ಭತ್ತದ ಬೆಳೆ ಇಳುವರಿ ಭಾರೀ ಕುಸಿತ

ಖರೀದಿಗೆ ಬಾರದ ವ್ಯಾಪಾರಿಗಳು

Team Udayavani, Oct 24, 2020, 1:47 PM IST

KOPALA-TDY-1

ಗಂಗಾವತಿ: ಸತತ ಮಳೆಯ ಪರಿಣಾಮ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಈ ಬಾರಿ ಮುಂಗಾರು ಭತ್ತದ ಬೆಳೆಯಲ್ಲಿ ಇಳುವರಿ ಕಡಿಮೆಯಾಗಿದೆ. ಪ್ರಸ್ತುತ ವರ್ಷ ಭತ್ತ ಬೆಳೆಯಲು ಎಕರೆಗೆ 25-30 ಸಾವಿರ ರೂ. ಖರ್ಚು ಬರುತ್ತಿದ್ದು, ಇಳುವರಿ ಎಕರೆಗೆ 30-35 ಕ್ವಿಂಟಲ್‌ ಬರುತ್ತಿದೆ. ಸಾಲ ಮಾಡಿ ಭತ್ತ ಬೆಳೆದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ.

ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಿಂದಾಗಿ ಆಗಸ್ಟ್‌ನಲ್ಲಿ ಕಾಲುವೆಗಳಿಗೆ ನೀರು ಹರಿಸಲಾಗಿದ್ದು, ಅಚ್ಚುಕಟ್ಟು ಪ್ರದೇಶದ ರೈತರು ಸೋನಾಮಸೂರಿ, ಕಾವೇರಿ ಸೋನಾ, ಗಂಗಾವತಿ ಸೋನಾ ಯರ್ರಮಲ್ಲಿಗೆ ಸೇರಿ ವಿವಿಧ ಭತ್ತದ ತಳಿಗಳನ್ನು ನಾಟಿ ಮಾಡಿದ್ದಾರೆ. ಸತತ ಮಳೆ ಹಾಗೂ ಭತ್ತಕ್ಕೆ ಬಂದ ರೋಗದ ಪರಿಣಾಮ ಬಡ್ಡೆ ಸರಿಯಾಗಿ ವಿಸ್ತರಣೆಯಾಗಿಲ್ಲ. ಇದರಿಂದಅತೀಯಾದ ರಸಗೊಬ್ಬರ ಮತ್ತು ಕ್ರಿಮಿನಾಶ ಸಿಂಪರಣೆ ಮಾಡಿ ರೈತರು ಅಧಿಕ ಖರ್ಚು ಮಾಡಿದರೂ ಎಕರೆಗೆ 35 ಕ್ವಿಂಟಲ್‌ ಭತ್ತದ ಇಳುವರಿ ಬರುತ್ತಿದ್ದು, ರೈತ ಖರ್ಚು ಮಾಡಿದ ಹಣ ವಾಪಸ್‌ ಬರುತ್ತಿಲ್ಲ.

ಭತ್ತಕ್ಕೆ ಹೊಸಬಗೆಯ ರೋಗ: ವಿಪರೀತ ಮಳೆಯ ಪರಿಣಾಮ ಭತ್ತದ ಬೆಳೆಗೆ ಕಣೆಹುಳು ರೋಗ, ಬಡ್ಡೆ ಕೊಳೆ ರೋಗ ವೈರಸ್‌ ರೋಗ ಹೀಗೆ ಹಲವುರೋಗಗಳು ಬಂದ ಪರಿಣಾಮ ಭತ್ತಕ್ಕೆ ಟಿಸಿಲುಹೊಡೆದೇ ಇರುವುದು ಇಳುವರಿ ಕಡಿಮೆಯಾಗಲು ಪ್ರಮುಖ ಕಾರಣವಾಗಿದೆ. ರೋಗ ತಡೆಯಲು ರೈತರು ದುಬಾರಿಯ ಕ್ರಿಮಿನಾಶಕ ಸಿಂಪರಣೆ ಮಾಡಿ ಅಧಿಕ ಖರ್ಚು ಮಾಡಿದ್ದಾರೆ.

