜೀವನದ  ಮೂಲ ಬೇರುಗಳಾಗಿದ್ದು, ಮಾರ್ಗದರ್ಶಿಗಳಾಗಿ ನಮಗೆ ಬದುಕು ರೂಪಿಸಿಕೊಳ್ಳಲು ಅವರಭಾವನಾತ್ಮಕ, ಅನುಭವ ಆಧಾರಿತ ಬೆಂಬಲ ಅಗತ್ಯ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

ನಗರದ ಜಿಪಂ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ, ಅವರಿಗೆ ಅವಶ್ಯಕವಾದ ಎಲ್ಲ ಸೌಲಭ್ಯ ನೀಡಿ ಬೆಳೆಸುತ್ತಾರೆ. ಸ್ವಂತ ಬದುಕು ಕಟ್ಟಿಕೊಳ್ಳಲು ಸಶಕ್ತರನ್ನಾಗಿಸಿ, ಪ್ರತಿ ಕ್ಷಣ ನಮ್ಮ ಬೆಂಬಲಕ್ಕೆ ನಿಂತು ನಮ್ಮ ಯಶಸ್ಸಿನಲ್ಲಿ ಅವರು ಸಂತೋಷ ಕಾಣುತ್ತಾರೆ. ಆದ್ದರಿಂದ ಮಕ್ಕಳು ಉತ್ತಮ ಭವಿಷ್ಯ ಕಟ್ಟಿಕೊಳ್ಳಲುಹಿರಿಯರ ಮಾರ್ಗದರ್ಶನ, ಸಲಹೆ ಪಡೆಯಬೇಕು. ಮುಪ್ಪಿನಲ್ಲಿ ಅವರಿಗೆ ಮಕ್ಕಳು ನೆರಳಾಗಬೇಕು ಎಂದರು.

ಹಿರಿಯ ನಾಗರಿಕರು ಸರ್ಕಾರದಿಂದ ಸಿಗುವಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಹಿರಿಯರ ಸಮಸ್ಯೆಗಳಿಗೆ ಸ್ಪಂದಿಸಲು ಸಹಾಯವಾಣಿಕೇಂದ್ರ ರಚಿಸಲಾಗಿದೆ. ನೇರವಾಗಿ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿದರೆ ಸಂಬಂಧಪಟ್ಟ ಅ ಧಿಕಾರಿಗಳು ಪರಿಹಾರ ಒದಗಿಸುತ್ತಾರೆ. ತಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಡಿ.ಕೆ. ಇಮಾಲಪ್ಪ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 97,295 ನಾಗರಿಕರಿರುವುದಾಗಿ ಅಂದಾಜಿಸಲಾಗಿದೆ. ಇಲಾಖೆಯಿಂದ ಇಲ್ಲಿವರೆಗೂ 52,198 ಹಿರಿಯ ನಾಗರಿಕರ ಗುರುತಿನ ಚೀಟಿ ವಿತರಿಸಿದೆ. ಸರ್ಕಾರದ ಅನುದಾನದಲ್ಲಿ 2 ವೃದ್ಧಾಶ್ರಮಗಳನ್ನು ನಡೆಸುತ್ತಿದ್ದು, ಕುಕನೂರಿನ ವಿದ್ಯಾನಂದ ಗುರುಕುಲ ವೃದ್ಧಾಶ್ರಮ ಮತ್ತು ಭಾಗ್ಯನಗರದ ಮೈತ್ರಿ ವೃದ್ಧಾಶ್ರಮನಿರ್ವಹಿಸಲಾಗುತ್ತಿದೆ. ಇದರಲ್ಲಿ 50 ಜನ ವೃದ್ಧರು ಆಶ್ರಯ ಪಡೆದಿದ್ದಾರೆ ಎಂದರು.

ಹಿರಿಯ ನ್ಯಾಯವಾದಿ ವಿ.ಎಂ. ಭೂಸನೂರಮಠ ಉಪನ್ಯಾಸ ನೀಡಿದರು. ಜಿಲ್ಲೆಯಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಸಿ.ವಿ. ಜಡಿಯವರ, ಜಿಲ್ಲಾ ಅಂಗವಿಕಲರ ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ ಹಾಗೂ ಜಿಲ್ಲಾ ವಿಕಲಚೇತನರ ಇಲಾಖೆ ಹಾಗೂ ಹಿರಿಯ ನಾಗರಿಕರಸಬಲೀಕರಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು. ಮುದಿಯಪ್ಪ ಮೇಟಿ ನಿರೂಪಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.