ಯಲ್ಲಾಲಿಂಗ ಪ್ರಕರಣ ಸಿಬಿಐಗೆ ವಹಿಸಿ
•2005, ಜ. 11ರಂದು ಅನುಮಾನಾಸ್ಪದ ಸಾವು•ಸದ್ಯ ಸಿಐಡಿಯಿಂದ ತನಿಖೆ
Team Udayavani, Sep 15, 2019, 11:48 AM IST
ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಕನಕಾಪೂರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ಯಲ್ಲಾಲಿಂಗನ ತಾಯಿ ಕೆಂಚಮ್ಮಾ ಅಗಸಿಮಂದಿನ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಕೊಪ್ಪಳದ ರೈಲ್ವೆ ಸ್ಟೇಷನ್ ಸಮೀಪ 2005, ಜ. 11ರಂದು ಯಲ್ಲಾಲಿಂಗ ದೇಹ ತುಂಡರಿಸಿದ ರೀತಿಯಲ್ಲಿ ಪತ್ತೆಯಾಗಿತ್ತು. ಉದ್ದೇಶ ಪೂರ್ವಕ ಕೊಲೆ ಮಾಡಿರುವುದಾಗಿ ಆರೋಪಿಸಿ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಆಗ ತಾವು ನಮ್ಮ ಮನೆಗೆ ಭೇಟಿ ನೀಡಿ ಸ್ಪಂದಿಸಿ ಸರ್ಕಾರದ ಮಟ್ಟದಲ್ಲಿ ತನಿಖೆಗೆ ಒತ್ತಾಯಿಸಿದ್ದೀರಿ. ಈ ಹಿನ್ನೆಲೆಯಲ್ಲಿ ಅಂದಿನ ಸರ್ಕಾರವನ್ನು ಪ್ರಕರಣ ಸಿಐಡಿಗೆ ವಹಿಸಿತ್ತು. ಪ್ರಕರಣದಲ್ಲಿ ಒಂಬತ್ತು ಆರೋಪಿಗಳನ್ನು ಸಿಐಡಿ ತಂಡ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅದರಲ್ಲಿ ಮೊದಲ ಆರೋಪಿ ಹನುಮೇಶ್ ನಾಯಕ್ ಜಾಮೀನು ಪಡೆದು ಹೊರ ಬಂದಿದ್ದು, ನಮ್ಮ ಕುಟುಂಬ ಮೇಲೆ ಮತ್ತೆ ದೌರ್ಜನ್ಯ ಎಸಗುತ್ತಿದ್ದಾನೆ. ಅವರ ಸಹೋದರ ರಮೇಶ ನಾಯಕ್ ಎಲ್ಲ ಸಾಕ್ಷಿಗಳಿಗೆ ಹಣದ ಆಮಿಷ ತೋರಿಸಿ, ಹೆದರಿಸಿ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಸಿದ್ದಾರೆ. ಇದರಿಂದ ನಮ್ಮ ಮಗನ ಸಾವಿಗೆ ನ್ಯಾಯ ಸಿಗುತ್ತಿಲ್ಲವೆಂದು ತಾಯಿ ಕೆಂಚಮ್ಮ ಸಿಎಂ ಮುಂದೆ ಅಳಲು ತೋಡಿಕೊಂಡಿದ್ದಾಳೆ.
ರಮೇಶ ಮಾನಪ್ಪ ನಾಯಕ್ ಅಂದಿನ ಸಚಿವರಾಗಿದ್ದ ಶಿವರಾಜ ತಂಗಡಗಿ ಅವರ ಪ್ರಭಾವ ಬಳಸಿ ಪ್ರಕರಣದಿಂದ ಹೆಸರು ತೆಗೆಸಲಾಗಿದೆ. ಉಳಿದವರು ಬೇಲ್ ಪಡೆದು ಹೊರ ಬಂದಿದ್ದಾರೆ. ಕೂಡಲೇ ಈತನನ್ನು ವಿಚಾರಣೆ ಮಾಡಬೇಕು. ಇದರಲ್ಲಿ ಈತನ ಪಾತ್ರವೂ ಇದೆ ಎಂದು ಆರೋಪಿಸಿದ ಅವರು, ಈ ಪ್ರಕರಣ ನಡೆದು ಐದು ವರ್ಷ ಗತಿಸಿದ್ದು, ಸರ್ಕಾರ ಯಾವುದೇ ಪರಿಹಾರ ಕೊಟ್ಟಿಲ್ಲ. ಹೀಗಾಗಿ ನಮ್ಮ ಕುಟುಂಬ ಬೀದಿ ಪಾಲಾಗಿದ್ದು, ಸರ್ಕಾರವು ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