ಧಮ್ ಇದ್ದಲ್ಲಿ ಸಿಬಿಐಗೆ ವಹಿಸಿ : ದೊಡ್ಡನಗೌಡ ಪಾಟೀಲರಿಗೆ ಬಯ್ಯಾಪೂರ ಸವಾಲು
1,300 ಕೋಟಿ ರೂ. ಅನುದಾನದ ಕೆಲಸ ನಿರ್ವಹಿಸಿದ ಬಗ್ಗೆ ಅನುಮಾನ
Team Udayavani, Dec 16, 2022, 10:27 PM IST
ಕುಷ್ಟಗಿ: ಬಿಜೆಪಿಯವರಿಗೆ ಕುಷ್ಟಗಿ ಕ್ಷೇತ್ರಕ್ಕೆ ಬಿಡುಗಡೆಯಾದ 1,300 ಕೋಟಿ ರೂ. ಅನುದಾನದ ಕೆಲಸ ನಿರ್ವಹಿಸಿದ ಬಗ್ಗೆ ಅನುಮಾನದ ಆಪಾದನೆ ಇದೆ. ತಾಕತ್ ಇದ್ದಲ್ಲಿ, ಧಮ್ ಇದ್ದಲ್ಲಿ ಸಿಬಿಐಗೆ ವಹಿಸಿ ನೋಡೋಣ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಸ್ಥಳೀಯ ಬಿಜೆಪಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರಿಗೆ ಬಹಿರಂಗ ಸವಾಲು ಹಾಕಿದರು.
ಇಲ್ಲಿನ ಟಿಎಪಿಸಿಎಂಎಸ್ ಮೈದಾನದಲ್ಲಿ ನಡೆದ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರ 69ನೇ ಜನ್ಮ ದಿನೋತ್ಸವ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಬಿಜೆಪಿಯವರು 1,300 ಕೋಟಿ ರೂ. ಬಿಡುಗಡೆಯಾದ ಅನುದಾನ ಒಪ್ಪಿಕೊಂಡಿದ್ದಾರೆ. ಈ ಅನುದಾನದಲ್ಲಿ ತಾವರಗೇರ ಕುಡಿಯುವ ನೀರು 100 ಕೋಟಿ ರೂ., ಕೆರೆ ತುಂಬಿಸುವ ಯೋಜನೆಗೆ 500 ಕೋಟಿ ರೂ., ಚಕ್ ಡ್ಯಾಂ 100 ಕೋಟಿ ರೂ., ಕುಷ್ಟಗಿ ಪಟ್ಟಣಕ್ಕೆ ಕುಡಿಯುವ ನೀರು, ರಸ್ತೆಗಳು, ಶಾಲಾ ಕಾಲೇಜು ಈ ರೀತಿಯ ಆನೇಕ ಕಟ್ಟಡಗಳನ್ನು ನಿರ್ಮಿಸಿ ಶೈಕ್ಷಣಿಕವಾಗಿ ಮುಂದೆ ಬರಲು ಇಚ್ಛಾಶಕ್ತಿಯಿಂದ ನಿರ್ವಹಿಸಿದ್ದೇವೆ. ನಿಮ್ಮೆಲ್ಲರ ಆಶೀರ್ವಾದದಿಂದ ಈ ಕ್ಷೇತ್ರದಲ್ಲಿ ಮತ್ತೊಮ್ಮೆ ವಿಜಯ ಪತಾಕೆ ಹಾರಿಸುತ್ತೇವೆ ಇದರಲ್ಲಿ ಯಾವೂದೇ ಅನುಮಾನ ಇಲ್ಲ. ನಿಮ್ಮೆಲ್ಲರ ಆಶೀರ್ವಾದ ಇರುವವರೆಗೂ ಕ್ಷೇತ್ರಕ್ಕೆ ಸುಭಿಕ್ಷೆ ತರುವ ಕೆಲಸ ನಿರ್ವಹಿಸುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು