![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಹಿರಿಯರ ಮಾರ್ಗದರ್ಶನ ಎಲ್ಲರಿಗೂ ದಾರಿದೀಪ: ಕರಡಿ
Team Udayavani, Oct 2, 2020, 6:04 PM IST
![Kopala-tdy-1](https://www.udayavani.com/wp-content/uploads/2020/10/Kopala-tdy-1-620x372.jpg)
ಕೊಪ್ಪಳ: ಹಿರಿಯ ನಾಗರಿಕರು ನಮ್ಮೆಲ್ಲರ ಜೀವನದ ಮೂಲ ಬೇರುಗಳಾಗಿದ್ದು, ಮಾರ್ಗದರ್ಶಿಗಳಾಗಿ ನಮಗೆ ಬದುಕು ರೂಪಿಸಿಕೊಳ್ಳಲು ಅವರಭಾವನಾತ್ಮಕ, ಅನುಭವ ಆಧಾರಿತ ಬೆಂಬಲ ಅಗತ್ಯ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ನಗರದ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ, ಅವರಿಗೆ ಅವಶ್ಯಕವಾದ ಎಲ್ಲ ಸೌಲಭ್ಯ ನೀಡಿ ಬೆಳೆಸುತ್ತಾರೆ. ಸ್ವಂತ ಬದುಕು ಕಟ್ಟಿಕೊಳ್ಳಲು ಸಶಕ್ತರನ್ನಾಗಿಸಿ, ಪ್ರತಿ ಕ್ಷಣ ನಮ್ಮ ಬೆಂಬಲಕ್ಕೆ ನಿಂತು ನಮ್ಮ ಯಶಸ್ಸಿನಲ್ಲಿ ಅವರು ಸಂತೋಷ ಕಾಣುತ್ತಾರೆ. ಆದ್ದರಿಂದ ಮಕ್ಕಳು ಉತ್ತಮ ಭವಿಷ್ಯ ಕಟ್ಟಿಕೊಳ್ಳಲುಹಿರಿಯರ ಮಾರ್ಗದರ್ಶನ, ಸಲಹೆ ಪಡೆಯಬೇಕು. ಮುಪ್ಪಿನಲ್ಲಿ ಅವರಿಗೆ ಮಕ್ಕಳು ನೆರಳಾಗಬೇಕು ಎಂದರು.
ಹಿರಿಯ ನಾಗರಿಕರು ಸರ್ಕಾರದಿಂದ ಸಿಗುವಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಹಿರಿಯರ ಸಮಸ್ಯೆಗಳಿಗೆ ಸ್ಪಂದಿಸಲು ಸಹಾಯವಾಣಿಕೇಂದ್ರ ರಚಿಸಲಾಗಿದೆ. ನೇರವಾಗಿ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿದರೆ ಸಂಬಂಧಪಟ್ಟ ಅ ಧಿಕಾರಿಗಳು ಪರಿಹಾರ ಒದಗಿಸುತ್ತಾರೆ. ತಮ್ಮ ಆರೋಗ್ಯದ ಕಡೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಡಿ.ಕೆ. ಇಮಾಲಪ್ಪ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 97,295 ನಾಗರಿಕರಿರುವುದಾಗಿ ಅಂದಾಜಿಸಲಾಗಿದೆ. ಇಲಾಖೆಯಿಂದ ಇಲ್ಲಿವರೆಗೂ 52,198 ಹಿರಿಯ ನಾಗರಿಕರ ಗುರುತಿನ ಚೀಟಿ ವಿತರಿಸಿದೆ. ಸರ್ಕಾರದ ಅನುದಾನದಲ್ಲಿ 2 ವೃದ್ಧಾಶ್ರಮಗಳನ್ನು ನಡೆಸುತ್ತಿದ್ದು, ಕುಕನೂರಿನ ವಿದ್ಯಾನಂದ ಗುರುಕುಲ ವೃದ್ಧಾಶ್ರಮ ಮತ್ತು ಭಾಗ್ಯನಗರದ ಮೈತ್ರಿ ವೃದ್ಧಾಶ್ರಮನಿರ್ವಹಿಸಲಾಗುತ್ತಿದೆ. ಇದರಲ್ಲಿ 50 ಜನ ವೃದ್ಧರು ಆಶ್ರಯ ಪಡೆದಿದ್ದಾರೆ ಎಂದರು.
ಹಿರಿಯ ನ್ಯಾಯವಾದಿ ವಿ.ಎಂ. ಭೂಸನೂರಮಠ ಉಪನ್ಯಾಸ ನೀಡಿದರು. ಜಿಲ್ಲೆಯಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಸಿ.ವಿ. ಜಡಿಯವರ, ಜಿಲ್ಲಾ ಅಂಗವಿಕಲರ ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ ಹಾಗೂ ಜಿಲ್ಲಾ ವಿಕಲಚೇತನರ ಇಲಾಖೆ ಹಾಗೂ ಹಿರಿಯ ನಾಗರಿಕರಸಬಲೀಕರಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು. ಮುದಿಯಪ್ಪ ಮೇಟಿ ನಿರೂಪಿಸಿದರು.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ](https://www.udayavani.com/wp-content/uploads/2024/07/shivaraj-150x83.jpg)
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
![3-koppala](https://www.udayavani.com/wp-content/uploads/2024/07/3-koppala-150x90.jpg)
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
![Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು](https://www.udayavani.com/wp-content/uploads/2024/07/train-6-150x100.jpg)
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
![ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ](https://www.udayavani.com/wp-content/uploads/2024/07/Koppal-150x72.jpg)
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
![Tungabhadra Dam: Increased inflows release water to canals from June 19](https://www.udayavani.com/wp-content/uploads/2024/07/tunga-150x83.jpg)
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.