ಆರ್ ಎಸ್ಎಸ್ ಬಗ್ಗೆ ಮಾತಾಡದಿದ್ದರೆ ಕಾಂಗ್ರೆಸ್ ಗೆ ನಿದ್ದೆ ಬರಲ್ಲ: ಹಾಲಪ್ಪ ಆಚಾರ್
Team Udayavani, May 19, 2022, 1:20 PM IST
ಕೊಪ್ಪಳ: ಆರ್ ಎಸ್ಎಸ್ ಬಗ್ಗೆ ಮಾತನಾಡದೆ ಹೋದರೆ ಕಾಂಗ್ರೆಸ್ ಗೆ ನಿದ್ದೆಯೇ ಬರುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ಹೇಳಿದರು.
ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್ ಮಾತೆತ್ತಿದರೆ ಸಂಘ ಪರಿವಾರದ ಬಗ್ಗೆ ಮಾತಾಡುತ್ತದೆ. ಹೆಡಗೇವಾರ್ ರ ಪಠ್ಯ ಪುಸ್ತಕದಲ್ಲಿ ಸೇರಿಸುವ ವಿಚಾರ, ಅದರಲ್ಲಿ ತಪ್ಪೇನಿದೆ. ಸೇರಿಸಿದರೆ ಏನು ತಪ್ಪು? ಅವರು ರಾಷ್ಟ್ರಕ್ಕಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಒಂದು ಪಂಗಡಕ್ಕೆ ಕೆಲಸ ಮಾಡಿಲ್ಲ. ಹಿರಿಯರ ವಿಚಾರ ಪಠ್ಯದಲ್ಲಿ ಸೇರಸಿದರೆ ಏನು ಕಷ್ಟ ಎಂದರು.
ಭಗತ್ ಸಿಂಗ್ ಅವರನ್ನು ಪಠ್ಯದಿಂದ ಕೈ ಬಿಟ್ಟಿಲ್ಲ. ಕಾಂಗ್ರೆಸ್ ನವರಿಗೆ ಆರ್ ಎಸ್ಎಸ್ ಹೆಸರು ತೆಗೆಯದೆ ಹೋದರೆ ನಿದ್ದೆ ಬರಲ್ಲ, ಅದಕ್ಕೆ ನಾವೇನು ಮಾಡೋಕಾಗಲ್ಲ ಎಂದರು.
ಇದನ್ನೂ ಓದಿ:ನಾನು ರಾಜ್ಯ ರಾಜಕಾರಣಕ್ಕೆ ಮರಳುತ್ತಿಲ್ಲ: ಶೋಭಾ ಕರಂದ್ಲಾಜೆ ಸ್ಪಷ್ಟನೆ
ಜ್ಞಾನವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ವಿಚಾರ, ಇದೀಗ ಕೋರ್ಟ್ ಆದೇಶದ ಪ್ರಕಾರ ಸರ್ವೆ ಕೆಲಸ ನಡಿತೀದೆ ಎಂದರು.
ಕೊಪ್ಪಳ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಮಳೆಯಾಗಿದೆ. ಯಾವುದೇ ಜೀವಹಾನಿ ಆಗಿಲ್ಲ. ಕೆಲವು ಗ್ರಾಮದಲ್ಲಿ ನೀರು ನುಗ್ಗಿ ಹಾನಿಯಾಗಿದೆ. ಈಗಾಗಲೇ ಅಧಿಕಾರಿಗಳು ಸ್ಥಳಕ್ಕೆ ಹೋಗಿದ್ದಾರೆ. ಹಾನಿಯ ವರದಿ ಕೊಡಲು ಸೂಚಿಸಿದ್ದೇನೆ. ಏಕಾಏಕಿ ಇಷ್ಟೊಂದು ಪ್ರಮಾಣದ ಮಳೆ ಬರುತ್ತದೆ ಎಂದು ಗೊತ್ತಿರಲಿಲ್ಲ. ನಾನು ಈಗಾಗಲೇ ಹಲವಾರು ಪ್ರದೇಶಕ್ಕೆ ಭೇಟಿ ಕೊಟ್ಟಿದ್ದೇನೆ. ಜಿಲ್ಲಾಡಳಿತ ಹಾಗೂ ತಾಲೂಕ ಆಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹನುಮ ಜನ್ಮಭೂಮಿ ವಿವಾದ: ಟಿಟಿಡಿ ಅಧ್ಯಕ್ಷರ ಜೊತೆ ಮಾತನಾಡಿ ಸಮಸ್ಯೆ ಪರಿಹಾರ: ವಿನಯ್ ಗುರೂಜಿ
ಸಂಕಷ್ಟದಲ್ಲಿ ಮಣ್ಣೆತ್ತು ತಯಾರಕರು
ತಾಕತ್ತಿದ್ದರೆ ಬಿಜೆಪಿ ದಲಿತ ಸಿಎಂ ಘೋಷಿಸಲಿ: ಸಿದ್ದರಾಮಯ್ಯ
ಅಂಜನಾದ್ರಿಗೆ ಭೂಸ್ವಾಧೀನ : ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ, ಹೆಚ್ಚಿನ ಪರಿಹಾರಕ್ಕೆ ಪಟ್ಟು
ಮಣ್ಣೆತ್ತಿನ ಅಮವಾಸ್ಯೆ: ಬಸವ ಮೂರ್ತಿಗಳ ಆರಾಧನೆ; ಕೃಷಿಕರ ಮುಂಗಾರಿನ ಮೊದಲ ಹಬ್ಬ
MUST WATCH
ಹೊಸ ಸೇರ್ಪಡೆ
ನೀರಿನ ಪೈಪ್ಲೈನ್ಗೆ ಹಾನಿ: ರಸ್ತೆ ಬಿರುಕು
ಸರಕಾರ ಎಂಟು ವರ್ಷ ಪೂರೈಕೆ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಪುಸ್ತಕ
ಶಿರಚ್ಛೇದನ ಪ್ರಕರಣ: ಆರೋಪಿಗಳನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿ; ಮಾಜಿ ಸಿಎಂ ಮಾಂಝಿ
ಸದ್ಯದಲ್ಲೇ ಸಂಪುಟ ವಿಸ್ತರಣೆ; ನಿಗಮ ಮಂಡಳಿಗಳಿಗೆ ಪಟ್ಟಿಯೂ ಅಂತಿಮ?
ಗಡಿಯಾಚೆ ಅಡಗುವ ಅಪರಾಧಿಗಳ ಹೆಡೆಮುರಿ ಕಟ್ಟಲು ಕರ್ನಾಟಕ-ಕೇರಳ ಪೊಲೀಸ್ ಜಂಟಿ ಕಾರ್ಯಾಚರಣೆ