ಗಂಗಾವತಿಯಲ್ಲಿ ಮಟ್ಕಾ,ಇಸ್ಪೀಟ್, ಮೀಟರ್ ಬಡ್ಡಿ ದಂಧೆ: ಅಧಿವೇಶನದಲ್ಲಿ ಹೆಚ್ ಡಿಕೆ ಪ್ರಸ್ತಾಪ
Team Udayavani, Mar 9, 2022, 5:51 PM IST
ಗಂಗಾವತಿ: ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ಶ್ರೀರಾಮನಗರದಲ್ಲಿ 20 ಕ್ಕೂ ಹೆಚ್ಚು ಮಟ್ಕಾ(ಒಸಿ), ಇಸ್ಪೀಟ್ ಅಡ್ಡೆಗಳು ಮತ್ತು ಮೀಟರ್ ಬಡ್ಡಿ ದಂಧೆಯಿಂದ ಜನತೆ ರೋಸಿ ಹೋಗಿದ್ದು ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯ ಅಧಿವೇಶನ ಗಮನ ಸೆಳೆದು ಪ್ರಶ್ನೋತ್ತರ ಸಮಯದಲ್ಲಿ ಪ್ರಸ್ತಾಪಿಸಿ ಸಮಸ್ಯೆಯ ಗಂಭೀರತೆ ಬಗ್ಗೆ ಮಾತನಾಡಿದರು.
ಹೆಚ್ಚಾಗಿ ಯುವಕರು ಇಂತಹ ಅಕ್ರಮ ದಂಧೆಯ ಸುಳಿಗೆ ಸಿಲುಕಿ ಇಡೀ ಜೀವನದ ಭವಿಷ್ಯವನ್ನು ಅಂಧಕಾರ ಮಾಡಿಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆ ಕಣ್ಮುಚ್ಚಿಕೊಂಡು ಕುಳಿತ್ತಿದ್ದು ಚುನಾಯಿತ ಜನಪ್ರತಿನಿಧಿಗಳ ಕುಮ್ಮಕ್ಕು ಇದ್ದರೆ ಮಾತ್ರ ಇಂತಹ ಅಕ್ರಮ ದಂಧೆಗಳು ನಡೆಯಲು ಸಾಧ್ಯ. ತಾವು ಸಂಮಿಶ್ರ ಸರಕಾರ ನಡೆಸುವ ಸಂದರ್ಭದಲ್ಲಿ ಋಣಮುಕ್ತ ಕಾಯ್ದೆ ಜಾರಿ ಮಾಡಿದ್ದು ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲವಾದ್ದರಿಂದ ಪೊಲೀಸ್ ಇಲಾಖೆ ಈ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳುತ್ತಿಲ್ಲ.
ಅಕ್ರಮ ದಂಧೆಗಳ ಮೂಲಕ ಪ್ರತಿ ತಿಂಗಳು ಪೊಲೀಸ್ ಸೇರಿ ವಿವಿಧ ಇಲಾಖೆಯವರಿಗೆ ಕೋಟ್ಯಾಂತರ ರೂ. ತಲುಪುತ್ತದೆ ಸರಕಾರ ಯುವಕರ ಭವಿಷ್ಯ ಹಾಳಾಗುವ ಮುನ್ನ ಸೂಕ್ತ ಕಾನೂನು ಕ್ರಮ ಕೈಗೊಂಡು ಮಟ್ಕಾ, ಇಸ್ಪೀಟ್ ಮತ್ತು ಅಕ್ರಮ ಮೀಟರ್ ಬಡ್ಡಿ ದಂಧೆ ನಡೆಸುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವಂತೆ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