ಗಂಗಾವತಿ: ಗಾಳಿ-ಮಳೆ; ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತ
Team Udayavani, Aug 2, 2022, 9:48 AM IST
ಗಂಗಾವತಿ: ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಗಿಡ ಮರಗಳು ವಾಲುತ್ತಿದ್ದು, ಇದರಿಂದ ರಸ್ತೆ ಅಕ್ಕ-ಪಕ್ಕದಲ್ಲಿರುವ ವಿದ್ಯುತ್ ಕಂಬ ಹಾಗೂ ತಂತಿಗಳ ಮೇಲೆ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡು ರಾತ್ರಿಯಿಡೀ ವಿದ್ಯುತ್ ಇಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ.
ಸೋಮವಾರ ರಾತ್ರಿಯಿಂದ ಆರಂಭವಾಗಿರುವ ಮಳೆ ಮಂಗಳವಾರ ಬೆಳಿಗ್ಗೆ 9 ಗಂಟೆಯವರೆಗೂ ಮುಂದುವರಿದಿದೆ. ಇದರಿಂದ ಬಹುತೇಕ ತಗ್ಗು ಪ್ರದೇಶಗಳಿಗೆ ಮತ್ತು ರಸ್ತೆ ಮೇಲೆ ಮಳೆ ನೀರು ಹರಿಯುತ್ತಿದೆ. ಇದರಿಂದ ರಸ್ತೆ ಬದಿಯಲ್ಲಿರುವ ಗಿಡ ಮರಗಳ ಕೆಳಗಿನ ಮಣ್ಣು ಸರಿದು ಮರಗಳು ಧರೆ ಉರುಳುತ್ತಿವೆ. ವಿದ್ಯುತ್ ಕಂಬ ತಂತಿಗಳು ನೆಲಕ್ಕೆ ಬಿದ್ದಿತ್ತು ಇದರಿಂದ ಜೆಸ್ಕಾಂನವರು ವಿದ್ಯುತ್ ಸಂಪರ್ಕ ಕಡಿತ ಮಾಡಿ ಆಗುವ ಅಪಾಯವನ್ನು ತಪ್ಪಿಸಿದ್ದಾರೆ.
ಗಂಗಾವತಿ ನಗರದ 25ನೇ ವಾರ್ಡ್ ನೀಲಕಂಠೇಶ್ವರ ಕ್ಯಾಂಪ್ ನಲ್ಲಿ ಮರಗಳು ನೆಲಕ್ಕೆ ಉರುಳಿದ್ದು, ಇದರಿಂದ ಈ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಬೆಳ್ಳಂಬೆಳಿಗ್ಗೆ ಜೆಸ್ಕಾಂ ಸಿಬ್ಬಂದಿಯವರು ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಿ ಗಿಡ ಮರಗಳನ್ನು ಕಡಿದು ವಿದ್ಯುತ್ ತಂತಿ ಮತ್ತು ಕಂಬಗಳ ಜೋಡಿಸುವ ಕಾರ್ಯ ಮಾಡುತ್ತಿದ್ದಾರೆ. ಈ ಮಧ್ಯೆ ಮಳೆಯ ಕಾರಣಕ್ಕಾಗಿ ಜಿಲ್ಲಾಡಳಿತ ಅಂಗನವಾಡಿ, ಶಾಲಾ ಕಾಲೇಜುಗಳಿಗೆ 1 ದಿನದ ರಜೆ ಘೋಷಣೆ ಮಾಡಿದೆ .ಜನತೆ ಮಳೆಯಿಂದಾಗಿ ಮನೆಯಿಂದ ಹೊರಗೆ ಬರಲು ಆಗದ ವಾತಾವರಣವಿದೆ.
ಕಳೆದ 20 ದಿನಗಳಿಂದ ಪ್ರತಿನಿತ್ಯವೂ ಮಳೆ ಬರುತ್ತಿರುವುದರಿಂದ ಇಡೀ ಭೂ ಪ್ರದೇಶ ಜಲಮಯವಾಗಿದೆ. ಗಂಗಾವತಿ ನಗರದ 35ನೇ ವಾರ್ಡ್ ಗಳ ತಗ್ಗು ಪ್ರದೇಶದಲ್ಲಿ ಮತ್ತು ನೀಲಕಂಠೇಶ್ವರ ಕ್ಯಾಂಪ್ ನ ಸರ್ಕಾರಿ ಬಾಲಕಿಯರ ಶಾಲೆ, ಜೂನಿಯರ್ ಕಾಲೇಜ್ ಮತ್ತು ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಮಳೆ ನೀರಿನಿಂದ ಭರ್ತಿಯಾಗಿದೆ .
ಅದರ ಜೊತೆಗೆ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಪುನಃ ಬೃಹತ್ ಗಾತ್ರದ ವಾಹನಗಳಿಗೆ ಕಂಪ್ಲಿ ಸೇತುವೆ ಮೇಲೆ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಗಂಗಾವತಿಯ ಮಧ್ಯದಲ್ಲಿರುವ ರಸ್ತೆಯನ್ನು ಬಳಸಿಕೊಂಡು ಬೃಹತ್ ವಾಹನಗಳು ಕಡೆಬಾಗಿಲು ಬುಕ್ಕಸಾಗರ ಸೇತುವೆ ಮುಖಾಂತರ ಹೊಸಪೇಟೆ ಮತ್ತು ಬಳ್ಳಾರಿಯನ್ನು ಸೇರುತ್ತಿವೆ.
ಕುಂಭ ದ್ರೋಣ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು ತಗ್ಗು ಪ್ರದೇಶದಲ್ಲಿ ನೀರು ಬೃಹತ್ ಸಾಗರದಲ್ಲಿ ಹರಿಯುತ್ತಿದೆ .ನಗರಸಭೆ ಸಿಬ್ಬಂದಿಯವರು ಜೆಸ್ಕಾಂ ಸಿಬ್ಬಂದಿಯವರು ಮತ್ತು ಕಂದಾಯ ಇಲಾಖೆ ಸಿಬ್ಬಂದಿಯವರು ಮಳೆಯ ನಡುವೆಯೂ ಜನವಸತಿ ಪ್ರದೇಶದಲ್ಲಿ ಆಗಿರುವ ಅನಾಹುತ ತಪ್ಪಿಸಲು ಕೆಲಸ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