ಗಾಳಿ-ಮಳೆಗೆ ಕೊಚ್ಚಿ ಹೋದ ಒಣಗಲು ಹಾಕಿದ್ದ ಭತ್ತ
Team Udayavani, Apr 30, 2021, 7:55 PM IST
ಕಾರಟಗಿ: ಪಟ್ಟಣದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದ್ದು, ಒಣಗಿಸಲು ಹಾಕಿದ ಭತ್ತದ ರಾಶಿ ಮಳೆ ನೀರಿಗೆ ತೇಲಿ ಹೋಗಿವೆ.
ಪಟ್ಟಣದಲ್ಲಿ ಗುರುವಾರ ಸಂಜೆ ಕೆಲಕಾಲ ಮಳೆ ಸುರಿಯಿತು. ಹೊರವಲಯದಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ಎಪಿಎಂಸಿ ಯಾರ್ಡ್ನಲ್ಲಿ ಒಣಗಿಸಲು ಹಾಕಿದ ಭತ್ತದ ರಾಶಿಗಳು ಮಳೆ ನೀರಿಗೆ ತೇಲಿ ಹೋಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಆಲಿಕಲ್ಲು ಮಳೆಯಿಂದಾಗಿ ಕಟಾವು ಮಾಡದ ಭತ್ತದ ಬೆಳೆ ನೆಲಕಚ್ಚಿದೆ. ಏಕಾಏಕಿ ಸುರಿದ ಮಳೆಯಿಂದ ರೈತರು ಕಂಗಾಲಾಗಿದ್ದಾರೆ.
ಭತ್ತದ ನಾಟಿಯಿಂದ ಹಿಡಿದು ಕಟಾವುವರೆಗೂ ಎಕರೆಗೆ 30 ಸಾವಿರಕ್ಕೂ ಹೆಚ್ಚು ಹಣ ವ್ಯಯಿಸಿಬೇಕು. ಇನ್ನೇನು ಭತ್ತ ಕಟಾವು ಮಾಡಬೇಕು ಎನ್ನುವಷ್ಟರಲ್ಲಿ ಇಂತಹ ಆಪತ್ತು ಬಂದೆರಗಿದೆ. ಭತ್ತ ಒಣಗಿಸಲು ಹಾಕಿದ ರೈತರ ಸಂಕಷ್ಟ ಹೇಳತೀರದು. ಭತ್ತದ ರಾಶಿ ಕಣ್ಣೆದುರಿಗೆ ನೀರುಪಾಲಾಗುವುದನ್ನು ಕಂಡು ರೈತರು ಕಣ್ಣೀರಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!