ಕಿಷ್ಕಿಂದಾ ಅಂಜನಾದ್ರಿಗೆ ಹೈಕೋಟ್ ಸಿಜೆ ರಿತುರಾಜ್ ಆವಸ್ತಿ ಕುಟುಂಬ ಸಮೇತ ಭೇಟಿ
Team Udayavani, Jun 25, 2022, 6:36 PM IST
ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ರಿತುರಾಜ್ ಆವಸ್ತಿ ಕುಟುಂಬ ಸಮೇತರಾಗಿ ಶನಿವಾರ ಸಂಜೆ ಭೇಟಿ ನೀಡಿದರು.
ಬೆಟ್ಟದ ಕೆಳಗಿನ ಆಂಜನೇಯನ ಮೂರ್ತಿಗೆ ಮೊದಲು ಆವಸ್ತಿ ದಂಪತಿಗಳು ಪೂಜೆ ಮಾಡಿ ನಂತರ ಅಂಜನಾದ್ರಿ ಬೆಟ್ಟದ 575 ಮೆಟ್ಟಿಲುಗಳನ್ನು ಹತ್ತಿ ಆಂಜನೇಯ ಹಾಗೂ ಅಂಜಿನಿ ದೇವಿಯ ದರ್ಶನ ಪಡೆದರು. ನಂತರ ಕುಟುಂಬ ಸದಸ್ಯರೊಂದಿಗೆ ಅಂಜನಾದ್ರಿಯ ಸುತ್ತಲಿನ ಪ್ರಕೃತಿ ವೀಕ್ಷಿಸಿ ಸಂತೋಷದಿಂದ ಪೋಟೋ ತೆಗೆಸಿಕೊಂಡರು.
ಈ ಸಂದರ್ಭದಲ್ಲಿ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರು ಅರುಣಾಂಶುಗಿರಿ, ಎಡಿಸಿ ಎಂ.ಪಿ.ಮಾರುತಿ, ತಹಸೀಲ್ದಾರ್ ಯು.ನಾಗರಾಜ, ಸಿಪಿಐ ಮಂಜುನಾಥ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.
ಝೆಡ್ ಕೆಟಗರಿ ಭದ್ರತೆಯ ಕಾರಣ ಮುಖ್ಯನ್ಯಾಯಮೂರ್ತಿಗಳು ಬಂದು ಹೋಗುವ ತನಕ ಸಾರ್ವಜನಿಕರಿಗೆ ಅಂಜನಾದ್ರಿಯನ್ನು ಹತ್ತಲು ಪೊಲೀಸ್ ಇಲಾಖೆ ಅವಕಾಶ ನೀಡಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!