ಗಂಗಾವತಿ-ಕಂಪ್ಲಿ ಸೇತುವೆ ಜಲಾವೃತ,ರಸ್ತೆ ಸಂಪರ್ಕ ಸಂಪೂರ್ಣ ಕಡಿತ
Team Udayavani, Aug 11, 2019, 10:41 AM IST
ಕೊಪ್ಪಳ : ಕಳೆದ ಕೆಲ ದಿನಗಳಿಂದ ಕರುನಾಡಿನದ್ಯಂತ ಭಾರೀ ಮಳೆಯಾಗುತ್ತಿದ್ದು, ಎಲ್ಲೆಡೆಯೂ ಪ್ರವಾಹ ಪರಿಸ್ಥಿತಿಯಲ್ಲಿ ಜನ ತತ್ತರಿಸುತ್ತಿದ್ದಾರೆ.ತಾಲೂಕಿನ ಗಂಗಾವತಿ-ಕಂಪ್ಲಿ ಸೇತುವೆ ಉಕ್ಕಿ ಹರಿಯುತ್ತಿದ್ದು, ಜಲಾವೃತಗೊಂಡಿರುವುದು ಜನರಲ್ಲಿ ಆತಂಕ ಮನೆಮಾಡಿದೆ.
ಶನಿವಾರ ತಡರಾತ್ರಿ ತುಂಗಭದ್ರಾ ಡ್ಯಾಂನಿಂದ ಲಕ್ಷಕ್ಕೂ ಅಧಿಕ ಪ್ರಮಾಣದ ಕ್ಯೂಸೆಕ್ ನೀರು ಬಿಟ್ಟ ಹಿನ್ನಲೆ ಗಂಗಾವತಿ-ಕಂಪ್ಲಿ ಸೇತುವೆ ಸಂಪೂರ್ಣ ಜಲವೃತಗೊಂಡಿದೆ. ಪ್ರವಾಹ ಭೀತಿಯಲ್ಲಿ ಜನ ಸುರಕ್ಷಿತ ಪ್ರದೇಶದತ್ತ ಧಾವಿಸುತ್ತಿದ್ದಾರೆ.ಮಳೆಯಿಂದ ನಗರದ ರಸ್ತೆಗಳು ನೀರಿನಿಂದ ಆವೃತವಾಗಿವೆ.ಆಯಾ ಪ್ರದೇಶಕ್ಕೆ ಹೋಗುವ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಊರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಂಗುರ ಸಾರಿ ಎಚ್ಚರಿಕೆ ಸಂದೇಶಗಳನ್ನು ರವಾನಿಸಲಾಗಿದೆ.ಮಳೆಯಿಂದ ಶ್ರೀಕೃಷ್ಣ ದೇವರಾಯ ಸಮಾಧಿಯ ಮಾರ್ಗ ಜಲಾವೃತವಾಗಿದ್ದು ,ಋಷಿಮುಖ ಪರ್ವತಕ್ಕೆ ಹೋಗುವ ರಸ್ತೆ ಸಂಪೂರ್ಣ ಕಡಿತಗೊಂಡಿದೆ. ಭೀತಿ ಸ್ಥಳದಲ್ಲಿ ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳ ಪಡೆ ನಿಯೋಜನೆಗೊಂಡು, ಸೇತುವೆ ಮಾರ್ಗದ ಸಂಚಾರಕ್ಕೆ ಅವಕಾಶ ನೀಡದೆ ಜನರ ಸುರಕ್ಷಣೆಯಲ್ಲಿ ನಿರತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು