ಆಕ್ಸಫರ್ಡ್‌ನಂತೆ ಹಂಪಿ ವಿವಿ ಅಭಿವೃದ್ಧಿ: ಡಾ| ರಮೇಶ

ಇತ್ತೀಚೆಗೆ ಕಡಿಮೆಯಾಗುತ್ತಿದೆ ಓದುವ ಹವ್ಯಾಸ ವಿಶಿಷ್ಟ ರೀತಿಯಲ್ಲಿ ಗಮನ ಸೆಳೆದಿದೆ ಹಂಪಿ ವಿವಿ

Team Udayavani, Jul 7, 2019, 4:04 PM IST

kopala-tdy-4..

ಕೊಪ್ಪಳ: ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿಠuಪ್ಪ ಗೋರಂಟ್ಲಿ ಅವರ ಕವನ ಸಂಕಲನ 'ಸೇತು ಬಂಧ'ವನ್ನು ಗಣ್ಯರು ಲೋಕಾರ್ಪಣೆಗೊಳಿಸಿದರು.

ಕೊಪ್ಪಳ: ಹಂಪಿ ವಿಶ್ವವಿದ್ಯಾಲಯ ರಾಜ್ಯದಲ್ಲಿಯೇ ವಿಶಿಷ್ಟ ರೀತಿಯಲ್ಲಿ ಗಮನ ಸೆಳೆದಿದೆ. ಆಕ್ಸಫರ್ಡ್‌ ರೀತಿಯಲ್ಲಿ ನಾವು ವಿವಿಯನ್ನು ಅಭಿವೃದ್ಧಿ ಮಾಡಲಿದ್ದೇವೆ ಎಂದು ಹಂಪಿ ವಿವಿ ಕುಲಪತಿ ಡಾ| ರಮೇಶ ಸ.ಚಿ. ಹೇಳಿದರು.

ನಗರದ ಸರ್ಕಾರಿ ಪದವಿ ಕಾಲೇಜು ಸಭಾಂಗಣದಲ್ಲಿ ಸಾಹಿತಿ ವಿಠuಪ್ಪ ಗೋರಂಟ್ಲಿ ಅವರ ಸೇತುಬಂಧ ಕವನ ಸಂಕಲನ ಲೋಕಾರ್ಪಣೆ ಮಾಡಿ ಮಾತನಾಡಿದರು. ಹಂಪಿ ವಿವಿ ವಿದ್ಯೆಯನ್ನು ನೀಡುವುದಿಲ್ಲ, ಅದು ವಿದ್ಯೆಯನ್ನು ಸೃಷ್ಠಿ ಮಾಡುತ್ತದೆ. ಇದೇ ಆಶಯದಿಂದಲೇ ಅದನ್ನು ಕಂಬಾರ ಅವರು ವಿಶೇಷ ಕಲ್ಪನೆಯ ಮೂಲಕ ಹುಟ್ಟು ಹಾಕಿದ್ದಾರೆ. ನಂತರ ಬಂದ ಕುಲಪತಿಗಳು ಅತ್ಯುತ್ತಮವಾಗಿಯೇ ಮುನ್ನಡೆಸಿಕೊಂಡು ಬಂದಿದ್ದಾರೆ. ನಾನು ಕುಲಪತಿಯಾಗಿ ಇತ್ತೀಚಿಗೆ ಅಧಿಕಾರ ವಹಿಸಿಕೊಂಡಿದ್ದು, ಅದನ್ನು ಆಕ್ಸಫರ್ಡ್‌ ವಿವಿಯಂತೆ ಅಭಿವೃದ್ಧಿ ಮಾಡುವ ಕನಸು ಹೊತ್ತಿದ್ದೇನೆ ಎಂದರು.

ಇದುವರೆಗೂ ಸುಮಾರು 2 ಸಾವಿರ ಪುಸ್ತಕಗಳನ್ನು ಹಂಪಿ ಕನ್ನಡ ವಿವಿ ಹೊರತಂದಿದೆ. ಇದರ ಸಂಖ್ಯೆ ಇನ್ನೂ ಹೆಚ್ಚಳ ಮಾಡುವ ಸದಾಯಶಯ ಹೊಂದಿದ್ದೇನೆ. ವಿಶೇಷವಾಗಿ ಸಂಶೋಧನಾತ್ಮಕ ಕೃತಿಗಳನ್ನು ಹೊರತರುವ ಮೂಲಕ ಕನ್ನಡ ಸಂಪತ್ತನ್ನು ಶ್ರೀಮಂತ ಮಾಡುವ ಪ್ರಯತ್ನವನ್ನು ಸದಾ ಮಾಡುತ್ತಿದೆ. ಈ ಕಾರಣಕ್ಕಾಗಿಯೇ ಹಂಪಿ ವಿವಿ ವಿಶೇಷ ಎಂದರು.

