ಅಂತಿಮ ಹಂತದಲ್ಲಿ ಮಾಸ್ಟರ್ ಪ್ಲ್ಯಾನ್ ಮಾರ್ಪಾಡು

ಹಂಪಿ ಅಭಿವೃದ್ಧಿಪ್ರಾಧಿಕಾರದಿಂದ ಸಿದ್ಧತೆ­! 15 ಹಳ್ಳಿಗಳ ಕೈಬಿಡುವಂತೆ ಮನವಿ

Team Udayavani, Feb 18, 2021, 7:32 PM IST

Hampi development

ಗಂಗಾವತಿ: ಹಂಪಿ ಅಭಿವೃದ್ಧಿ ಪ್ರಾಧಿಕಾರದ ಮಾಸ್ಟರ್‌ ಪ್ಲಾನ್‌ ಮಾಡಿಫೈ ಮಾಡಲು ಸಿದ್ಧತೆ ನಡೆಯುತ್ತಿದ್ದು, ಈ ಬಾರಿ ಹೊಸಪೇಟೆ ಹೋಟೆಲ್‌ ಲಾಬಿಗೆ ಮಣಿಯದೇ ಆನೆಗೊಂದಿ ಭಾಗದ 15 ಹಳ್ಳಿಗಳನ್ನು ಪ್ರಾಧಿಕಾರದ ವ್ಯಾಪ್ತಿಯಿಂದ ಕೈಬಿಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಆನೆಗೊಂದಿಯಲ್ಲಿ ರಾಜ್ಯ ಪುರಾತತ್ವ ಇಲಾಖೆ ಸ್ಮಾರಕಗಳಿದ್ದು ಉಳಿದ ಹಳ್ಳಿಗಳಲ್ಲಿ ಯಾವುದೇ ಕೇಂದ್ರ  ಹಾಗೂ ರಾಜ್ಯ ಪುರಾತತ್ವ ಇಲಾಖೆಯಿಂದ ಗುರುತಿಸಲ್ಪಟ್ಟ ಸ್ಮಾರಕಗಳಿಲ್ಲ. ಆದ್ದರಿಂದ ಈ ಬಾರಿ ಪ್ರಾಧಿ ಕಾರದ ಮಾಸ್ಟರ್‌ ಪ್ಲಾನ್‌ ಮಾಡಿಫೈ ಮಾಡುವ ಸಂದರ್ಭದಲ್ಲಿ ಆನೆಗೊಂದಿ ಹಾಗೂ ಇತರೆ 15  ಹಳ್ಳಿಗಳನ್ನು ಪ್ರಾಧಿ ಕಾರದ ವ್ಯಾಪ್ತಿಯಿಂದ ಹೊರಗಿಡಲು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

ಹಂಪಿ ಸುತ್ತಲಿನ ಪ್ರದೇಶದಲ್ಲಿ ಅಕ್ರಮ ಚಟುವಟಿಕೆ ಪರಿಣಾಮ ಅಪಾಯದ ಅಂಚಿನಲ್ಲಿರುವ  ಹಂಪಿಯನ್ನು ಯುನೆಸ್ಕೋ ಪಟ್ಟಿಯಲ್ಲಿ ಸೇರಿಸಿದ್ದರಿಂದ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2002ರಲ್ಲಿ ಹಂಪಿಯ 14, ಆನೆಗೊಂದಿಯ 15 ಗ್ರಾಮ ಸೇರಿಸಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ರಚಿಸಿ 2005ರಲ್ಲಿ ಮಾರ್ಚಸೂಚಿ ಬಿಡುಗಡೆ ಮಾಡಿತ್ತು.

ನಿಯಮದ ಪ್ರಕಾರ ಪ್ರಾಧಿ ಕಾರದ ವ್ಯಾಪ್ತಿಯಲ್ಲಿ ಗ್ರಾಮಗಳಲ್ಲಿ ಅಕ್ರಮ ಕಟ್ಟಡ, ವ್ಯಾಪಾರ-ವಹಿವಾಟು,  ಕಲ್ಲು ಗಣಿಗಾರಿಕೆ, ಮರಳು ಗಣಿಗಾರಿಕೆ ಸೇರಿ ಹೊಸ ಯೋಜನೆ ಮಾಡುವಂತಿಲ್ಲ. ಅಗತ್ಯವಿದ್ದರೆ ಪ್ರಾ ಧಿಕಾರದ ಅನಪೇಕ್ಷಣಾ ಪತ್ರ (ಎನ್‌ಒಸಿ) ಪಡೆದು ಕಾರ್ಯ ಮಾಡಬೇಕಿದೆ. ಹೊಸ ಲೇಔಟ್‌ ರಚನೆ, ಬೃಹತ್‌ ಕಟ್ಟಡ ನಿರ್ಮಾಣ, ಮೊಬೈಲ್‌ ಟವರ್‌ ಅಳವಡಿಕೆಗೆಪೂರ್ಣ ನಿಷೇಧ ಹೇರಲಾಗಿದೆ.

