ಕೋವಿಡ್ ವಾರಿಯರ್ಸ್ಗೆ ನೆರವಾಗಿ
Team Udayavani, Aug 11, 2020, 10:06 AM IST
ಸಾಂದರ್ಭಿಕ ಚಿತ್ರ
ಕಾರಟಗಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಭಾರತ ವಿದ್ಯಾರ್ಥಿ ಫೆಡರೇಷನ್, ಅಖೀಲ ಭಾರತ ಕೃಷಿ ಫೆಡರೇಷನ್ ಸಂಘಟನೆ ಸದಸ್ಯರು ಸೋಮವಾರ ತಹಶೀಲ್ದಾರ್ ಕಚೇರಿಯಲ್ಲಿ ಮನವಿ ಸಲ್ಲಿಸಿದರು.
ವಿವಿಧ ಸಂಘಟನೆಗಳ ಪ್ರಮುಖರು ಮಾತನಾಡಿ, ಕೋವಿಡ್-19 ಪಿಡುಗು ದೇಶದಲ್ಲಿನ ಹಲವಾರು ರೈತರು, ಕೃಷಿಕೂಲಿಕಾರ್ಮಿಕರು ಸೇರಿದಂತೆ ಎಲ್ಲ ವ್ಯಾಪಾರ ಉದ್ಯೋಗದ ಮೇಲು ಬಿರುಗಾಳಿ ಬೀಸಿದಂತಾಗಿ ಜನಜೀವನ ದುಸ್ತರಗೊಳಿಸಿದೆ. ಅಲ್ಲದೆ ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕಠಿಣ ಲಾಕ್ಡೌನ್ ಹೇರಿದ್ದರಿಂದ ದುಡಿಯುವ ಜನರನ್ನು ಕೂಡ ತೀವ್ರ ಆರ್ಥಿಕ ಒತ್ತಡಕ್ಕೆ ಸಿಲುಕಿಸಿದೆ. ಇದರಿಂದಾಗಿ ದೇಶದ ವಿವಿಧ ಕೆಲಸ ಕಾರ್ಯ ನಿರ್ವಹಿಸುವ ಕೂಲಿಕಾರರು, ಕಾರ್ಮಿಕರು, ಹಲವಾರು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಸರಕಾರ ಕೂಡ ಜನತೆ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿಲ್ಲ. ಕೂಲಿಕಾರ ಕುಟುಂಬಗಳಿಗೆ, ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸುವಲ್ಲಿಯೂ ನೀರ್ಲಕ್ಷ್ಯ ತೋರಿದೆ.
ಅಲ್ಲದೆ ಹಲವಾರಿ ರೀತಿಯ ಕಾನೂನು ಬದಲಾವಣೆ ಮಾಡುವ ಮೂಲಕ ತಿದ್ದುಪಡಿ ಜಾರಿಗೆ ತಂದು ತೀವ್ರ ಸಂಕಷ್ಟಕ್ಕೆ ದೂಡಿದೆ. ಆ. 10ರಂದು ಚಾರಿತ್ರಿಕ ಕ್ವಿಟ್ ಇಂಡಿಯಾ ದಿನಾಚರಣೆ ಸಂಸ್ಮರಣೆ ಅಂಗವಾಗಿ ಆ. 10ರಂದು ಭಾರತ ರಕ್ಷಿಸಿ ಎಂಬ ಘೋಷಣೆಯೊಂದಿಗೆ ಬೇಡಿಕೆಗಳಿಗೆ ಒತ್ತಾಯಿಸಿ ಹೋರಾಟ ನಡೆಸಿದ್ದೇವೆ. ನಮ್ಮ ಹೋರಾಟ ಬೇಡಿಕೆಗಳ ಬಗ್ಗೆ ಕೇಂದ್ರ ಸರಕಾರ ಪಾರ್ಲಿಮೆಂಟ್ ಅಧಿವೇಶನ ಹಾಗೂ ರಾಜ್ಯ ಸರಕಾರ ವಿಧಾನಸಭೆ ಅಧಿವೇಶನ ಕರೆದು ಚರ್ಚಿಸಿ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕು ಎಂದು ಒತ್ತಾಯಿಸಿ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಕಚೇರಿ ಶಿರಸ್ತೇದಾರ ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು.
ಸಂಘಟನೆಗಳ ಪ್ರಮುಖರು, ಕೂಲಿಕಾರ ಸಂಘದ ಅಧ್ಯಕ್ಷ ಹನುಮಂತಪ್ಪ, ಸಿಐಟಿಯು ಅಧ್ಯಕ್ಷೆ ಅಮರಮ್ಮ, ಅಂಗನವಾಡಿ ಶಿಕ್ಷಕಿಯರಾದ ಗಂಗಮ್ಮ, ಲಕ್ಷ್ಮೀ ಸಜ್ಜನ, ಸುರೇಖಾ, ದುರ್ಗಾಬಾಯಿ, ಕಾಸೀಮ್ ಸಾಬ್, ಹೇಮಣ್ಣ, ಯಲ್ಲಪ್ಪ, ಶರಣಮ್ಮ, ಭಾಗ್ಯಲಕ್ಷ್ಮೀ, ಕನಕರಾಯ, ಹುಲಿಗೆಮ್ಮ, ತಾಯಮ್ಮ, ಜ್ಯೋತಿ, ಶೋಭಾ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…