ಕಾಲೇಜು ಶಿಕ್ಷಣವನ್ನು ಪಡೆಯದ ವಿಠuಪ್ಪ ಗೋರಂಟ್ಲಿ ಅವರಲ್ಲಿ ಸಾಹಿತ್ಯದಲ್ಲಿ ದೊಡ್ಡ ಕೃಷಿ ಮಾಡಿದ್ದಾರೆ. ಅವರು ಸತತವಾಗಿ ಅಧ್ಯಯನ ಮಾಡುತ್ತಲೇ ಪದವಿ ಓದಿದವರು ನಾಚುವಂತೆ ಸಾಹಿತ್ಯ ಕೃಷಿ ಮಾಡುತ್ತಿದ್ದಾರೆ. ಅವರು ಅನೇಕ ಬರಹಗಳು ಮುದ್ರಣ ಕಂಡಿಲ್ಲ ಎನ್ನುವುದು ಗೊತ್ತಾಗಿದ್ದು, ಅವುಗಳನ್ನು ಹಂಪಿ ವಿವಿಯ ಮೂಲಕ ಮುದ್ರಣ ಮಾಡಿಸಲಾಗುವುದು ಎಂದರು.

ಈಗಾಗಲೇ 6 ಕವನ ಸಂಕಲನ ತಂದಿರುವುದು ನಿಜಕ್ಕೂ ಸಾಧನೆಯೇ ಸರಿ. ನಾನು ಸಹ ಹಿಂದೆ ಕವನಗಳನ್ನು ಬರೆದದ್ದು, ನೆನಪಿಗೆ ಬಂದಿತು. ಆದರೆ ನಂತರ ಬರವಣಿಗೆ ಮುಂದುವರಿಸಲು ಆಗಲಿಲ್ಲ ಎಂದರು.

ಕವನ ಸಂಕಲನದ ಕುರಿತು ವಿದ್ವಾಂಸ ಈರಪ್ಪ ಕಂಬಳಿ ಮಾತನಾಡಿ, ವಿಠuಪ್ಪ ಅವರ ಕವನ ಸಂಕಲನ ಅತ್ಯುತ್ತಮವಾಗಿದೆ. ಆದರೆ ಇಂತಹ ಅತ್ಯುತ್ತಮ ಕಾರ್ಯಕ್ರಮಕ್ಕೆ ಯುವಕರು ಬಾರದಿರುವುದು ಬೇಸರ ತಂದಿದೆ ಎಂದರು.

ಸಾಹಿತ್ಯ ಓದುವುದರಿಂದ ವ್ಯಕ್ತಿ ದಿವ್ಯ ಶಕ್ತಿಯನ್ನು ಪಡೆದುಕೊಳ್ಳುತ್ತಾನೆ. ನಾನು ಸಹ ಓದಿನಿಂದಲೇ ಬದುಕಿನ ಎಲ್ಲವನ್ನು ಕಂಡುಕೊಂಡಿದ್ದೇನೆ. ಆದರೂ ಇಂದಿನ ಕಾಲಘಟ್ಟದಲ್ಲಿ ಓದು ತೀರಾ ಕಡಿಮೆಯಾಗಿರುವುದು ಬೇಸರದ ಸಂಗತಿ ಎಂದರು.

ಪ್ರಾಂಶುಪಾಲ ಡಾ| ಸಿ.ಬಿ. ಚಿಲ್ಕರಾಗಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಾಹಿತಿ ವೆಂಕಟರಾಜು, ದೇವರ ದಾಸಿಮಯ್ಯ ಅಧ್ಯಯನ ಪೀಠದ ಡಾ| ಗೋವಿಂದ, ಡಿ.ಎಚ್. ಪೂಜಾರ, ಬಸವರಾಜ ಶೀಲವಂತರ, ಕೆ. ಕಾಳಪ್ಪ, ರಾಜಶೇಖರ ಅಂಗಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಚಿನ್ಮಯಿ ಹಾಗೂ ಪ್ರಿಯಾಂಕ ಪ್ರಾರ್ಥಿಸಿದರು. ವಿಠuಪ್ಪ ಗೋರಂಟ್ಲಿ ಅವರು ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಜಿ.ಎಸ್‌. ಗೋನಾಳ ಅವರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.