ಗರ್ಜಿನಾಳ ಆರೋಗ್ಯ ಉಪಕೇಂದ್ರಕ್ಕೆ ಬೀಗ

ಕೇಂದ್ರದ ಸುತ್ತಲೂ ಕುಡುಕರ ಹಾವಳಿ 

Team Udayavani, Mar 28, 2022, 4:28 PM IST

11

ದೋಟಿಹಾಳ: ಸಮೀಪದ ಮುದೇನೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗರ್ಜಿನಾಳ ಆರೋಗ್ಯ ಉಪಕೇಂದ್ರಕ್ಕೆ ಎರಡು ತಿಂಗಳಿಂದ ಬೀಗ ಹಾಕಿದ್ದು, ಸೂಕ್ತ ಚಿಕಿತ್ಸೆಯಿಲ್ಲದೇ ಜನತೆ ಪರದಾಡುವಂತಾಗಿದೆ. ಆರೋಗ್ಯ ಕೇಂದ್ರಕ್ಕೆ ಬೀಗ ಹಾಕಿದ ಕಾರಣ ಕೇಂದ್ರದ ಆವರಣ ಕುಡುಕರ ತಾಣವಾಗಿ ಮಾರ್ಪಟ್ಟಿದೆ. ಹೀಗಾಗಿ ಸಾರ್ವಜನಿಕರು ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾರ್ವಜನಿಕರು ಸಣ್ಣಪುಟ್ಟ ಕಾಯಿಲೆಗೂ ಚಿಕಿತ್ಸೆಯಿಲ್ಲದೇ ಪರದಾಡುವಂತಾಗಿದೆ. ಗ್ರಾಮದಲ್ಲಿ ಚಿಕ್ಕಮಕ್ಕಳು, ಗರ್ಭಿಣಿಯರು, ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾದರೆ 10-12 ಕಿ.ಮೀ. ದೂರದ ತಾವರಗೇರಾ ಸರಕಾರಿ ಆಸ್ಪತ್ರೆ ಹೋಗಬೇಕು. ರಾತ್ರಿ ವೇಳೆ ಸಾರ್ವಜನಿಕರಿಗೆ ತೊಂದರೆಯಾದರೆ ಕಷ್ಟವಾಗುತ್ತದೆ. ಈ ವೇಳೆ ಕೆಲವರು ಖಾಸಗಿ ವಾಹನದ ಮೂಲಕ ಹೋಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಬಡವರು ಸಕಾಲಕ್ಕೆ ಚಿಕಿತ್ಸೆ ಸಿಗದೇ ಪರದಾಡುವಂತಾಗಿದೆ ಎಂದು ಗ್ರಾಮದ ಯುವಕರು ಹೇಳುತ್ತಾರೆ.

ಈ ಆರೋಗ್ಯ ಉಪಕೇಂದ್ರದ ಆವರಣ ನಿರ್ಜನ ಪ್ರದೇಶವಾದ ಕಾರಣ ಕುಡುಕರ ಹಾವಳಿ ಹೆಚ್ಚಾಗಿದೆ. ಆರೋಗ್ಯ ಇಲಾಖೆಯ ಸುತ್ತಲೂ ಅನಾರೋಗ್ಯದ ವಾತಾವರಣ ಕಂಡುಬರುತ್ತಿದೆ.

ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಸಾರ್ವಜನಿಕರಿಗೆ ಇದರ ಬಗ್ಗೆ ತಿಳಿವಳಿಕೆ ನೀಡಬೇಕೆಂಬುದೇ ನಾಗರಿಕರ ಕಳಕಳಿಯಾಗಿದೆ.

ಕೇಂದ್ರದಲ್ಲಿ ಮೂರು ಹುದ್ದೆಗಳಿದ್ದು, ಸದ್ಯ ಈ ಮೂರು ಹುದ್ದೆಗಳು ಖಾಲಿ ಇರುವುದರಿಂದ ಈ ಕೇಂದ್ರಕ್ಕೆ ಬೀಗ ಹಾಕಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿಯಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ.

ಕೇಂದ್ರದ ಹಿರಿಯ ಆರೋಗ್ಯ ಅಧಿಕಾರಿ ಮತ್ತು ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆ ಖಾಲಿ ಇದೆ. ಎಎನ್‌ಎಂ ಅವರು ಹೆರಿಗೆ ಮೇಲೆ ರಜೆ ಹೋಗಿದ್ದಾರೆ. ಹೀಗಾಗಿ ಸಿಬ್ಬಂದಿ ಇಲ್ಲದ ಕಾರಣ ಈ ಕೇಂದ್ರಕ್ಕೆ ಬೀಗ ಹಾಕಲಾಗಿದೆ.

 

ನಮ್ಮೂರ ಆಸ್ಪತ್ರೆಯ ಬಾಗಿಲು ಹಾಕಿ ಎರಡು ತಿಂಗಳ ಆಗೇತ್ರಿ. ಯಾರಿಗಾದರೂ ಮೈಯಾಗ್‌ ಹುಷಾರಿಲ್ಲ ಅಂದ್ರೆ ಗಾಡಿ ಮಾಡಿಕೊಂಡು ತಾವರಗೇರಾ ಪಟ್ಟಣಕ್ಕೆ ಹೋಗಬೇಕ್ರಿ. ನಮ್ಮ ಆಸ್ಪತ್ರೆಯ ಪರಿಸ್ಥಿತಿ ಬಗ್ಗೆ ಯಾರಿಗೂ ಕಾಳಜಿ ಇಲ್ಲದಂತಾಗೆತ್ರಿ.

-ದುರ್ಗಮ್ಮ ತಿನ್ನಾಳ, ಗರ್ಜಿನಾಳ ಗ್ರಾಮಸ್ಥೆ

 

ಗರ್ಜಿನಾಳ ಆರೋಗ್ಯ ಉಪಕೇಂದ್ರದ ಸಮಸ್ಯೆ ಬಗ್ಗೆ ಮಾಹಿತಿ ಇಲ್ಲ. ಒಂದು ವೇಳೆ ಅಲ್ಲಿ ಮೂರು ಹುದ್ದೆ ಖಾಲಿ ಇದ್ದರೆ. ವಾರದಲ್ಲಿ ಮೂರು ದಿನಗಳ ಕಾಲ ಬೇರೊಬ್ಬರನ್ನು ಅಲ್ಲಿಗೆ ಕಳಿಸಿ, ಸಾರ್ವಜನಿಕರ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡುತ್ತೇವೆ.

-ಡಾ| ಆನಂದ ಗೋಟೂರ, ತಾಲೂಕು ಆರೋಗ್ಯಾಧಿಕಾರಿ

-ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.