ಕಡಿಮೆ ಇಳುವರಿ: ಅಚ್ಚುಕಟ್ಟು ಪ್ರದೇಶದಲ್ಲಿ ಮುಂಗಾರು ಹಂಗಾಮಿನಲ್ಲಿ ಎಕರೆಗೆ 40-45(75ಕೆಜಿ ಭರ್ತಿ) ಕ್ವಿಂಟಲ್‌ ಭತ್ತದ ಇಳುವರು ಬರುತ್ತಿತ್ತು. ಈ ಭಾರಿ ಕೇವಲ 30-35 ಕ್ವಿಂಟಲ್‌ ಇಳುವರಿ ಬರುತ್ತಿದ್ದು, ಇದರಿಂದ ರೈತರು ತೀವ್ರ ನಷ್ಟ ಅನುಭವಿಸುವಂತಾಗಿದೆ. ಹೆಚ್ಚಾಗಿ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ಮಾಡುವ ರೈತರಿದ್ದು, ಭೂಮಿಯ ಮಾಲೀಕನಿಗೆ 12-15 ಚೀಲ ಭತ್ತ ಗುತ್ತಿಗೆ ಕೊಡಬೇಕಿದೆ. ಸ್ವಂತ ಭೂಮಿ ಇರುವ ರೈತರು ನಷ್ಟ ಭರಿಸುವ ಶಕ್ತಿ ಹೊಂದಿದ್ದು, ಗುತ್ತಿಗೆ ಮಾಡುವ ರೈತರಿಗೆ ತೊಂದರೆಯಾಗಿದೆ.

ಭತ್ತದ ಖರೀದಿಗೆ ಬಾರದ ವ್ಯಾಪಾರಿಗಳು: ಕೇಂದ್ರ ಸರಕಾರ ಭತ್ತದ ರಫ್ತು ನಿಷೇಧ ಮಾಡಿರುವುದರಿಂದ ಕಳೆದ ಒಂದು ವರ್ಷದಿಂದ ಭತ್ತಕ್ಕೆ ಹೆಚ್ಚಿನ ಬೆಲೆ ಸಿಗುತ್ತಿಲ್ಲ. ಇದರಿಂದಾಗಿ ವ್ಯಾಪಾರಿಗಳು ಭತ್ತವನ್ನು ಖರೀದಿಸಲು ಮುಂದೆ ಬರುತ್ತಿಲ್ಲ. ಸದ್ಯಕ್ವಿಂಟಲ್‌(75ಕೆಜಿ) ಭತ್ತಕ್ಕೆ 900-950 ರೂ. ದರ ಇದ್ದು, ಕೇಂದ್ರ ಸರಕಾರದ ಬೆಂಬಲ(ಎಂಎಸ್‌ಪಿ) ಬೆಲೆಗಿಂತ 300 ರೂ. ಕಡಿಮೆ ಇದ್ದು ರೈತರು ತಾವು ಬೆಳೆದ ಭತ್ತವನ್ನು ಖರೀದಿ ಕೊಡಲಾಗದೇ ಸಂಕಷ್ಟ ಎದುರಿಸುತ್ತಿದ್ದಾರೆ.

‌ಸತತ ಮಳೆ ಪರಿಣಾಮ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಈ ಭಾರಿ ಭತ್ತದ ಬೆಳೆಯ ಇಳುವರಿ ಕಡಿಮೆಯಾಗಿದೆ. ಕಳೆದ ವರ್ಷದ ಭತ್ತಕ್ಕೆ ಸೂಕ್ತ ದರ ಸಿಗದೇ ಹೊಸ ಭತ್ತಕ್ಕೆ ವೈಜ್ಞಾನಿಕ ಬೆಲೆ ಸಿಗುವುದು ಅಸಾಧ್ಯವಾಗಿದೆ.ಕೇಂದ್ರ ಸರಕಾರ ಭತ್ತದ ರಫು¤ ಮಾಡುವುದನ್ನು ನಿಷೇಧ ಮಾಡಿರುವುದು ಭತ್ತದ ಬೆಲೆ ಕುಸಿಯಲು ಪ್ರಮುಖ ಕಾರಣವಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರ ರೈತರು ಬೆಳೆದ ಭತ್ತವನ್ನು ವೈಜ್ಞಾನಿಕ ಬೆಲೆ ನೀಡಿ ಖರೀದಿಸಬೇಕಿದೆ.  ಮೋರಿ ದುರುಗಪ್ಪ, ರೈತ ಹೊಸಳ್ಳಿ

 

-ಕೆ. ನಿಂಗಜ್ಜ

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.