ಪ್ರಾ ಧಿಕಾರದ 1988 ನಿಯಮದ ವಿರುದ್ಧ ನಿರ್ಮಿಸಲಾಗಿದ್ದ ವಿರೂಪಾಪುರಗಡ್ಡಿಯಲ್ಲಿದ್ದ ಅಕ್ರಮ  ರೆಸಾರ್ಟ್‌ಗಳನ್ನು ಸುಪ್ರೀಂಕೋರ್ಟ್‌ ನೆರವಿನಿಂದ ತೆರವುಗೊಳಿಸಲಾಗಿದೆ. ಈ ಹಂಪಿಯಲ್ಲಿರುವ ಸ್ಮಾರಕಗಳ ವಿನ್ಯಾಸಕ್ಕೆ ಮಾರಕವಾಗಿದ್ದ ಎಲ್ಲ ಹೋಟೆಲ್‌ ವಹಿವಾಟನ್ನು ಈ ಪ್ರ ಕಾರ ನಿಷೇಧಿಸಿದೆ. ವಿರೂಪಾಪುರಗಡ್ಡಿ ತೆರವಿನ ನಂತರ ಇದೀಗ ಪ್ರಾ ಧಿಕಾರದ ಮಾಸ್ಟರ್‌ ಪ್ಲಾನ್‌ ಮಾಡಿಫೈ ಮಾಡಲಾಗುತ್ತಿದ್ದು ಸ್ಥಳೀಯರು ಆಕ್ಷೆಪವೆತ್ತಿದ್ದಾರೆ.

ಪ್ರಾಧಿಕಾರದ ನಿಯಮದಂತೆ ಕೇಂದ್ರ-ರಾಜ್ಯ ಪ್ರಾಚ್ಯವಸ್ತು ಪುರಾತತ್ವ ಇಲಾಖೆ ವ್ಯಾಪ್ತಿಯ ಸುತ್ತಲು ವ್ಯಾಪಾರ-ವಹಿವಾಟು ಮಾಡಲು ಅವಕಾಶವಿಲ್ಲ. ಆನೆಗೊಂದಿಯಲ್ಲಿ ಮಾತ್ರ ರಾಜ್ಯ ಪುರಾತತ್ವ ಇಲಾಖೆ ಸ್ಮಾರಕಗಳಿದ್ದು ಹನುಮನಹಳ್ಳಿ, ಸಾಣಾಪುರ, ಚಿಕ್ಕರಾಂಪುರ ಕ್ರಾಸ್‌, ಸಾಣಾಪುರ ತಿರುಮಲಾಪುರ, ಜಂಗ್ಲಿ ರಂಗಾಪುರ ಭಾಗದಲ್ಲಿ ಯಾವುದೇ ಸ್ಮಾರಕಗಳಿಲ್ಲ. ಆದರೂ ಪ್ರಾಧಿಕಾರದವರು ಸ್ಥಳೀಯರನ್ನು ಅಪರಾ ಧಿಗಳಂತೆ ಕಾಣುತ್ತಿದ್ದು ಕೂಡಲೇ ಆನೆಗೊಂದಿ ಭಾಗದ 15 ಹಳ್ಳಿಗಳ ಮೇಲೆ ಹೇರಿರುವ ಅವೈಜ್ಞಾನಿಕ ನಿಯಮ ಕೂಡಲೇ ತೆರವುಗೊಳಿಸುವಂತೆ ಆನೆಗೊಂದಿ, ಸಾಣಾಪುರ, ಸಂಗಾಪುರ, ಮಲ್ಲಾಪುರ ಗ್ರಾಪಂ ವ್ಯಾಪ್ತಿಯ ಜನರು ಸಂಸದರು, ಶಾಸಕರು, ಸಚಿವರಿಗೆ ಮನವಿ ಮಾಡಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಕಿಷ್ಕಿಂದಾ ಅಂಜನಾದ್ರಿ ಬೆಟ್ಟ, ಪಂಪಾ ಸರೋವರ, ಋಷಿಮುಖ ಪರ್ವತ, ಆನೆಗೊಂದಿ ನವವೃಂದಾವನ ಗಡ್ಡಿ ಹಾಗೂ ಆನೆಗೊಂದಿ ದೇಗುಲ ವೀಕ್ಷಿಸಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು, ಇವರಿಗೆ  ಊಟ, ವಸತಿ ಕಲ್ಪಿಸಲು ಸುತ್ತಲಿನ ಗ್ರಾಮಗಳಲ್ಲಿ ಸಣ್ಣ ಪುಟ್ಟ ಅಂಗಡಿ- ಮುಂಗಟ್ಟು ಆರಂಭಿಸಲಾಗಿದೆ. ಇವುಗಳ ಮೇಲೆ ಹೊಸಪೇಟೆ ಹೋಟೆಲ್‌ ಮಾಲೀಕರ ಕೆಂಗಣ್ಣು ಬಿದ್ದಿದ್ದು ಪ್ರಾಧಿ ಕಾರದ ಹೊಸ ಮಾಸ್ಟರ್‌ ಪ್ಲಾನ್‌ನಲ್ಲಿ ನಿಯಮ ಸರಳಗೊಳಿಸದೇ ಇನ್ನಷ್ಟು ಕಠಿಣಗೊಳಿಸಲು ಒತ್ತಡ ಹಾಕಲಾಗುತ್ತಿದ್ದು ಸ್ಥಳೀಯರ ಮನವಿಗೆ ಪ್ರಾಧಿಕಾರದ ಸ್ಪಂದನೆ ಇಲ್ಲವಾಗಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.